ಮಂಗನ ಕಾಯಿಲೆಗೆ ಶೀಘ್ರ ಹೊಸ ಮದ್ದು: ಐದು ಪ್ರಮುಖ ಲಸಿಕೆ ಉತ್ಪಾದನ ಕಂಪೆನಿ ಜತೆ ಸಭೆ

ಸಾಮರ್ಥ್ಯ ಕುಸಿದ ಹಿನ್ನೆಲೆಯಲ್ಲಿ ಈಗಿರುವ ಲಸಿಕೆಗೆ ಕೊಕ್‌

Team Udayavani, Jan 16, 2023, 7:30 AM IST

ಮಂಗನ ಕಾಯಿಲೆಗೆ ಶೀಘ್ರ ಹೊಸ ಮದ್ದು: ಐದು ಪ್ರಮುಖ ಲಸಿಕೆ ಉತ್ಪಾದನ ಕಂಪೆನಿ ಜತೆ ಸಭೆ

ಶಿವಮೊಗ್ಗ: ಮಂಗನ ಕಾಯಿಲೆ (ಕೆಎಫ್‌ಡಿ)ಗೆ ಲಸಿಕೆ ಉತ್ಪಾದನೆ ನಿಲ್ಲಿಸಿರುವ ಆತಂಕದ ಮಧ್ಯೆ ಆಶಾದಾಯಕ ಬೆಳವಣಿಗೆಯೊಂದು ನಡೆದಿದೆ. ಅಂದುಕೊಂಡಂತೆ ಆದರೆ ಶೀಘ್ರವೇ ಹೊಸ ಲಸಿಕೆ ದೊರೆಯಲಿದೆ.

ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ಗೆ ಈವರೆಗೆ ನೀಡಲಾಗುತ್ತಿದ್ದ ಲಸಿಕೆಯ ಸಾಮರ್ಥ್ಯ ಕುಸಿದಿದೆ ಎಂಬ ಆರೋಗ್ಯ ಇಲಾಖೆ ವರದಿಯಲ್ಲಿ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಲಸಿಕೆ ನೀಡುವುದನ್ನು ಈ ಅವಧಿಗೆ ನಿಲ್ಲಿಸಲಾಗಿತ್ತು ಹಾಗೂ ಲಸಿಕೆಯನ್ನು ಹಿಮಾಚಲ ಪ್ರದೇಶದ ಕಸೌಲಿಯಲ್ಲಿರುವ ಸಿಡಿಎಲ್‌ (ಸೆಂಟ್ರಲ್‌ ಡ್ರಗ್‌ ಲ್ಯಾಬೊರೇಟರಿ)ಗೆ ಕಳುಹಿಸಲಾಗಿದೆ. ಈ ವರದಿ ಬರುವುದಕ್ಕೆ ಮುನ್ನವೇ ಆರೋಗ್ಯ ಇಲಾಖೆ ಹೊಸ ಲಸಿಕೆ ಉತ್ಪಾದನೆಗೆ ಆಸಕ್ತಿ ತೋರಿದೆ. ಪರಿಣಾಮಕಾರಿ ಹಾಗೂ ಸುರಕ್ಷಿತ ಲಸಿಕೆ ದೊರೆತರೆ ರಾಜ್ಯದ 8 ಜಿಲ್ಲೆಗಳ ಹಾಗೂ ಐದು ರಾಜ್ಯಗಳ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ.

ಈಚೆಗೆ ದಿಲ್ಲಿಯ ಎನ್‌ಸಿಡಿಸಿ (ನ್ಯಾಷನಲ್‌ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್‌)ಯಲ್ಲಿ ವಿಡಿಎಲ್‌, ಆರೋಗ್ಯ ಇಲಾಖೆ ಇತರ ಅಧಿ ಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ದೇಶದ 5 ಪ್ರಮುಖ ಲಸಿಕೆ ಉತ್ಪಾದನ ಕಂಪೆನಿಗಳ ಜತೆ ಸಭೆ ನಡೆಸಿ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಕಾಣಿಸಿಕೊಳ್ಳುವ ಕಾಯಿಲೆಗೆ ಲಸಿಕೆ ಉತ್ಪಾದಿಸುವಂತೆ ಕೋರಲಾಗಿದೆ. ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ, ಭಾರತ್‌ ಬಯೋಟೆಕ್‌, ಇಂಡಿಯನ್‌ ಇಮ್ಯೂನೋ
ಲಾಜಿಕಲ್ಸ್‌, ಹ್ಯೂಮನ್‌ ಬಯೋಲಾಜಿಕಲ್ಸ್‌ ಆ್ಯಂಡ್‌ ಕ್ಯಾಡಿಲಾ ಕಂಪೆನಿಗಳು ಸಭೆಯಲ್ಲಿ ಭಾಗವಹಿಸಿದ್ದು, ಇವುಗಳಿಗೆ ಹೊಸ ಲಸಿಕೆ ತಯಾರಿಸುವಂತೆ ಮನವಿ ಮಾಡಲಾಗಿದೆ.

ಲಸಿಕೆ ತಯಾರಿ ಸವಾಲು
1990ರಿಂದ ಕೆಎಫ್‌ಡಿಗೆ ಲಸಿಕೆ ಕೊಡುವ ಪ್ರಕ್ರಿಯೆ ಆರಂಭವಾಯಿತು. ಅನಂತರ ಲಸಿಕೆ ತಯಾರಿಕೆಯನ್ನು ಖಾಸಗಿ ಕಂಪೆನಿಗಳಿಗೆ ವಹಿಸುವ ನಿರ್ಧಾರಕ್ಕೆ ಬರಲಾಯಿತು. ಯಾವುದೇ ಕಂಪೆನಿಗಳು ಮುಂದೆ ಬಾರದ ಕಾರಣ ಕೊನೆಗೆ ಬೆಂಗಳೂರಿನ ಐಎಎಚ್‌ವಿಬಿ( ಇನ್‌ಸ್ಟಿಟ್ಯೂಟ್‌ ಆಫ್‌ ಆ್ಯನಿಮಲ್‌ ಹೆಲ್ತ್‌ ಆ್ಯಂಡ್‌ ವೆಟರ್ನರಿ ಬಯೋಲಾಜಿಕಲ್ಸ್‌)ಗೆ ವರ್ಗಾಯಿಸಲಾಯಿತು. ಈವರೆಗೆ ಅಲ್ಲಿಯೇ ಲಸಿಕೆ ತಯಾರಾಗುತ್ತಿತ್ತು. ಪ್ರತಿ ವರ್ಷ 2.5 ಲಕ್ಷ ಡೋಸ್‌ ಲಸಿಕೆ ರಾಜ್ಯದ 8 ಜಿಲ್ಲೆ ಸಹಿತ ಐದು ರಾಜ್ಯಗಳ ಜನರಿಗೆ ಅಗತ್ಯವಿದೆ. ಇಷ್ಟೊಂದು ಕಡಿಮೆ ಪ್ರಮಾಣದ ಲಸಿಕೆ ಉತ್ಪಾದನೆ ಖಾಸಗಿ ಕಂಪೆನಿಗಳಿಗೆ ಲಾಭದಾಯಕವಲ್ಲ. ಈಗ ಖಾಸಗಿ ಕಂಪೆನಿಗಳು ಹೊಸ ಲಸಿಕೆ ತಯಾರಿಕೆಗೆ ಮನಸ್ಸು ಮಾಡುವ ಸಾಧ್ಯತೆ ತೀರಾ ಕಡಿಮೆ. ಸರಕಾರವೇ ಹೊಸ ಲಸಿಕೆ ಉತ್ಪಾದನೆಗೆ ಕಾಳಜಿ ವಹಿಸಬೇಕಿದೆ.

ಇದುವರೆಗೆ 437 ಜನ ಬಲಿ
60ರ ದಶಕದಲ್ಲಿ ಕಾಣಿಸಿಕೊಂಡ ಕಾಯಿಲೆಯಿಂದ ಈವರೆಗೆ 437 ಮಂದಿ ಬಲಿಯಾಗಿದ್ದಾರೆ. ಆರಂಭದಲ್ಲಿ ಮರಣ ಪ್ರಮಾಣ ಕಡಿಮೆಯಿದ್ದರೂ ಬಳಿಕ ಹೆಚ್ಚಿದೆ. ಪ್ರತಿ ವರ್ಷ ವೈರಸ್‌ ಪ್ರಭಾವ ಒಂದೇ ರೀತಿ ಇರದ ಕಾರಣ ಸರಕಾರ ನಿರ್ಲಕ್ಷಿಸುತ್ತಲೇ ಬಂದಿದೆ. ಕೇಂದ್ರ ಸರಕಾರದ ಒನ್‌ಹೆಲ್ತ್‌ ಯೋಜನೆ ಕೆಎಫ್‌ಡಿ ಸಂಶೋಧನೆಗೆ ಹೇಳಿ ಮಾಡಿಸಿದಂತಿತ್ತು. ಆದರೆ ಈವರೆಗೆ ಅ ಧಿಕೃತ ಆದೇಶ ಹೊರಬಿದ್ದಿಲ್ಲ. ಆರೋಗ್ಯ, ಪಶು ವೈದ್ಯಕೀಯ, ಅರಣ್ಯ ಇಲಾಖೆ ಸಹಯೋಗದಲ್ಲಿ ಸಂಶೋಧನೆಗೆ ಅವಕಾಶವಿದೆ. ಈ ಯೋಜನೆ ಜಾರಿಯಾದರೆ ಕೆಎಫ್‌ಡಿ ವಿಚಾರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದಂತಾಗುತ್ತದೆ. ಸರಕಾರ ನಿರ್ಲಕ್ಷಿಸದೆ ಒನ್‌ ಹೆಲ್ತ್‌ ವ್ಯಾಪ್ತಿಗೆ ಕೆಎಫ್‌ಡಿ ಸೇರಿಸಲು ಆಸಕ್ತಿ ತೋರಿದರೆ ಲಕ್ಷಾಂತರ ಜನ ನಿಟ್ಟುಸಿರು ಬಿಡಲಿದ್ದಾರೆ.

ಹೊಸ ಲಸಿಕೆ ತಯಾರಿಕೆ ಸಂಬಂ ಧಿಸಿ ಎನ್‌ಸಿಡಿಸಿ ಸಭೆ ನಡೆಸಿದೆ. ಐದು ಲಸಿಕೆ ಉತ್ಪಾದನ ಕಂಪೆನಿಗಳು ಸಭೆಯಲ್ಲಿ ಪಾಲ್ಗೊಂಡಿದ್ದವು. ಯಾವ ಕಂಪೆನಿ ಮುಂದೆ ಬರಲಿದೆ ಇನ್ನಷ್ಟೇ ತಿಳಿಯಬೇಕಿದೆ.
– ಹೆಸರು ಹೇಳಲಿಚ್ಛಿಸದ ಆರೋಗ್ಯ ಇಲಾಖೆ ಅಧಿಕಾರಿ

– ಶರತ್‌ ಭದ್ರಾವತಿ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.