ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ
Team Udayavani, Aug 15, 2022, 7:09 PM IST
ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲಿನ ಬೊಲೆರೋಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ಉಂಬ್ಳೆಬೈಲಿನಲ್ಲಿ ಸಮೀಪ ನಡೆದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರರವರು ಬೆಂಗಳೂರಿನ ಕಾರ್ಯಕ್ರಮ ಮುಗಿಸಿ ಸೋಮವಾರ ತುಮಕೂರಿನಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ದ್ವಜಾರೊಹಣ ನೆರವೇರಿಸಿ ಪುನಃ ತೀರ್ಥಹಳ್ಳಿಗೆ ಬರುತ್ತಿರುವ ಮಾರ್ಗದ ಮಧ್ಯ ಉಂಬ್ಳೇಬೈಲ್ ಹತ್ತಿರ ಗೃಹ ಸಚಿವರ ಎಸ್ಕಾರ್ಟ್ ಬೊಲೆರೋ ವಾಹನ ಹಾಗೂ ಕಾರು ಮುಖಾಮುಖಿ ಢಿಕ್ಕಿ ಹೊಡೆದಿದೆ.
ಕಾರು ಮತ್ತು ಜೀಪ್ ಜಖಂ ಆಗಿರುತ್ತದೆ. ಬೊಲೆರೋ ಮುಂಭಾಗ ನುಜ್ಜುಗುಜ್ಜಾಗಿದೆ. ಯಾರಿಗೂ ಯಾವುದೇ ರೀತಿಯ ತೊಂದರೆ ಇಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಸಂಚರಿಸುತ್ತಿದ್ದವರು ಮೂಲತಃ ಹೊಸನಗರದವರಾಗಿದ್ದು ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೊಸನಗರಕ್ಕೆ ಬೇರೆ ವಾಹನದ ಮೂಲಕ ಸಚಿವರು ಕಳಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ