ಜೋಗದಲ್ಲಿ ಮತ್ತದೇ ಜನ ಸಾಗರ; ಕೈ ಚೆಲ್ಲಿದ ಪೊಲೀಸರು!
10 ಸಾವಿರಕ್ಕೂ ಹೆಚ್ಚು ಜನ ಏಕಕಾಲದಲ್ಲಿ ಭೇಟಿ
Team Udayavani, Jul 17, 2022, 7:02 PM IST
ಸಾಗರ: ಒಂದೆಡೆ ಜೋಗದ ಮೈಸೂರು ಬಂಗ್ಲೋ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಹಾಗೂ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಪ್ರವಾಸಿಗರ ಕಾರಣ ತಾಲೂಕಿನ ಜಗತ್ಪ್ರಸಿದ್ಧ ಜೋಗದಲ್ಲಿ ನಿಯಂತ್ರಣ ವ್ಯವಸ್ಥೆ ಸಂಪೂರ್ಣವಾಗಿ ಪೊಲೀಸರ ಕೈಯಿಂದ ಜಾರಿದ ಘಟನೆಗೆ ಭಾನುವಾರ ಸಾಕ್ಷಿಯಾಯಿತು.
10 ಸಾವಿರಕ್ಕೂ ಹೆಚ್ಚು ಜನ ಭೇಟಿ ಇತ್ತ ಹಿನ್ನೆಲೆಯಲ್ಲಿ ಕಾಮಗಾರಿ ನಡೆದಿರುವ ಗೇಟ್ ಒಳಗಿನ ಪ್ರದೇಶದಲ್ಲಿ ಪಾರ್ಕಿಂಗ್ ರದ್ದುಗೊಳಿಸಲಾಗಿತ್ತು. ಹಾಗಾಗಿ ಜನ ರಸ್ತೆಯ ಪಕ್ಕದಲ್ಲಿಯೇ ವಾಹನಗಳನ್ನು ನಿಲ್ಲಿಸಿದ್ದರಿಂದ ಟ್ರಾಫಿಕ್ ಜ್ಯಾಮ್ ಸಾಮಾನ್ಯವಾಗಿತ್ತು. ವಾಹನಗಳನ್ನು ತೆಗೆಯುವಾಗ ವಾಹನಗಳ ನಡುವೆ ಸಣ್ಣಪುಟ್ಟ ಢಿಕ್ಕಿಗಳಾಗಿ ಪ್ರವಾಸಿ ವಾಹನಗಳ ಚಾಲಕರು ಪರಸ್ಪರ ಮಾತಿನ ಚಕಮಕಿ ನಡೆಸುತ್ತಿದ್ದುದು ಸಾಮಾನ್ಯ ದೃಶ್ಯವಾಗಿತ್ತು.
ಈ ನಡುವೆಯೂ ಜೋಗ ಅಭಿವೃದ್ಧಿ ಪ್ರಾಧಿಕಾರದವರು ಜನರಿಂದ ಪ್ರವೇಶ ಶುಲ್ಕ ಸಂಗ್ರಹಿಸುತ್ತಿದ್ದು, ಸಂಜೆ ನಾಲ್ಕರ ವೇಳೆಗೆ ಟೋಲ್ ಸಂಗ್ರಹ ಎರಡು ಲಕ್ಷ ರೂ. ದಾಟಿತ್ತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಜೋಗದಲ್ಲಿನ ಪ್ರವಾಸಿಗರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕೆಂಟು ಜನ ಮಂಗಳಮುಖಿಯರು ಸ್ಥಳಕ್ಕೆ ಆಗಮಿಸಿದ್ದು, ಪ್ರವೇಶ ಶುಲ್ಕ ಪಾವತಿಸಿದವರೂ ಇವರಿಗೆ ಕೇಳಿದಷ್ಟು ಹಣ ಕೊಟ್ಟು ಜೋಗದ ವ್ಯೂ ಪಾಯಿಂಟ್ಗೆ ಹೋಗುವ ವಿಚಿತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ಈ ನಡುವೆ ಬೆಳಗಿನಿಂದ ಮಳೆ ನಿಯಂತ್ರಣದಲ್ಲಿದ್ದುದರಿಂದ ದಿನದ ಬಹುಪಾಲು ಸಂದರ್ಭಗಳಲ್ಲಿ ಜಲಪಾತದ ದೃಶ್ಯ ಜನರಿಗೆ ಲಭ್ಯವಾಯಿತು. ಮಧ್ಯಾಹ್ನದ ನಂತರ ಹಲವು ಸಂದರ್ಭಗಳಲ್ಲಿ ಥಂಡಿ ವಾತಾವರಣದಿಂದ ಜಲಪಾತದ ನೋಟ ಜನರಿಗೆ ಲಭಿಸದೆ ನಿರಾಶರಾಗಬೇಕಾಯಿತು. ಜನರ ಒತ್ತಡದಿಂದ ಪರಿಸ್ಥಿತಿ ನಿಯಂತ್ರಿಸಲಾಗದ ಪೊಲೀಸರು ಕೈ ಚೆಲ್ಲಿ ಎಲ್ಲ ನಿಯಂತ್ರಣಗಳನ್ನು ತೆರವು ಮಾಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ