ಆಣೆಯ ತಪ್ಪು ಕಾಣಿಕೆ ಸಲ್ಲಿಸಲು ಹಾಲಪ್ಪ ಧರ್ಮಸ್ಥಳಕ್ಕೆ; ಬೇಳೂರು ಅನುಮಾನ

ಅಮಾಯಕರ ಕೈಗೆ ಸ್ಲೇಟ್ ಕೊಟ್ಟಿದ್ದು ಅಮಾನವೀಯ

Team Udayavani, Aug 10, 2022, 6:04 PM IST

1-ssadad

ಸಾಗರ: ಈಗ ಶಾಸಕ ಹಾಲಪ್ಪ ಅವರಿಗೆ ಜ್ಞಾನೋದಯ ಆಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದು ತಪ್ಪಾಗಿದೆ ಎಂಬ ಕಾರಣಕ್ಕೆ ಅವರು ತಪ್ಪುದಂಡ ಸಲ್ಲಿಸಲು ಅಲ್ಲಿಗೆ ಹೋಗಿರಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಬುಧವಾರ ಶಂಕೆ ವ್ಯಕ್ತಪಡಿಸಿದರು.

ಮಲೆನಾಡು ಸಿರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು ಎರಡು ಮೂರು ಬಾರಿ ನಾಟಿ ಮಾಡಿದ್ದು ತೇಲಿಹೋಗಿದೆ. ಈ ಹಂತದಲ್ಲಿ ರೈತರ ಜತೆ ಇರಬೇಕಾದ ಶಾಸಕರು ಟೆಂಪಲ್ ರನ್ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಹೊಸನಗರ, ರಿಪ್ಪನ್‌ಪೇಟೆ, ಸಾಗರದಲ್ಲಿ ಧ್ವಜ ತಯಾರಿ ಸ್ಥಳಕ್ಕೆ ಹೋಗುವುದು, ಧ್ವಜ ತೋರಿಸುವುದು ಅವರ ಕಾಯಕವಾಗಿದೆ. ನನಗೆ ಮಾಹಿತಿಯಿರುವಂತೆ ಅವರು ಒಂದು ಕಡೆ ಮಾತ್ರ ನೆರೆಹಾನಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾನು ಶಾಸಕನಾಗಿದ್ದ ಕಾಲದಲ್ಲಿ ತ್ಯಾಗರ್ತಿಯ ಹೋಬಳಿಯೊಂದರಲ್ಲಿ ನೆರೆ ಹಾವಳಿ ಸಂಭವಿಸಿದಾಗ ವೈಯಕ್ತಿಕವಾಗಿ ಒಂದೇ ದಿನ ಐದು ಲಕ್ಷ ರೂ.ನ್ನು ಸಹಾಯಕ್ಕೆ ವಿನಿಯೋಗಿಸಿದ್ದೆ. ಅವರು ಕೈಯಿಂದಲಂತೂ ಕೊಡುವ ಜಾಯಮಾನದವರಲ್ಲ. ಸರ್ಕಾರದ ಪರಿಹಾರ ಮೊತ್ತಗಳನ್ನು ಕೊಡಿಸಲಿ ಎಂದು ವ್ಯಂಗ್ಯವಾಡಿದರು.

ಮನೆಮನೆ ಮೇಲೂ ರಾಷ್ಟ್ರಧ್ವಜ ಬಿಜೆಪಿ ಚುನಾವಣೆ ಗಿಮಿಕ್. ಹಾಗೇ ಹಾರಿಸುವುದಿದ್ದರೂ ಅಳತೆ ವ್ಯತ್ಯಾಸ, ಅಶೋಕ ಚಕ್ರದ ಸರಿಯಾದ ಚಿತ್ರಣ ಇಲ್ಲದ ಧ್ವಜಗಳನ್ನು ವಿತರಿಸುವುದನ್ನು ಒಪ್ಪಲಾಗದು. ಈಗಲೂ ಆಡಳಿತ ಯಂತ್ರವನ್ನು ಬಳಸಿಕೊಂಡು ತಾಲೂಕಿನಲ್ಲಿ ವಿವಿಧ ಇಲಾಖೆ ಆರ್ಥಿಕ ನೆರವಿನಿಂದ ೭೦ ಸಾವಿರ ಧ್ವಜ ಸಿದ್ಧಪಡಿಸಲಾಗಿದೆ ಎಂಬ ಮಾಹಿತಿಯಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಬಿಜೆಪಿಯವರು ಪಾಲ್ಗೊಂಡಿಲ್ಲ. ತ್ಯಾಗ ಬಲಿದಾನ ಮಾಡಿಲ್ಲ. ಆ ವೇಳೆ ಇವರೆಲ್ಲ ಮನೆಯಲ್ಲಿ ಅಡಗಿ ಕುಳಿತಿದ್ದರು ಎಂದು ಚಾಟಿ ಬೀಸಿದರು.

ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಒಂದೇ ಒಂದು ಕೇಸು ಅಮಾಯಕರ ಮೇಲೆ ಹಾಕಲು ಬಿಟ್ಟಿರಲಿಲ್ಲ. ಆದರೆ ತಾಲೂಕಿನ ಭಾರಂಗಿ ಹೋಬಳಿಯ ಉರುಳುಗಲ್ಲು ಗ್ರಾಮದಲ್ಲಿ ರಸ್ತೆಗೆ ಬಿದ್ದಿದ್ದ ಮರವನ್ನು ಕಡಿದು ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಂಡ ೧೦ಕ್ಕೂ ಹೆಚ್ಚು ಗ್ರಾಮಸ್ಥರ ಮೇಲೆ ಅರಣ್ಯ ಇಲಾಖೆ ನಡೆಸಿರುವ ದೌರ್ಜನ್ಯ ಖಂಡನೀಯ. ಅಮಾಯಕರ ಕೈಗೆ ಸ್ಲೇಟ್ ಕೊಟ್ಟು ಫೋಟೋ ಹೊಡೆಸಿ, ಗಂಧ ಕಳ್ಳತನ ಮಾಡಿದವರಂತೆ ಬಿಂಬಿಸಿದ್ದು ಅಮಾನವೀಯವಾಗಿದೆ. ಈ ರೀತಿಯ ಕೃತ್ಯಗಳಿಂದ ಅಮಾಯಕರಿಗೆ ರಕ್ಷಣೆ ಕೊಡುವ ಶಕ್ತಿ ಈಗಿನ ಶಾಸಕರಿಗಿಲ್ಲ ಎಂದರು.

ತಾಲೂಕು ಕುಡುಕರ ಸಾಮ್ರಾಜ್ಯವಾಗಿದೆ. ಬೆಂಗಳೂರಿನಲ್ಲಿ ತಮ್ಮದೇ ಐದಾರು ಬಾರ್ ಹೊಂದಿರುವ, ತಾಲೂಕಿನ ಹಳ್ಳಿಗಳಲ್ಲೂ ಎಂಎಸ್‌ಐಎಲ್ ಮದ್ಯದಂಗಡಿ ತೆರೆಯಲು ಅವಕಾಶ ಕಲ್ಪಿಸಿರುವ ಶಾಸಕರು ವ್ಯಸನಮುಕ್ತ ಸಮಾಜ ನಿರ್ಮಾಣದ ಜಾಥಾದಲ್ಲಿ ಪಾಲ್ಗೊಂಡಿದ್ದು ಹಾಸ್ಯಾಸ್ಪದ ಸಂಗತಿ. ನಗರವ್ಯಾಪ್ತಿಯಲ್ಲಿ ಒತ್ತುವರಿ ತೆರವು ಹೆಸರಿನಲ್ಲಿ ಶಾಸಕ ಹಾಲಪ್ಪ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗಪ್ಪ ಮುಸ್ಲೀಂ ಸಮುದಾಯವನ್ನು ಟಾರ್ಗೆಟ್ ಮಾಡಿ ಹಣ ವಸೂಲಿಗೆ ಇಳಿದಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಮ್ಮದೇ ಕಾರ್ಯಕರ್ತರನ್ನು ರಕ್ಷಣೆ ಮಾಡಲು ವಿಫಲವಾಗಿದೆ. ಶಿವಮೊಗ್ಗದಲ್ಲಿ ನಡೆದ ಹಿಂದೂ ಹರ್ಷ ಹತ್ಯೆ, ಪುತ್ತೂರಿನಲ್ಲಿ ನಡೆದ ಪ್ರವೀಣ್ ನೆಟ್ಯಾರ್ ಹತ್ಯೆಯ ಹೊಣೆ ಹೊತ್ತು ಗೃಹ ಸಚಿವರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಮುಖ್ಯಮಂತ್ರಿಗಳು ಮೃತ ಕುಟುಂಬಕ್ಕೆ ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡುತ್ತಿರುವುದು ಖಂಡನೀಯ. ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷನ ಕುಟುಂಬಕ್ಕೆ ಸ್ವಂತ ಮನೆ ಕಟ್ಟಿಸಿಕೊಡುವ ಜೊತೆಗೆ ಅವರ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡಿ ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಐ.ಎನ್.ಸುರೇಶಬಾಬು, ಗಣಪತಿ ಮಂಡಗಳಲೆ, ಮಹಾಬಲ ಕೌತಿ, ಯಶವಂತ ಪಣಿ, ತಾರಾಮೂರ್ತಿ, ದಿನೇಶ್ ಡಿ., ಅನ್ವರ್ ಭಾಷಾ, ಶ್ರೀನಾಥ್, ನಾರಾಯಣಪ್ಪ, ಸಂತೋಷ್ ಸದ್ಗುರು, ರವಿಕುಮಾರ್, ಶ್ರೀಧರ್ ಪಾಟೀಲ್, ಆನಂದ್ ಭೀಮನೇರಿ, ಕೃಷ್ಣಪ್ಪ ಹಾಜರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.