ಪಂಚಾಯತ್‌ ನಿರ್ಣಯ ಖಂಡಿಸಿ ಧರಣಿ

ಮಾಜಿ ಸಚಿವ ಕಿಮ್ಮನೆ ಭೇಟಿ, ತಾಪಂ ಇಒ ನೇತೃತ್ವದಲ್ಲಿ ಸಭೆ

Team Udayavani, Jun 4, 2020, 5:37 PM IST

04-June-13

ಹೊಸನಗರ: ಮೂಡುಗೊಪ್ಪ ಗ್ರಾಪಂನಲ್ಲಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ ನೀಡಿ ಬೆಂಬಲ ನೀಡಿದರು.

ಹೊಸನಗರ: ಹಿಂದಿನ ಸಭೆಯಲ್ಲಿ ಯಾವುದೇ ಚರ್ಚೆ ನಡೆಯದ, ದಾಖಲು ಮಾಡದ ವಿಚಾರವನ್ನೇ ಹಿಂದಿನ ಸಭೆಯ ನಿರ್ಣಯ ಎಂದು ದಾಖಲು ಮಾಡಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಗ್ರಾಪಂ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಅಹೋರಾತ್ರಿ ಧರಣಿ ಕುಳಿತ ಘಟನೆ ಮೂಡುಗೊಪ್ಪ ಗ್ರಾಪಂನಲ್ಲಿ ನಡೆದಿದೆ.

ತಾಲೂಕಿನ ಮೂಡುಗೊಪ್ಪ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಸ.ನಂ. 35ರಲ್ಲಿನಿರ್ಮಿಸಲು ಪಂಚಾಯತ್‌ನಿಂದ ಎನ್‌ ಒಸಿ ನೀಡಲು ಮುಂದಾಗಿರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ. ಕ್ರಮ ಕೈಗೊಳ್ಳಿ: ಈಗಾಗಲೇ ಬಂಡಿಮಠದಲ್ಲಿ ಸಮುದಾಯ ಭವನ ನಿರ್ಮಿಸುವ ಸಂಬಂಧ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಅದನ್ನು ಏಕಾಏಕಿ ಬದಲಿಸಿ ಸ.ನಂ. 35ರಲ್ಲಿ ನಿರ್ಮಿಸಲು ಎನ್‌ಒಸಿ ನೀಡಲು ಪಂಚಾಯತ್‌ ಮುಂದಾಗಿದೆ. ಆದರೆ ಈ ಸಂಬಂಧ ಹಿಂದಿನ ಸಭೆಯಲ್ಲಿ ವಿಚಾರ ಪ್ರಸ್ತಾಪಕ್ಕೆ ಬಂದಿರಲಿಲ್ಲ. ಆದರೂ ಹಿಂದಿನ ಸಭೆಯ ನಿರ್ಣಯದಂತೆ ಎಂದು ಓದಿ ಪಾಸ್‌ ಮಾಡಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಎನ್‌ಒಸಿಯನ್ನು ವಾಪಸ್‌ ಪಡೆದುಕೊಳ್ಳಬೇಕು ಎಂದು ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಪಟ್ಟು ಹಿಡಿದಿದ್ದಾರೆ.

ಸ.ನಂ. 35ಕ್ಕು ಗ್ರಾಮಠಾಣಾಕ್ಕು ಸಂಬಂಧವಿಲ್ಲ: ಸಮುದಾಯ ಭವನಕ್ಕೆ ನಿರ್ಮಾಣ ಸಂಬಂಧಪಟ್ಟಂತೆ ಜಾಗ ಗುರುತಿಸಲು ಒತ್ತಡವಿತ್ತು. ಇಲ್ಲವಾದಲ್ಲಿ ಹಣ ವಾಪಸ್‌ ಹೋಗುತ್ತಿತ್ತು. ಸರ್ಕಾರಿ ಕೆಲಸವಾದ ಕಾರಣ ತುರ್ತು ನಿರ್ಣಯ ಕೈಗೊಂಡು ಬೈಸೆ ಗ್ರಾಮದ ಸ.ನಂ. 35ರಲ್ಲಿ ಡಿಮ್ಯಾಂಡ್‌ ನೀಡಲು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಸಭೆಯಲ್ಲಿ ಚರ್ಚಿಸಲು ಕೂಡ ತೀರ್ಮಾನಿಸಲಾಗಿತ್ತು. ಆದರೆ ಉಪಾಧ್ಯಕ್ಷರಿಗೆ ಸೇರಿದ ಗ್ರಾಮಠಾಣಾ ಜಾಗಕ್ಕೂ ಸ.ನಂ. 35ಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅವರು ಧರಣಿ ಮಾಡಿದ ಉದ್ದೇಶ ಅರ್ಥವಾಗುತ್ತಿಲ್ಲ. ಎನ್‌ ಒಸಿ ನೀಡಿರುವುದರ ಹಿಂದೆ ದುರುದ್ದೇಶವಿಲ್ಲ ಎಂದು ಪಂಚಾಯತ್‌ ಅಧ್ಯಕ್ಷೆ ಲತಾ ನಾಗೇಶ್‌ ಸ್ಪಷ್ಟಪಡಿಸಿದ್ದಾರೆ.

ಅಧಿಕಾರಿಗಳು ಗಮನಹರಿಸಲಿ: ಕಿಮ್ಮನೆ ಮೂಡುಗೊಪ್ಪ ಗ್ರಾಪಂ ನಡಾವಳಿಗೆ ಸಂಬಂಧಪಟ್ಟಂತೆ ಚರ್ಚೆನಡೆಯದಿದ್ದರೂ ಜಾಗಕ್ಕೆ  ಸಂಬಂಧಪಟ್ಟಂತೆ ನಿರ್ಣಯವೊಂದನ್ನು ದಾಖಲು ಮಾಡಿರುವುದನ್ನು ಮಾಜಿ ಶಾಸಕ ಕಿಮ್ಮನೆ ರತ್ನಾಕರ್‌ ಖಂಡಿಸಿದ್ದಾರೆ. ತಪ್ಪು ನಿರ್ಣಯದ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತಾವು ಕೂಡ ಧರಣಿಯಲ್ಲಿ ಪಾಲ್ಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇಒ ನೇತೃತ್ವದಲ್ಲಿ ಸಭೆ: ಬಳಿಕ ತಾಪಂ ಕಾರ್ಯ ನಿರ್ವಹಣಾಧಿಕಾರಿ, ಪ್ರವೀಣಕುಮಾರ್‌ ನೇತೃತ್ವದಲ್ಲಿ ಸಭೆ ನಡೆದು ಕೈಗೊಂಡಿರುವ ನಿರ್ಣಯದ ಲೋಪದೋಷಗಳ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಗ್ರಾಪಂ ಸದಸ್ಯರ ನಡುವೆ ಪರ- ವಿರೋಧ ಮಾತುಗಳು ಕೇಳಿ ಬಂದವು. ಯಾವುದೇ ನಿರ್ಣಯ ದಾಖಲಾದ ನಂತರ ಮುಂದಿನ ಸಭೆಯಲ್ಲಿ ಅನುಮೋದನೆ ಪಡೆದುಕೊಂಡ ನಂತರವೇ ಸಿಂಧುಗೊಳ್ಳುತ್ತದೆ. ಇಲ್ಲವಾದಲ್ಲಿ ಆ ನಿರ್ಣಯಗಳಿಗೆ ಅವಕಾಶವಿಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು. ಗ್ರಾಪಂ ಸದಸ್ಯರಾದ ಎಚ್‌.ವೈ. ಸತೀಶ್‌, ಎ ಎನ್‌. ಆದಿರಾಜ್‌ ಶಾರದಮ್ಮ, ಹಿಲ್ಕುಂಜಿ ಕುಮಾರ್‌, ಕೆ.ಬಿ. ಕುಮಾರ್‌, ಬಿ.ವೈ. ರವೀಂದ್ರ ಪಿಡಿಒ ವಿಶ್ವನಾಥ್‌ ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.