ಮದ್ಯದಂಗಡಿ ಸ್ಥಳಾಂತರಕ್ಕೆ ಆಗ್ರಹ
Team Udayavani, May 7, 2020, 4:16 PM IST
ಹರಪನಹಳ್ಳಿ: ಮದ್ಯದಂಗಡಿ ಪಟ್ಟಣದ ಹೊರಗಡೆ ಸ್ಥಳಾಂತರಿಸಲು ಮನವಿ ಸಲ್ಲಿಸಿದರು.
ಹರಪನಹಳ್ಳಿ: ಕೊಟ್ಟೂರು ರಸ್ತೆಯಲ್ಲಿರುವ ಎಂಎಸ್ ಐಎಲ್ ಮದ್ಯದಂಗಡಿಯನ್ನು ಪಟ್ಟಣದ ಹೊರಗಡೆಗೆ ಸ್ಥಳಾಂತರಿಸುವಂತೆ ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಅಬಕಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕೊಟ್ಟೂರು ರಸ್ತೆಯಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿ ತೆರೆದಿರುವುದರಿಂದ ಅಕ್ಕ-ಪಕ್ಕದ ಮನೆಯವರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತದೆ. ಮದ್ಯದಂಗಡಿ ಮುಂದೆಯೇ ಅನಾದಿ ಕಾಲದಿಂದಲೂ ಪೂಜಿಸಿಕೊಂಡು ಬಂದಿರುವ ಅಮ್ಮನ ಆಲದ ಮರವಿದೆ. ಹೀಗಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಕುಡುಕರ ಹಾವಳಿಯಿಂದ ವಿಪರೀತ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಮದ್ಯದಂಗಡಿ ಪಟ್ಟಣದ ಹೊರಗೆ ಪ್ರಾರಂಭಿಸುವಂತೆ ಒತ್ತಾಯಿಸಿದರು.
ಪುರಸಭೆ ಸದಸ್ಯರಾದ ಇಂಜತರಿ ಮಂಜುನಾಥ, ಕೌಟಿ ವಾಗೀಶ್, ಜಾವೀದ್, ಶಾನಭೋಗರ ಕಿರಣ್, ಎಚ್. ಎಂ. ಜಗದೀಶ್, ವಿನಯಕ ಭಜಂತ್ರಿ, ನಿವೃತ್ತ ಶಿಕ್ಷಕ ಶಂಕ್ರಪ್ಪ, ಚಂದ್ರಪ್ಪ ಗಾಂದಿ, ಗೊಂಗಡಿ ಅನಿಲ್, ಕೌಟಿ ಸುರೇಶ್, ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!