ಪಕ್ಷಕ್ಕೆ ಮುಜುಗರ ಆಗಬಾರದೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತಿದ್ದೇನೆ: ಈಶ್ವರಪ್ಪ
Team Udayavani, Apr 15, 2022, 1:03 PM IST
ಶಿವಮೊಗ್ಗ: ವ್ಯಕ್ತಿಗಳಿಗೆ ಕೆಲವೊಮ್ಮೆ ಪರೀಕ್ಷೆಗಳು ಎದುರಾಗುತ್ತವೆ. ಷಡ್ಯಂತ್ರ ನಡೆಸಿದವರು ಈಗ ಗೆದ್ದಿದ್ದೇವೆ ಎಂದುಕೊಂಡಿರಬಹುದು. ನಾನು ಆರೋಪದಿಂದ ಮುಕ್ತನಾಗಿ ಬರುತ್ತೇನೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತಿದ್ದೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಬಿಜೆಪಿ ಕಚೇರಿಗೆ ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬಾರದು ಎಂದು ಮಹಿಳಾ ಕಾರ್ಯಕರ್ತರು ಒತ್ತಾಯ ಮಾಡಿ ಕಣ್ಣೀರು ಹಾಕಿದರು.
ಇದನ್ನೂ ಓದಿ:ತನಿಖೆಯಲ್ಲಿ ವಾಟ್ಸಪ್ ಡೆತ್ ನೋಟ್ ಪ್ರಮುಖ ಪಾತ್ರ ವಹಿಸಲಿದೆ: ಆರಗ ಜ್ಞಾನೇಂದ್ರ
ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಈಶ್ವರಪ್ಪ, ಹಿಂದೆ ಪಕ್ಷದ ಮುಖಂಡರು ಪಕ್ಷದ ಅಧ್ಯಕ್ಷನಾಗುವಂತೆ ಹೇಳಿದಾಗ ನಾನು ಸಚಿವ ಸ್ಥಾನ ತ್ಯಜಿಸಿ ಪಕ್ಷದ ಅಧ್ಯಕ್ಷನಾಗಿದ್ದೆ. ಇದೀಗ ನನ್ನ ಮೇಲೆ ಆರೋಪ ಬಂದಿದೆ ಹಾಗಾಗಿ ರಾಜೀನಾಮೆ ನೀಡುತ್ತೇನೆ. ತಪ್ಪಾಗಿದ್ದರೆ ನನಗೆ ಶಿಕ್ಷೆಯಾಗಲಿ. ನನ್ನ ಮನೆದೇವರಾದ ಚೌಡೇಶ್ವರಿ ಹಾಗೂ ಮಲ್ಲೇಶ್ವರನಿಗೆ ನಾನು ನಿಷ್ಟೆಯಿಂದ ಪೂಜೆ ಮಾಡುತ್ತೇನೆ. ನಾನು ಆರೋಪದಿಂದ ಮುಕ್ತನಾಗಿ ಬರುತ್ತೇನೆ. ನೀವು ಅಳುತ್ತಾ ನನ್ನನ್ನು ಕಳುಹಿಸಿ ಕೊಡಬೇಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ