ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ವಿಚಾರ… ತಪ್ಪಿತಸ್ಥರಾಗಿದ್ದರೆ ಶಿಕ್ಷೆ ಖಚಿತ: ಗೃಹ ಸಚಿವ


Team Udayavani, Jan 4, 2023, 1:36 PM IST

ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ವಿಚಾರ… ತಪ್ಪಿತಸ್ಥರಾಗಿದ್ದರೆ ಶಿಕ್ಷೆ ಖಚಿತ: ಗೃಹ ಸಚಿವ

ಶಿವಮೊಗ್ಗ : ವ್ಯಕ್ತಿ ಆತ್ಮಹತ್ಯೆಗೆ ಯಾರೇ ಕಾರಣವಾಗಿದ್ದರೂ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಗೃಹ ಸಚಿವರು ಅರವಿಂದ ಲಿಂಬಾವಳಿ ಮತ್ತು ಇತರೇ ಆರು ಜನರ ಹೆಸರು ಬರೆದು ವ್ಯಕ್ತಿ ತನ್ನನ್ನು ತಾನು ಶೂಟ್ ಮಾಡಿಕೊಂಡಿದ್ದಾನೆ. ಈ ಬಗ್ಗೆ ಈಗಾಗಲೇ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ನವರು ಅಭಿಯಾನ ಮಾಡ್ತಾರೆ ಎಂದು ನಮ್ ಪೋಲಿಸರು ಯಾರನ್ನೂ ಉದ್ದೇಶ ಪೂರ್ವಕವಾಗಿ ಅರೆಸ್ಟ್ ಮಾಡುವುದಿಲ್ಲ, ಕಾನೂನು, ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಸರಿಸಿ ತಪ್ಪಿತಸ್ಥರಿಗೆ ಕ್ರಮವಾಗುತ್ತೆ, ಕಾಯ್ದೆ ಪ್ರಕಾರ ಅಪರಾಧಿಯಾದರೆ ಯಾರೇ ಆಗಲಿ ಅವರನ್ನು ಅರೆಸ್ಟ್ ಮಾಡುವ ಹಕ್ಕು ಪೊಲೀಸರಿಗಿದೆ ಎಂದು ಹೇಳಿದರು.
ಈಗಾಗಲೇ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಈ ಹಂತದಲ್ಲಿ ನಾನು ಮಾತನಾಡುವುದು ಸರಿಯಲ್ಲ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ನೀಡುತ್ತಾರೆ ಎಂದರು.

ಅರವಿಂದ ಲಿಂಬಾವಳಿ ಬಗ್ಗೆ ಎಫ್ ಐ ಆರ್ ನಲ್ಲಿ ಏನೇ ಇರಲಿ, ಅವರು ಶಾಸಕರಾಗಿರಲಿ, ಮಂತ್ರಿಯಾಗಲಿ, ಸಾಮಾನ್ಯ ವ್ಯಕ್ತಿಯಾಗಿರಲಿ. ಯಾರೋ ಬರೆದಿಟ್ಟಿದ್ದಾರೆ ಅಂತಾ ಏಕಾಏಕಿ ಅರೆಸ್ಟ್ ಮಾಡೋಕೆ ಆಗಲ್ಲ.. ಅದರ ಬಗ್ಗೆ ನಿಖರವಾಗಿ ತನಿಖೆ ನಡೆಯಬೇಕು ಆಮೇಲೆ ತಪ್ಪಿತಸ್ಥರಿಗೆ ಶಿಕ್ಷೆ ಎಂದರು.

ಔರಾಧ್ಕರ್ ವರದಿ – ಹಿರಿಯ ಅಧಿಕಾರಿಗಳ ಸಂಬಳದಲ್ಲಿ ವ್ಯತ್ಯಾಸ ವಿಚಾರ:

ಔರಾದ್ಕರ್ ವರದಿ ಪ್ರಕಾರ ವ್ಯತ್ಯಾಸ ಇರೋದು ಸಹಜ. ಔರಾದ್ಕರ್ ವರದಿಯಿಂದ ಶೇ.೮೦ ಪೊಲೀಸ್ ಸಿಬ್ಬಂದಿಗೆ ಲಾಭ ಸಿಕ್ಕಿದೆ. ಅನ್ಯಾಯ ಆದವರಿಗೆ ಭತ್ಯೆಯಲ್ಲಿ ಸರಿಪಡಿಸುವ ಕೆಲಸ ಆಗ್ತಿದೆ ಎಂದು ಹೇಳಿದರು.

ಕೇಂದ್ರದಿಂದ ರಾಜ್ಯಕ್ಕೆ ವಿಶೇಷ ಜೈಲು ಮಂಜೂರು :
ಕೇಂದ್ರದಿಂದ ರಾಜ್ಯಕ್ಕೆ ವಿಶೇಷ ಜೈಲು ಮಂಜೂರಾಗಿದ್ದು, ಶಿವಮೊಗ್ಗಕ್ಕೆ ನೀಡಲಾಗಿದೆ, ಶಿವಮೊಗ್ಗದ ಸೋಗಾನೆ ಜೈಲಿನ ಆವರಣದೊಳಗೆ ಅದು ನಿರ್ಮಾಣವಾಗಲಿದೆ, ಹೈಟೆಕ್ ಆರೋಪಿಗಳಿಗಾಗಿ ಈ ವಿಶೇಷ ಜೈಲು ಇರಲಿದೆ ಎಂದು ಹೇಳಿದರು.

ಇದನ್ನೂ ಓದಿ: ಲಾಗಿನ್‌ ಐಡಿ ಮತ್ತು ಪಾಸ್‌ವರ್ಡ್‌ ದುರ್ಬಳಕೆ; ನೀರಿನ ಹಣ ನುಂಗಿದ 13 ನೌಕರರ ಅಮಾನತು

ಟಾಪ್ ನ್ಯೂಸ್

1-sadasd

Punjab ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

1-sadas

New Parliament building ಅಧೀನರನ್ನು ಭೇಟಿಯಾದ ಪ್ರಧಾನಿ ಮೋದಿ

SIDDARAMAYYA 1

ಪ್ರವೀಣ್‌ ನೆಟ್ಟಾರು ಪತ್ನಿಯ ಪುನರ್‌ ನೇಮಕಾತಿ: CM ಸಿದ್ದರಾಮಯ್ಯ ಭರವಸೆ

1-ssad

Karnataka CM ಸಿದ್ದರಾಮಯ್ಯ ಸಂಪುಟದಲ್ಲಿ ಬಾವ-ಬಾಮೈದ!

1-sadsad

RSS ನಿಷೇಧಿಸುವ ಬಗ್ಗೆ ಸರ್ಕಾರ ಮಾತನಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

police crime

Manipal ಪೊಲೀಸರ ಹೆಸರಿನಲ್ಲಿ ಹಣ ವಸೂಲು: ಆರೋಪಿಗಳು ವಶಕ್ಕೆ

ನೂತನ ಸಚಿವ ಮಂಕಾಳ್ ವೈದ್ಯರನ್ನು ಸನ್ಮಾನಿಸಿದ ರಾಜಕೀಯ ಗುರು ಆರ್.ವಿ.ದೇಶಪಾಂಡೆ

ನೂತನ ಸಚಿವ ಮಂಕಾಳ್ ವೈದ್ಯರನ್ನು ಸನ್ಮಾನಿಸಿದ ರಾಜಕೀಯ ಗುರು ಆರ್.ವಿ.ದೇಶಪಾಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIDDARAMAYYA 1

ಪ್ರವೀಣ್‌ ನೆಟ್ಟಾರು ಪತ್ನಿಯ ಪುನರ್‌ ನೇಮಕಾತಿ: CM ಸಿದ್ದರಾಮಯ್ಯ ಭರವಸೆ

1-ssad

Karnataka CM ಸಿದ್ದರಾಮಯ್ಯ ಸಂಪುಟದಲ್ಲಿ ಬಾವ-ಬಾಮೈದ!

1-sadsad

RSS ನಿಷೇಧಿಸುವ ಬಗ್ಗೆ ಸರ್ಕಾರ ಮಾತನಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ನೂತನ ಸಚಿವ ಮಂಕಾಳ್ ವೈದ್ಯರನ್ನು ಸನ್ಮಾನಿಸಿದ ರಾಜಕೀಯ ಗುರು ಆರ್.ವಿ.ದೇಶಪಾಂಡೆ

ನೂತನ ಸಚಿವ ಮಂಕಾಳ್ ವೈದ್ಯರನ್ನು ಸನ್ಮಾನಿಸಿದ ರಾಜಕೀಯ ಗುರು ಆರ್.ವಿ.ದೇಶಪಾಂಡೆ

1-dsa

B. K. Hariprasad ”ಅಹಿಂದ” ಅಲ್ಲ.. ಸಿದ್ದರಾಮಯ್ಯ ವಿರುದ್ಧ ಪರೋಕ್ಷ ಆಕ್ರೋಶ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-sadasd

Punjab ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

1-wdsa

Hunsur ಸಾಲ ಬಾಧೆಯಿಂದ ನೇಣಿಗೆ ಶರಣಾದ ವೃದ್ಧ ರೈತ

police

Chikkamagaluru: ಸೇತುವೆ ಬಳಿ ಎರಡು ಗೋವುಗಳ ತಲೆ, ಕಾಲು ಪತ್ತೆ

1-sadas

New Parliament building ಅಧೀನರನ್ನು ಭೇಟಿಯಾದ ಪ್ರಧಾನಿ ಮೋದಿ

SIDDARAMAYYA 1

ಪ್ರವೀಣ್‌ ನೆಟ್ಟಾರು ಪತ್ನಿಯ ಪುನರ್‌ ನೇಮಕಾತಿ: CM ಸಿದ್ದರಾಮಯ್ಯ ಭರವಸೆ