ಮುಂಬೈನಿಂದ ಆಗಮಿಸಿದ ಯುವಕನಿಗೆ ಕ್ವಾರಂಟೈನ್
Team Udayavani, May 30, 2020, 1:32 PM IST
ಸಾಂದರ್ಭಿಕ ಚಿತ್ರ
ಹೊಸನಗರ: ಮುಂಬೈನಿಂದ ಆಗಮಿಸಿದ್ದ ನಗರದ ಚಿಕ್ಕಪೇಟೆ ನಿವಾಸಿ ಯುವಕನೊಬ್ಬನನ್ನು ನೇರವಾಗಿ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿರುವ ಘಟನೆ ತಾಲೂಕಿನ ಮೂಡುಗೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.
ಈ ಯುವಕ ಶುಕ್ರವಾರ ಬೆಳಿಗ್ಗೆ ಬೈಕ್ನಲ್ಲಿ ನಗರಕ್ಕೆ ಆಗಮಿಸುತ್ತಿದ್ದಂತೆ ಸಂಪರ್ಕ ಸಾಧಿಸಿದ ನಗರ ಠಾಣೆ ಪೊಲೀಸರು, ಮೂಡುಗೊಪ್ಪ ಗ್ರಾಪಂ ಪಿಡಿಒ ವಿಶ್ವನಾಥ್ ಅವರಿಗೆ ಮಾಹಿತಿ ನೀಡಿದರು. ನಂತರ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆತನನ್ನು ಕ್ವಾರಂಟೈನ್ ಮಾಡಲಾಯಿತು.
ಹೊಸನಗರಕ್ಕೆ ರವಾನೆ: ಮುಂಬೈನಿಂದ ಆಗಮಿಸಿರುವ ಕಾರಣ ಹೆಚ್ಚು ಸಮಸ್ಯೆಗೆ ಆಸ್ಪದ ನೀಡದಂತೆ ತಾಲೂಕು ಕೇಂದ್ರದ ವಿದ್ಯಾರ್ಥಿನಿಲಯದಲ್ಲಿ ಕ್ವಾರಂಟೈನ್ ಮಾಡುವಂತೆ ತಾಲೂಕು ಆಡಳಿತ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಯುವಕನನ್ನು ನಗರದಿಂದ ಹೊಸನಗರಕ್ಕೆ ಕರೆತಂದು ಕ್ವಾರಂಟೈನ್ ಮಾಡಲಾಗಿದೆ.
ಟ್ರಾವೆಲ್ ಹಿಸ್ಟರಿ: ಮುಂಬೈನ ಠಾಣೆ ಜಿಲ್ಲೆಯ ಶಾಂತಿನಗರದ ನಿತ್ಯ ರೆಸಿಡೆನ್ಸಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕ ಸ್ನೇಹಿತರ ಜೊತೆ ಕಾರಿನಲ್ಲಿ ಕುಂದಾಪುರಕ್ಕೆ ಬಂದಿದ್ದಾನೆ. ನಂತರ ಕೆಎಸ್ಆರ್ಟಿಸಿ ಬಸ್ನಲ್ಲಿ ಮಾಸ್ತಿಕಟ್ಟೆಗೆ ತೆರಳಿದ್ದಾನೆ. ಅಲ್ಲಿಂದ ತನ್ನ ಸಂಬಂ ಧಿಕರ ಬೈಕ್ನಲ್ಲಿ ಒಬ್ಬನೇ ನಗರದ ಕಡೆ ಆಗಮಿಸಿದ್ದಾನೆ. ಈ ಮಾಹಿತಿ ತಿಳಿದ ನಗರ ಠಾಣೆ ಪೊಲೀಸರು ಕೂಡಲೇ ಕ್ವಾರೆಂಟೈನ್ಗೆ ಒಳಪಡಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಮುಂಬೈನಿಂದ ನಗರಕ್ಕೆ ಆಗಮಿಸಿದ ಯುವಕನನ್ನು ನಗರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ನಂತರ ಹೊಸನಗರ ವಿದ್ಯಾರ್ಥಿನಿಲಯವೊಂದಕ್ಕೆ ಶಿಫ್ಟ್ ಮಾಡಲಾಗಿದೆ. ಟ್ರಾವೆಲ್ ಹಿಸ್ಟರಿ ಮತ್ತು ಇತರ ಮಾಹಿತಿ ಕಲೆಹಾಕಲಾಗುತ್ತಿದೆ.
ವಿ.ಎಸ್.ರಾಜೀವ್, ತಹಶೀಲ್ದಾರ್,
ಹೊಸನಗರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ