Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ
Team Udayavani, Sep 30, 2023, 11:35 PM IST
ಹೊಳೆಹೊನ್ನೂರು(ಶಿವಮೊಗ್ಗ): ಸಮೀಪದ ಕಳ್ಳಿಹಾಳ್ ಅರಹಾತೊಳಲು ಮಧ್ಯೆ ಶನಿವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣವನ್ನಪ್ಪಿದ್ದಾರೆ.
ಎರಡು ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಒಂದು ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ದೇಹಗಳು ಲಾರಿಯ ಚಕ್ರದ ಕೆಳಗೆ ಸಿಲುಕಿ ಛಿದ್ರವಾಗಿವೆ. ಮರಣ ಹೊಂದಿದ ಯುವಕರು ಯಾವ ಗ್ರಾಮದವರು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
ಭದ್ರಾವತಿ ತಾಲೂಕಿನ ಅರದೂಟ್ಲು ಗ್ರಾಮದ ಗಗನ್ ಎಂಬಾತನಿಗೆ ಬಲವಾದ ಪೆಟ್ಟು ಬಿದ್ದಿದೆ.ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.