ಹುಲಿಕಲ್ನಲ್ಲಿ ಒಂದೇ ದಿನ ಸುರಿದ 125 ಮಿಮೀ ಮಳೆ
Team Udayavani, Jun 18, 2020, 1:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸನಗರ: ತಾಲೂಕಿನಾದ್ಯಂತ ಮಳೆ ಬಿರುಸುಗೊಂಡಿದೆ. ಕಳೆದ 24 ಗಂಟೆಯಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ಹುಲಿಕಲ್ ನಲ್ಲಿ ಒಂದೇ ದಿನ ಅತಿ ಹೆಚ್ಚು 125 ಮಿಮೀ ಮಳೆ ಸುರಿದಿದೆ.
ಚಕ್ರಾ ಜಲಾಶಯ ವ್ಯಾಪ್ತಿಯಲ್ಲಿ 110 ಮಿಮೀ, ಸಾವೇಹಕ್ಲು ಜಲಾಶಯ ವ್ಯಾಪ್ತಿಯಲ್ಲಿ 114 ಮಿಮೀ, ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 66 ಮಿಮೀ ಮಳೆ ಬಿದ್ದಿದೆ. ಮಾಸ್ತಿಕಟ್ಟೆಯಲ್ಲಿ 110 ಮಿಮೀ ಮಳೆ ಸುರಿದರೆ, ಯಡೂರಿನಲ್ಲಿ 84 ಮಿಮೀ ಮಳೆಯಾಗಿದೆ.
ನದಿಯಲ್ಲಿ ಹೆಚ್ಚಿದ ನೀರಿನ ಹರಿವು: ನಗರ ಹೋಬಳಿ ಮತ್ತು ಶರಾವತಿ ನದಿ ಪಾತ್ರದಲ್ಲಿ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಶರಾವತಿ ನದಿ ಹಿನ್ನೀರಿನ ಜೀವಾಳ ಎಂದೇ ಪರಿಗಣಿತವಾಗಿರುವ ನಗರ ಹೋಬಳಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನೀರಿಲ್ಲದೆ ಒಣಗಿದಂತಿದ್ದ ಶರಾವತಿ ನದಿ ಪಾತ್ರ ಜೀವಕಳೆ ತಂದುಕೊಂಡಿದೆ.
235.60 ಮಿಮೀ ಮಳೆ
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವ ಧಿಯಲ್ಲಿ ಒಟ್ಟು 235.60 ಮಿಮೀ ಮಳೆಯಾಗಿದ್ದು, ಸರಾಸರಿ 33.66 ಮಿಮೀ ಮಳೆ ದಾಖಲಾಗಿದೆ. ಜೂನ್-2020 ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮೀ ಇದ್ದು, ಇದುವರೆಗೆ ಸರಾಸರಿ 199.09 ಮಿಮೀ ಮಳೆ ದಾಖಲಾಗಿದೆ. ಶಿವಮೊಗ್ಗ 38.20 ಮಿಮೀ, ಭದ್ರಾವತಿ 11.80 ಮಿಮೀ, ತೀರ್ಥಹಳ್ಳಿ 42.60 ಮಿಮೀ, ಸಾಗರ 23.60 ಮಿಮೀ, ಶಿಕಾರಿಪುರ 6.60 ಮಿಮೀ, ಸೊರಬ 9.20 ಮಿಮೀ ಹಾಗೂ ಹೊಸನಗರ 103.60 ಮಿಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್