ಅಪ್ಪಾಜಿ ಗೌಡರಿಗೆ ಆಗದವರು ಸಾವಿಗೆ ಕಾರಣವಾಗಿರಬಹುದು: ಅನುಮಾನ ವ್ಯಕ್ತಪಡಿಸಿದ ಕುಮಾರಸ್ವಾಮಿ
Team Udayavani, Sep 13, 2020, 2:12 PM IST
ಭದ್ರಾವತಿ (ಶಿವಮೊಗ್ಗ): ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಅವರಿಗೆ ಆಗದವರು ಯಾರೋ ಅವರ ಸಾವಿಗೆ ಕಾರಣರಾಗಿರಬಹುದು. ಅವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಭದ್ರಾವತಿಯಲ್ಲಿ ಮಾತನಾಡಿದ ಅವರು, ಅಪ್ಪಾಜಿ ಗೌಡ ಅವರ ಕುಟುಂಬದವರೇ ಈ ಅನುಮಾನ ವ್ಯಕ್ತಪಡಿಸಿದ್ದಾರೆ. ಒಂದು ಖಾಸಗಿ ಆಸ್ಪತ್ರೆಯಲ್ಲಿ ಒಬ್ಬ ಜನಪ್ರತಿನಿಧಿಗೆ ವೆಂಟಿಲೇಟರ್ ಸಿಕ್ಕಿಲ್ಲ ಅಂದರೆ ಏನರ್ಥ ಎಂದರು.
ಅಪ್ಪಾಜಿ ಗೌಡ ಅವರಿಗೆ ಕೋವಿಡ್-19 ಸೋಂಕು ತಾಗಿತ್ತು ಎನ್ನುತ್ತಿದ್ದಾರೆ. ಆದರೆ ಅವರ ಕುಟುಂಬದ ಯಾರಿಗೂ ಕೋವಿಡ್ ಸೋಂಕು ಕಾಣಿಸಿಕೊಂಡಿಲ್ಲ. ಇದೆಲ್ಲವನ್ನೂ ನೋಡಿದರೆ ಅಪ್ಪಾಜಿ ಗೌಡ ಅವರ ಸಾವಿನ ಬಗ್ಗೆ ಅನುಮಾನ ಮೂಡುತ್ತಿದೆ ಎಂದರು.
ಇದನ್ನೂ ಓದಿ: ಚಾರ್ಮಾಡಿ ಘಾಟ್: ನಿಯಂತ್ರಣ ತಪ್ಪಿ ಪಲ್ಟಿಯಾಗಿ ಜಲಪಾತದತ್ತ ನುಗ್ಗಿದ ಕಾರು
ಅಪ್ಪಾಜಿ ಗೌಡ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಂದು ಬೆಳಗ್ಗೆ ಗೊತ್ತಾಗಿದ್ದರೆ ನಾನು ಅವರಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೆ. ಆದರೆ ಸಂಜೆ ವೇಳೆಗೆ ವಿಷಯ ತಿಳಿದಿದ್ದರಿಂದ ಬೆಂಗಳೂರಿನಲ್ಲಿ ಚಿಕಿತ್ಸೆಗೆ ಕರೆತರಲು ಆಗಲಿಲ್ಲ ಎಂದು ಹೇಳಿದರು.
ಡ್ರಗ್ಸ್ ಕುರಿತ ತನಿಖೆಗೂ ಜಮೀರ್ ಅಹಮದ್ ಅವರ ಹೇಳಿಕೆಗೂ ಸಂಬಂಧವಿಲ್ಲ. ಡ್ರಗ್ಸ್ ಗೂ ನನ್ನ ಕೊಲಂಬೋ ಪ್ರವಾಸಕ್ಕೂ ಏನು ಸಂಬಂಧ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು