ಹರ್ಷ ಹತ್ಯೆ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ? ವಿಡಿಯೋ ವೈರಲ್
Team Udayavani, Jul 4, 2022, 4:48 PM IST
ಶಿವಮೊಗ್ಗ : ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ದಾಳಿ ವೇಳೆ ಆರೋಪಿಗಳ ಬಳಿಯಲ್ಲಿ ಮೊಬೈಲ್ ಹಾಗೂ ಇತರ ಉಪಕರಣಗಳು ಪತ್ತೆಯಾಗಿವೆ.
ಪರಪ್ಪನ ಅಗ್ರಹಾರ ಜೈಲ್ ನ ಆಯ್ದ ಸೆಲ್ಗಳ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಆರೋಪಿಗಳ ಸೆಲ್ಗಳ ಮೇಲೂ ದಾಳಿ ಮಾಡಿದಾಗ, ಆರೋಪಿಗಳಿಗೆ ವಿಶೇಷ ಆರೈಕೆ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.
ಹಿಂದೂ ಹರ್ಷನ ಕೊಲೆ ಆರೋಪಿಗಳಾದ ಖಾಸೀಫ್ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿರುವ ಸೆಲ್ ಗಳಲ್ಲಿ ಸೆಲ್ಫಿ ಶೂಟ್ ಮಾಡಿಸಿಕೊಂಡಿದ್ದು, ಜೈಲಿನಲ್ಲಿದ್ದೇ ಆರೋಪಿಗಳಿಂದ ಹಲವರಿಗೆ ವಿಡಿಯೋ ಕಾಲ್ ಮಾಡಲಾಗಿದೆ.
ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿರುವ ವಿಡಿಯೋಗಳು, ಬೇರೆಯದ್ದೆ ರೀತಿಯಲ್ಲಿ ಎಡಿಟ್ ಮಾಡಿ ಲಾಂಗು , ಮಚ್ಚಿನ ಹಾಡುಗಳೊಂದಿಗೆ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಡಲಾಗಿದೆ.
ಮನೆಯವರಿಗೂ ಮೊಬೈಲ್ ತಮ್ಮ ಸೆಲ್ಗೆ ತರಿಸಿಕೊಂಡ ಆರೋಪಿಗಳು ವಿಡಿಯೋ ಕಾಲ್ ಮಾಡಿದ್ದಾರೆ. ವಿಡಿಯೋ ಕಾಲ್ ಮಾಡಿದ್ದು, ಯೋಗಕ್ಷೇಮ ವಿಚಾರಿಸಲು ಈ ರೀತಿ ವ್ಯವಸ್ಥೆ ಕಲ್ಪಿಸಿ ಕೊಟ್ಟಿರುವುದು ಕಾರಾಗೃಹ ವ್ಯವಸ್ಥೆಯ ಬಗ್ಗೆ ಬಲವಾದ ಪ್ರಶ್ನೆಗಳು ಮೂಡಿವೆ.
ಈ ಸಂಬಂಧ ಪರಪ್ಪನ ಅಗ್ರಹಾರದ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಪ್ಪು ಮಾಡಿದ ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
MUST WATCH
ಹೊಸ ಸೇರ್ಪಡೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ