ಕೈತುಂಬ ಸಾಲ; ಊಟದಲ್ಲಿ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬ
Team Udayavani, Jan 13, 2023, 3:00 PM IST
ಶಿವಮೊಗ್ಗ: ಸಾಲಗಾರರ ಕಾಟ ತಾಳಲಾರದೆ ತಮ್ಮ ಸಾಕು ಮಗನೊಂದಿಗೆ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ವಿಷ ಸೇವಿಸಿದ ವೃದ್ದರಾದ ಪ್ರತಾಪ (70) ಮತ್ತು ದಾನಮ್ಮ (63) ದಂಪತಿಗಳು ಮನೆಯಲ್ಲೇ ಸಾವನ್ನಪ್ಪಿದರೆ, ಅಸ್ವಸ್ಥರಾಗಿದ್ದ ಮಗ ಮಂಜುನಾಥ್ (25) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಶಿವಮೊಗ್ಗದ ಮಿಳಘಟ್ಪದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬವು ಮನೆ ನಿರ್ವಹಣೆಗೆ ಸಾಲ ಮಾಡಿಕೊಂಡಿತ್ತು. ಸಾಕಿದ ಮಗನೂ ಪಾರ್ಶ್ವವಾಯು ಪೀಡಿತರಾದ ಹಿನ್ನೆಲೆಯಲ್ಲಿ ನಆತ ಕೂಡಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದ. ಪತಿಗೆ ವಯಸ್ಸು ಆಗಿದ್ದರಿಂದ ಕೆಲಸವಿರಲಿಲ್ಲ. ಪತ್ನಿಯೇ ಕೊಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡಬೇಕಿತ್ತು.
ಇದನ್ನೂ ಓದಿ:ಭಾರತ ವಿರುದ್ಧದ ಟಿ20 ಸರಣಿಗೆ ಮಿಚೆಲ್ ಸ್ಯಾಂಟ್ನರ್ ಗೆ ಕಿವೀಸ್ ನಾಯಕತ್ವ
ಮನೆ ಬಾಡಿಗೆ ಕಟ್ಟಲಾಗದೇ ದಂಪತಿಗಳ ಪರದಾಟ ನಡೆಸುತ್ತಿದ್ದರು. ಕೈ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟದಿಂದಾಗಿ ಊಟದಲ್ಲಿ ವಿಷ ಬೆರೆಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು