ವರಿಷ್ಠರು ನೀಡುವ ಸೂಚನೆ ಪಾಲಿಸಿ: ಹರತಾಳು ಹಾಲಪ್ಪ


Team Udayavani, Nov 23, 2020, 9:01 PM IST

ವರಿಷ್ಠರು ನೀಡುವ ಸೂಚನೆ ಪಾಲಿಸಿ: ಹರತಾಳು ಹಾಲಪ್ಪ

ಸಾಗರ: ಪಕ್ಷದ ವರಿಷ್ಠರು ನೀಡುವ ಸೂಚನೆಗಳನ್ನು ಪಾಲಿಸಬೇಕು. ಸೂಚನೆ ಪಾಲಿಸುವುದರಲ್ಲಿಯೇ ಪಕ್ಷ, ಸಮೂಹ ಹಾಗೂ ವೈಯಕ್ತಿಕ ಯಶಸ್ಸು ಅಡಗಿರುತ್ತದೆ ಎಂದು ಎಂಎಸ್‌ಐಎಲ್‌ ಅಧ್ಯಕ್ಷ ಹಾಗೂ ಶಾಸಕ ಎಚ್‌. ಹಾಲಪ್ಪ ಹರತಾಳು ತಿಳಿಸಿದರು.

ತಾಲೂಕಿನ ವರದಾಮೂಲದಲ್ಲಿ ಬಿಜೆಪಿ ಗ್ರಾಮಾಂತರ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನಗಳ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿಸಮಾರೋಪ ಭಾಷಣ ಮಾಡಿದ ಅವರು, ಯಾರು ಪಕ್ಷದ ಸೂಚನೆಗಳನ್ನಪರಿಪಾಲಿಸುತ್ತಾರೋ ಅವರ ರಾಜಕೀಯ ಭವಿಷ್ಯ ಸಹ ಯಶಸ್ವಿಯಾಗುತ್ತದೆ ಎಂದು ಹೇಳಿದರು.

ಬಿಜೆಪಿ ಅತ್ಯಂತ ಸದೃಢವಾಗಿ ದೇಶಾದ್ಯಂತಬೆಳೆಯಲು ಇಂತಹ ಪ್ರವರ್ಗಗಳ ಮೂಲಕ ಪಡೆಯುವ ಬೌದ್ಧಿಕ ಶಿಕ್ಷಣ ಪ್ರಮುಖ ಪಾತ್ರವಹಿಸಿದೆ. ಅನೇಕ ಹಿರಿಯರು ರಾಷ್ಟ್ರ ನಿರ್ಮಾಣಉದ್ದೇಶದಿಂದ ಬಿಜೆಪಿಯನ್ನು ಕಟ್ಟಿದ್ದಾರೆ. ಅವರದ್ದು ಕೆಲವು ಕನಸುಗಳು ಇರುತ್ತವೆ. ಆ ಕನಸು ಸಾಕಾರಗೊಳಿಸುವ ಹೊಣೆಗಾರಿಕೆ ನಮ್ಮ ಮೇಲೆ ಇದೆ. ರಾಷ್ಟ್ರ ನಿರ್ಮಾಣ ಉದ್ದೇಶವಿದ್ದರೂಕೆಲವೊಂದಿಷ್ಟು ಯೋಜನೆಗಳನ್ನು ಮಾಡುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಬಿಜೆಪಿ ಎರಡು ಸ್ಥಾನದಿಂದ ಇದೀಗ ಅತಿ ದೊಡ್ಡ ಪಕ್ಷವಾಗಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದೆ. ಜೊತೆಗೆ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ಹೊಂದಿದೆ ಎಂದರು.

ಪ್ರವರ್ಗದ ಮೂಲ ಉದ್ದೇಶ ಕಾರ್ಯಕರ್ತರಿಗೆ ಸಾಮಾನ್ಯ ರಾಜಕೀಯ ಜ್ಞಾನ ಕಲ್ಪಿಸುವುದು ಹಾಗೂ ಬಿಜೆಪಿ ಬೆಳೆದು ಬಂದ ರೀತಿಯನ್ನು ತಿಳಿಸಿಕೊಡುವುದಾಗಿರುತ್ತದೆ. ಮುಂದೆ ಗ್ರಾಪಂ ಸೇರಿದಂತೆ ಬೇರೆ ಬೇರೆ ಚುನಾವಣೆಗಳು ಬರುತ್ತವೆ. ಇಂತಹ ಸಂದರ್ಭದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವು ಯಾವ ರೀತಿ ಪ್ರಯತ್ನ ಮಾಡಬೇಕು. ಸೂಚನೆಯನ್ನು ಪಾಲಿಸುವುದರಲ್ಲಿಯೇ ನಮ್ಮ ಗೆಲುವು ಅಡಗಿರುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮಾಂತರ ಬಿಜೆಪಿ ಘಟಕದ ಅಧ್ಯಕ್ಷ ಲೋಕನಾಥ್‌ ಬಿಳಿಸಿರಿ, ಅಭ್ಯಾಸ ವರ್ಗದಲ್ಲಿ ಪಾಲ್ಗೊಳ್ಳುವ ಶಿಬಿರಾರ್ಥಿಗಳು ರಾಜಕೀಯ ಪ್ರವೇಶ, ಸಾಮಾಜಿಕ ಜೀವನಹಾಗೂ ಪಾರದರ್ಶಕ ನಡೆನುಡಿ, ರಾಷ್ಟ್ರೀಯತೆ ಕುರಿತು ಅರಿತುಕೊಳ್ಳಲು ಸಾಧ್ಯವಿದೆ. ಬಿಜೆಪಿ ಕೇವಲ ಅಧಿಕಾರ ಪಡೆಯಲು ಇರುವ ಪಕ್ಷವಲ್ಲ. ಬಿಜೆಪಿಯ ಪ್ರಮುಖ ಉದ್ದೇಶ ಸಾಮಾಜಿಕ ಹಿತಚಿಂತನೆ ಹಾಗೂ ಸಮೂಹ ಜಾಗೃತಿಯಾಗಿದೆ. ಎರಡು ದಿನಗಳ ಅಭ್ಯಾಸ ವರ್ಗವು ಅಭೂತಪೂರ್ವ ಯಶಸ್ಸು ಗಳಿಸಲು ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ. ಅಭ್ಯಾಸ ವರ್ಗದಲ್ಲಿ ಪಡೆದಿರುವ ಮಾಹಿತಿಯನ್ನು ಉಪಯೋಗಿಸಿಕೊಂಡು ಬೂತ್‌ಮಟ್ಟದಲ್ಲಿ ತಮ್ಮ ಅನುಭವವನ್ನು ಹಂಚುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಯದರ್ಶಿ ಕುಪೇಂದ್ರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಆರ್‌. ಗಣೇಶ್‌ ಪ್ರಸಾದ್‌, ಭೀಮನಕೋಣೆ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ವ.ಶಂ. ರಾಮಚಂದ್ರ ಭಟ್‌, ಎಪಿಎಂಸಿ ಅಧ್ಯಕ್ಷ ಚೇತನರಾಜ್‌ ಕಣ್ಣೂರು ಇದ್ದರು.ದೇವೇಂದ್ರಪ್ಪ ಸ್ವಾಗತಿಸಿದರು. ಗೌತಮ್‌ ಕೆ.ಎಸ್‌. ವಂದಿಸಿದರು. ಹು.ಭಾ. ಅಶೋಕ್‌ ನಿರೂಪಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.