ವಲಸೆ ಕಾರ್ಮಿಕರ ಮನವೊಲಿಕೆ
Team Udayavani, Apr 30, 2020, 5:21 PM IST
ಹೊಸನಗರ: ವಲಸೆ ಕಾರ್ಮಿಕರ ಮನವೊಲಿಸುತ್ತಿರುವ ಪಿಎಸ್ಐ.
ಹೊಸನಗರ: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿಗೆ ಕಳುಹಿಸಿಕೊಡುವಂತೆ ವಲಸೆ ಕಾರ್ಮಿಕರು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ನಗರ ಠಾಣೆ ಪಿಎಸ್ಐ ಸಿ.ಆರ್.ಕೊಪ್ಪದ್ ಕುರಿಕೊಪ್ಪ ಗ್ರಾಮಕ್ಕೆ ತೆರಳಿ ಸದ್ಯ ಇಲ್ಲೇ ಉಳಿಯುವಂತೆ ವಲಸೆ ಕಾರ್ಮಿಕರ ಮನವೊಲಿಸುವ ಪ್ರಯತ್ನ ಮಾಡಿದರು.
ತಾಲೂಕಿನ ನಿಟ್ಟೂರು ಗ್ರಾಪಂ ಕೆ.ಬಿ.ಸರ್ಕಲ್ ಸಮೀಪದ ಕುರಿಕೊಪ್ಪದಲ್ಲಿ ಕಲ್ಲುಕ್ವಾರಿ ಕೆಲಸಕ್ಕಾಗಿ ಯಾದಗಿರಿ ಜಿಲ್ಲೆಯಿಂದ ವಲಸೆ ಕಾರ್ಮಿಕರಾಗಿ ಸುಮಾರು 57 ಜನ ಬಂದಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕುರಿಕೊಪ್ಪದಲ್ಲೇ ಉಳಿದುಕೊಳ್ಳುವಂತಾಗಿದೆ. ಈ ಹಿಂದೆ ತಮ್ಮ ಟ್ರ್ಯಾಕ್ಟರ್ ನಲ್ಲೇ ಯಾದಗಿರಿ ಜಿಲ್ಲೆಗೆ ಹೋಗುವ ಪ್ರಯತ್ನ ಮಾಡಿದ್ದರು. ಶಿಕಾರಿಪುರ ತಾಲೂಕಿನಿಂದ ಅಧಿಕಾರಿಗಳು ವಾಪಾಸ್ ಕಳಿಸಿದ್ದರು. ಆದರೆ ನಾವು ಹೋಗಬೇಕು ಎಂದು ಪಟ್ಟು ಹಿಡಿದಿದ್ದು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ ಮೇಲಾಧಿಕಾರಿಗಳೊಂದಿಗೆ ಮಾತನಾಡಲಾಗಿದೆ. ಮೇ 3ರವರೆಗೆ ಕಾಯಿರಿ. ನಂತರ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಪಿಎಸ್ಐ ಭರವಸೆ ನೀಡಿದರು. ವಲಸೆ ಕಾರ್ಮಿಕರಾದ ಕುಮಾರ್, ಪೊಲೀಸ್ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ