ಸಾಗರ: ಗಡಿಬಿಡಿಯಲ್ಲಿ ಬಂದೂಕಿನಿಂದ ಗುಂಡು ಸಿಡಿದು ಬೇಟೆಗಾರ ಬಲಿ
Team Udayavani, Apr 30, 2017, 11:31 AM IST
ಸಾಗರ: ತಾಲೂಕಿನ ಕಾನುಮನೆ ಎಂಬಲ್ಲಿ ಬಂದೂಕಿನಿಂದ ಗುಂಡು ಸಿಡಿದು ಬೇಟೆಗೆ ತೆರಳಿದ್ದ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ.
ಕಾನುಮನೆ ಸತೀಶ್ (35) ಎಂಬಾತ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಗುಂಡು ತಗುಲಿದ ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಪುನುಗಿನ ಬೆಕ್ಕಿನ ಬೇಟೆಗೆಂದು ಐವರು ಸ್ನೇಹಿತರು ಮಾರಕಾಯುಧಗಳೊಂದಿಗೆ ತೆರಳಿದ್ದು , ಈ ವೇಳೆ ಅರಣ್ಯ ಇಲಾಖೆಯ ಜೀಪ್ ಬಂತೆಂದು ಗಡಿಬಿಡಿಯಲ್ಲಿ ಬಂದೂಕನ್ನು ಅಡಗಿಸಿಡಲು ಯತ್ನಿಸಿದ್ದಾರೆ. ಈ ವೇಳೆ ಗುಂಡು ಸಿಡಿದು ಅನಾಹುತ ಸಂಭವಿಸಿದೆ.
ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಉಳಿದವರ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’