ಅತಿವೃಷ್ಟಿಯ ಕತ್ತಲು ಓಡಿಸಿದ ಮೆಸ್ಕಾಂ!

•ಸಿಬ್ಬಂದಿಯಿಂದ ಅವಿರತ ಶ್ರಮ•12 ದಿನಗಳಲ್ಲಿ 714 ಹಳ್ಳಿಗಳಲ್ಲಿ ಮತ್ತೆ ಬೆಳಕು

Team Udayavani, Aug 20, 2019, 2:58 PM IST

sm-tdy-2

ಶಿವಮೊಗ್ಗ: ಹಾನಿಗೊಳಗಾದ ವಿದ್ಯುತ್‌ ಕಂಬಗಳನ್ನು ದುರಸ್ತಿಗೊಳಿಸುತ್ತಿರುವ ಮೆಸ್ಕಾಂ ಸಿಬ್ಬಂದಿ.

ಶಿವಮೊಗ್ಗ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಕಳೆದ 12 ದಿನಗಳಿಂದ ಕತ್ತಲಲ್ಲಿ ಮುಳುಗಿದ್ದ ನೂರಾರು ಹಳ್ಳಿಗಳು ಮತ್ತೆ ಬೆಳಕು ಕಾಣುತ್ತಿವೆ. ವಿದ್ಯುತ್‌ ಸಂಪರ್ಕ ಕಡಿತಗೊಂಡು ಹೈರಾಣಾಗಿದ್ದ ನೂರಾರು ಹಳ್ಳಿಗಳಿಗೆ ಮೆಸ್ಕಾಂನ ಅವಿರತ ಶ್ರಮದಿಂದ ಮತ್ತೆ ‘ಪವರ್‌’ ಸಿಕ್ಕಿದೆ.

ಆಗಸ್ಟ್‌ 3ರಿಂದ 12ರವರೆಗೆ ಸುರಿದ ಭಾರಿ ಮಳೆಯಿಂದ ಇಡೀ ಜಿಲ್ಲೆ ಅಸ್ತವ್ಯಸ್ತಗೊಂಡಿತ್ತು. ರಸ್ತೆ, ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಜನ ಮೊಬೈಲ್ನಲ್ಲಿ ಚಾರ್ಜ್‌, ಟಿವಿ ಇಲ್ಲದೇ ಹೊರಜಗತ್ತಿನ ಸಂಪರ್ಕ ಕಳೆದುಕೊಂಡಿದ್ದರು. ಎಡಬಿಡದೆ ಸುರಿಯುತ್ತಿದ್ದ ಮಳೆಯು ಹೊರಹೋಗಲು ಆಗದೆ, ಒಳಗೆ ಕೂರಲೂ ಆಗದಂತೆ ಮಾಡಿತ್ತು. ಮೆಸ್ಕಾಂ ಇಲಾಖೆ ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಕೆಲಸ ಮಾಡಿ, ಕಗ್ಗತ್ತಲಲ್ಲಿ ಮುಳುಗಿದ್ದ ಗ್ರಾಮಗಳಿಗೆ ಬೆಳಕು ನೀಡಿದ್ದಾರೆ.

ಕತ್ತಲಲ್ಲಿ 720 ಗ್ರಾಮ: ನಗರ ಹಾಗೂಗ್ರಾಮಾಂತರ ಪ್ರದೇಶ ಸೇರಿ ಜಿಲ್ಲೆಯ 720 ಗ್ರಾಮಗಳು ವಿದ್ಯುತ್‌ ಸಂಪರ್ಕ ಕಳೆದುಕೊಂಡಿದ್ದವು. ಮರಗಳು ಉರುಳಿ, ಗುಡ್ಡ ಕುಸಿದು ಕಂಬಗಳು ನೆಲಕ್ಕೆ ಉರುಳಿದ್ದವು. ವಿದ್ಯುತ್‌ ಕಂಬಗಳು ಮುರಿದು ಹೋಗಿದ್ದರಿಂದ ಹೊಸ ಕಂಬ ಹಾಕುವುದು ಅನಿವಾರ್ಯವಾಗಿತ್ತು. ಕಡಿದಾದ ರಸ್ತೆ, ಹರಿಯುವ ನೀರು , ಕೆಸರು, ಗುಡ್ಡ ಕುಸಿದ ಪ್ರದೇಶಗಳಿಗೆ ಕಂಬ ಸಾಗಿಸುವುದು ಕಷ್ಟದ ಕೆಲಸವಾಗಿತ್ತು. ಕಂಬ ಸಾಗಿಸುವ ಲಾರಿಗಳು ಹೂತುಹೋಗುವ ಸಂಭವ ಹೆಚ್ಚಿದ್ದರಿಂದ ಕಾರ್ಯಾಚರಣೆಗೆ ತೀವ್ರ ತೊಡಕಾಗಿತ್ತು. ಮಳೆ ಕಡಿಮೆಯಾಗುತ್ತಿದ್ದಂತೆ ಮೆಸ್ಕಾಂ ಸಿಬ್ಬಂದಿ ಕೆಲಸ ಆರಂಭಿಸಿದರು. ಆರಂಭದಲ್ಲಿ 400 ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಯಶಸ್ವಿಯಾದರು. ಹೊಸನಗರ, ತೀರ್ಥಹಳ್ಳಿ ತಾಲೂಕಿನ ಕೆಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದು ಅಸಾಧ್ಯವಾಗಿತ್ತು. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿತ್ತು. ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಎಲ್ಲ ಸವಾಲುಗಳನ್ನು ಮೀರಿ ಮೆಸ್ಕಾಂ ಆ.18ರೊಳಗೆ 714 ಗ್ರಾಮಗಳಿಗೆ ವಿದ್ಯುತ್‌ ಕೊಡಲು ಯಶಸ್ವಿಯಾಗಿದೆ. ಅತೀ ಹೆಚ್ಚು ಮಳೆ ಬೀಳುವ ಹೊಸನಗರ, ತೀರ್ಥಹಳ್ಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿತ್ತು. ಹೊಸನಗರದಲ್ಲಿ 130, ತೀರ್ಥಹಳ್ಳಿಯಲ್ಲಿ 85 ಗ್ರಾಮಗಳು ವಿದ್ಯುತ್‌ ಸಂಪರ್ಕದಿಂದ ವಂಚಿತವಾಗಿದ್ದವು. ಅದೇ ರೀತಿ ಶಿವಮೊಗ್ಗ 75, ಶಿಕಾರಿಪುರದ 63 ಗ್ರಾಮಗಳು ಸೇರಿ ಒಟ್ಟು 720 ಗ್ರಾಮಗಳು ಮಳೆರಾಯನ ಆರ್ಭಟಕ್ಕೆ ನಲುಗಿದ್ದವು.

 

•ಶರತ್‌ ಭದ್ರಾವತಿ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.