ಬಾರಿ ಮಳೆಗೆ ತುಂಬಿ ಹರಿದ ಭದ್ರಾ ನಾಲೆ : 150ಕ್ಕೂ ಹೆಚ್ಚು ಅಡಿಕೆ ಮರಗಳು ಧರೆಗೆ
Team Udayavani, Jul 29, 2022, 9:31 PM IST
ಹೊಳೆಹೊನ್ನೂರು: ಶುಕ್ರವಾರ ಸಂಜೆ ಸುರಿದ ಭಾರಿ ಮಳೆಗೆ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಭದ್ರಾ ನಾಲೆ ತುಂಬಿ ಹರಿಯುತ್ತಿರುವುದು ಕಣ್ಣಿಗೆ ರಾಚುತ್ತಿತ್ತು. ಅಲ್ಲದೇ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು 150ಕ್ಕೂ ಹೆಚ್ಚು ಅಡಿಕೆ ಮರಗಳು ಬಿದ್ದಿವೆ.
ಸಮೀಪದ ಮಲ್ಲಾಪುರದ ಎಸ್.1 ನಾಲಾವು ತುಂಬಿ ಹರಿಯುತ್ತಿರುವುದರಿಂದ ಅಡಿಕೆ ತೋಟಗಳಿಗೆ ನುಗ್ಗುತ್ತಿದೆ ಅಲ್ಲದೇ ತೋಟದಲ್ಲಿರುವ ಅಡಿಕೆ ಮರಗಳು ನೆಲಕ್ಕೆ ಉರುಳುತ್ತಿವೆ. ನಾಲಾಗಳು ಮಳೆಗಾಲದ ಮುಂದೇ ಜಾಗೃತಿ ವಹಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಇರುವುದರಿಂದ ಹಾಗೂ ಭದ್ರಾ ಬಲದಂಡೆ ನೀರು ನಾಲಾಗಳಿಗೆ ಬಿಡುಗಡೆ ಮಾಡುವುದರಿಂದ ನಾಲಾಗಳು ಮಳೆ ಬಂದ ಕೂಡಲೇ ರಸ್ತೆಯ ಮೇಲೆ ಹರಿಯುತ್ತಿವೆ. ಇದರಿಂದಾಗಿ ರಸ್ತೆಗಳು ಹಾಳಾಗುವುದಲ್ಲದೇ ಜಮೀನಿಗಳಿಗೆ ನುಗ್ಗುವುದರಿಂದ ಜಮೀನಲ್ಲಿರುವ ಫಲವಂತಾದ ಮಣ್ಣು ಕೂಡ ನೀರಿನ ಜೊತೆಯಲ್ಲಿ ಹೋಗುವುದು ಎಂದು ರೈತರ ಅಳಲಾಗಿದೆ.
ನೀರಾವರಿ ಇಲಾಖೆ ಕೂಡಲೇ ಎಚ್ಚೆತ್ತು. ನಾಲಾ ಅಭಿವೃದ್ಧಿ ಕಾರ್ಯಗಳನ್ನು ಹಾಗೂ ದುರಸ್ಥಿಯನ್ನು ಸರಿಪಡಿಸಿ, ಮಳೆಗಾಲದಲ್ಲಿ ನಾಲಾಗಳಿಗೆ ನೀರು ಹೆಚ್ಚು ಹರಿಸದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸುಮಾರು 7 ರಿಂದ 8 ವರ್ಷಗಳ ಕಾಲ ಬೆಳೆಸಿದ ಅಡಿಕೆ ಮರಗಳು ಬೀಳುವುದರಿಂದ ರೈತರಿಗೆ ತುಂಬ ನಷ್ಟವುಂಟಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ