ಹರ್ಷ ಹತ್ಯೆ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ? ವಿಡಿಯೋ ವೈರಲ್
Team Udayavani, Jul 4, 2022, 4:48 PM IST
ಶಿವಮೊಗ್ಗ : ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ದಾಳಿ ವೇಳೆ ಆರೋಪಿಗಳ ಬಳಿಯಲ್ಲಿ ಮೊಬೈಲ್ ಹಾಗೂ ಇತರ ಉಪಕರಣಗಳು ಪತ್ತೆಯಾಗಿವೆ.
ಪರಪ್ಪನ ಅಗ್ರಹಾರ ಜೈಲ್ ನ ಆಯ್ದ ಸೆಲ್ಗಳ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಆರೋಪಿಗಳ ಸೆಲ್ಗಳ ಮೇಲೂ ದಾಳಿ ಮಾಡಿದಾಗ, ಆರೋಪಿಗಳಿಗೆ ವಿಶೇಷ ಆರೈಕೆ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.
ಹಿಂದೂ ಹರ್ಷನ ಕೊಲೆ ಆರೋಪಿಗಳಾದ ಖಾಸೀಫ್ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿರುವ ಸೆಲ್ ಗಳಲ್ಲಿ ಸೆಲ್ಫಿ ಶೂಟ್ ಮಾಡಿಸಿಕೊಂಡಿದ್ದು, ಜೈಲಿನಲ್ಲಿದ್ದೇ ಆರೋಪಿಗಳಿಂದ ಹಲವರಿಗೆ ವಿಡಿಯೋ ಕಾಲ್ ಮಾಡಲಾಗಿದೆ.
ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿರುವ ವಿಡಿಯೋಗಳು, ಬೇರೆಯದ್ದೆ ರೀತಿಯಲ್ಲಿ ಎಡಿಟ್ ಮಾಡಿ ಲಾಂಗು , ಮಚ್ಚಿನ ಹಾಡುಗಳೊಂದಿಗೆ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಡಲಾಗಿದೆ.
ಮನೆಯವರಿಗೂ ಮೊಬೈಲ್ ತಮ್ಮ ಸೆಲ್ಗೆ ತರಿಸಿಕೊಂಡ ಆರೋಪಿಗಳು ವಿಡಿಯೋ ಕಾಲ್ ಮಾಡಿದ್ದಾರೆ. ವಿಡಿಯೋ ಕಾಲ್ ಮಾಡಿದ್ದು, ಯೋಗಕ್ಷೇಮ ವಿಚಾರಿಸಲು ಈ ರೀತಿ ವ್ಯವಸ್ಥೆ ಕಲ್ಪಿಸಿ ಕೊಟ್ಟಿರುವುದು ಕಾರಾಗೃಹ ವ್ಯವಸ್ಥೆಯ ಬಗ್ಗೆ ಬಲವಾದ ಪ್ರಶ್ನೆಗಳು ಮೂಡಿವೆ.
ಈ ಸಂಬಂಧ ಪರಪ್ಪನ ಅಗ್ರಹಾರದ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಪ್ಪು ಮಾಡಿದ ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!
MUST WATCH
ಹೊಸ ಸೇರ್ಪಡೆ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?
ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ
ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
ನನ್ನಲ್ಲೂ ದಾಖಲೆಗಳಿವೆ… ನಿಮ್ಮಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK