ಇನ್ನೊಬ್ಬನನ್ನು ಬೆಳೆಸಬೇಕು ಎಂದುಕೊಂಡಿದ್ದೆ, ಆದರೆ…: ಆರಗ ಜ್ಞಾನೇಂದ್ರ

ಕಾರ್ಯಕರ್ತರನ್ನು ನಗಣ್ಯ ಮಾಡಿ ಮುಂದೆ ಹೋಗುವವನಲ್ಲ...

Team Udayavani, May 27, 2023, 5:22 PM IST

1-sa-dsad

ತೀರ್ಥಹಳ್ಳಿ : ನನ್ನ ಕಣ್ಣ ಎದುರೆ ಇನ್ನೊಬ್ಬ ಕಾರ್ಯಕರ್ತನನ್ನು ಬೆಳೆಸಬೇಕು ಎಂದುಕೊಂಡಿದ್ದೆ ಆದರೆ ಪಕ್ಷದ ಹಿರಿಯರು ಇದೊಂದು ಚುನಾವಣೆಯಲ್ಲಿ ನೀವೇ ಇರಬೇಕು ಎಂದು ಹೇಳಿದ ಕಾರಣಕ್ಕೆ ಒಪ್ಪಬೇಕಾಯಿತು. ನಾನು ಕಾರ್ಯಕರ್ತರನ್ನು ನಗಣ್ಯ ಮಾಡಿ ಮುಂದೆ ಹೋಗುವವನಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪಟ್ಟಣದ ಸುವರ್ಣ ಸಹಕಾರ ಭವನದಲ್ಲಿ ಶನಿವಾರ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಮಾತನಾಡಿ, ನಮ್ಮಲ್ಲಿ ಪ್ರಾಮಾಣಿಕ ಕಾರ್ಯಕರ್ತರ ತಂಡ ಇದೆ. ನಮ್ಮ ಒಬ್ಬಬ್ಬ ಕಾರ್ಯಕರ್ತ ತಾನೇ ಶಾಸಕ ಎನ್ನುವ ರೀತಿ ಕೆಲಸ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರಿಬ್ಬರೂ ಒಂದಾಗಿದ್ದಾರೆ ಎಂಬ ಬಗ್ಗೆ ಗೊಂದಲ ನಮ್ಮ ಕಾರ್ಯಕರ್ತರಲ್ಲಿ ಇತ್ತು. ಆದರೆ ಅದರಿಂದ ಅವರಿಗೆ ಏನು ಪ್ರಯೋಜನವಾಗಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ಮೂಲಕ ಅಧಿಕಾರಕ್ಕೆ ಬಂದಿದೆ. ಈ ಮೋಸದ ಕಾರ್ಡ್ ನಿಂದ ಅವರು ಗೆದ್ದಿದ್ದಾರೆ. ಇಷ್ಟು ವರ್ಷ ಈ ದೇಶವನ್ನು ಆಳಿದ ಕಾಂಗ್ರೆಸ್ ಈ ರೀತಿ ಕೀಳು ಮಟ್ಟಕ್ಕೆ ಇಳಿದಿದೆ. ಬಡವರನ್ನು ಮಾನಸಿಕವಾಗಿ ಭಿಕ್ಷುಕರನ್ನಾಗಿ ಕಾಂಗ್ರೆಸ್ ಪಕ್ಷ ಮಾಡಿದೆ. ಸಾಧನೆ ಹೇಳಿಕೊಳ್ಳುವಂತಹ ಯಾವ ಕೆಲಸವನ್ನು ಅವರು ಮಾಡಿಲ್ಲ. ಅವರಿಗೆ ಮುಖದಲ್ಲಿ ಗೆಲುವಿಲ್ಲ.ಸುಳ್ಳು ಭರವಸೆ ಮಾಡಿ ಗೆದ್ದಿದ್ದಾರೆ. ಈಗಾಗಲೇ ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನ ಸ್ಟ್ರೈಕ್ ಮಾಡುತ್ತಿದ್ದಾರೆ. ಇದರಿಂದ ಮೆಸ್ಕಾಂ ಸಿಬ್ಬಂದಿ ನಮಗೆ ಸಂಬಳ ಸಿಗುತ್ತಾ ಅಂತ ಕೇಳುತ್ತಿದ್ದಾರೆ.
ಇವರ ಕಾಲದಲ್ಲಿ ಕೇವಲ 3 ರಿಂದ 4 ಗಂಟೆ ಕರೆಂಟ್ ಕೊಡ್ತಾ ಇದ್ರೂ ಈಗ ಉಚಿತ ಕರೆಂಟ್ ಕೊಡ್ತಾರಂತೆ ಎಂದು ಲೇವಡಿ ಮಾಡಿದರು.

ಮಹಿಳೆಯರಿಗೆ 2 ಸಾವಿರ ಕೊಡುತ್ತೇವೆ ಎಂದು ಹೇಳಿ ಅತ್ತೆ – ಸೊಸೆಗೆ ಜಗಳ ಹಚ್ಚಿ ಹಾಕಿದ್ದಾರೆ. ಕುಟುಂಬ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಬಸ್ ಟಿಕೆಟ್ ಕೊಡುವುದಿಲ್ಲ ಎಂದು ಮಹಿಳೆಯರು ಗಲಾಟೆ ಮಾಡುತ್ತಿದ್ದಾರೆ. ಅಕ್ಕಿಯ ದುಡ್ಡನ್ನು ಕೇಂದ್ರ ಸರ್ಕಾರ ಕೊಡುತ್ತದೆ. ಇವರೇನು ಉಚಿತ ಕೊಡುವುದು. ಕಾಂಗ್ರೆಸ್ ನವರು ಆದಷ್ಟು ಬೇಗ ಗ್ಯಾರೆಂಟಿ ಕೊಡದಿದ್ದರೆ ಜನರು ಬೀದಿಗೆ ಇಳಿಯುತ್ತಾರೆ. ಬೇರೆಯವರ ಜೊತೆ ಜಗಳ ಮಾಡುವ ಬದಲು ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ರವರ ಜೊತೆ ಜಗಳ ಮಾಡಿ ಎಂದರು.

ಈಗಾಗಲೇ ರಾಜ್ಯಾದ್ಯಂತ ಟೆಂಡರ್ ಆದ ಎಲ್ಲ ಕೆಲಸಗಳು ನಿಲ್ಲಿಸಲಾಗಿದೆ. ಬಿಟ್ಟಿ ಯೋಜನೆ ಮಾಡದಿದ್ದರೆ ಜನ ಬಿಡಲ್ಲ, ಹಣ ಕೊಡದಿದ್ದರೆ ಅಭಿವೃದ್ಧಿ ಯೋಜನೆಗಳು ಆಗುವುದಿಲ್ಲ. ಗ್ಯಾರಂಟಿ ಯೋಜನೆ ಮಾಡುವಾಗ ಅವರಿಗೂ ಸರ್ಕಾರ ಬರುತ್ತೆ ಎಂಬ ಗ್ಯಾರಂಟಿ ಇರಲಿಲ್ಲ. ಮೊದಲನೇ ಕ್ಯಾಬಿನೆಟ್ ನಲ್ಲೆ ಮಾಡುತ್ತೇವೆ ಅಂತ ಹೇಳಿದ್ರು ಈಗ ಮುಂದೆ ಹಾಕುತ್ತಿದ್ದಾರೆ. ಕೊಟ್ಟ ಆಶ್ವಾಸನೆ ಹೇಗೆ ಮಾಡುತ್ತಾರೆ ಎಂದು ಜನ ನೋಡುತ್ತಿದ್ದಾರೆ ಎಂದರು.

ಗೋ ಹತ್ಯೆ ನಿಷೇಧ ಮಾಡಿರುವುದನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಹಸುವಿಗೆ ನಾವು ತಾಯಿ ಸ್ಥಾನ ಕೊಡುತ್ತೇವೆ. ವೋಟ್ ಬ್ಯಾಂಕ್ ಗಾಗಿ ಹಸುಗಳನ್ನು ಕಡಿಯಲು ಅವಕಾಶ ಕೊಡುತ್ತಿದ್ದಾರೆ.ಅಕ್ರಮವಾಗಿ ಗೋಸಾಗಾಣಿಕೆ ನಡೆಯುತ್ತಿತ್ತು. ಅಂತವರನ್ನು ಹಿಡಿಯಲು ಪೊಲೀಸ್ ನವರಿಗೆ ಫ್ರೀ ಅವಕಾಶ ಮಾಡಿಕೊಟ್ಟಿದ್ದೆ. ಆದರೆ ಈಗ ಪೊಲೀಸರನ್ನು ಕರೆಸಿ ವಾರ್ನಿಂಗ್ ಮಾಡುತ್ತಾರೆ ಎಂದರು.

ಇನ್ನು ಮತಾಂತರ ನಿಷೇಧ ಕಾಯಿದೆ ವಾಪಾಸ್ ತೆಗೆಯುತ್ತೇವೆ ಎಂದು ಹೇಳಿದ್ದಾರೆ. ಸಂವಿಧಾನದಲ್ಲಿ ಅವಕಾಶ ಇದೆ. ಆದರೆ ಒತ್ತಾಯ ಮಾಡುವಂತಿಲ್ಲ. 30 ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಮಾಡಿಸಿದ್ದರು. ಕಾಂಗ್ರೆಸ್ ನವರು ಅಭಿವೃದ್ಧಿ ಯೋಜನೆಗಳನ್ನು ಮಾಡುವುದನ್ನು ಬಿಟ್ಟು ಹಿಂದೂ ಧರ್ಮದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.

ಪಿಎಸ್ಐ ಸ್ಕ್ಯಾಮ್ ಬಗ್ಗೆ ಪ್ರಿಯಾಂಕಾ ಖರ್ಗೆ ಮಾತನಾಡುತ್ತಾರೆ. ಇದರ ಬಗ್ಗೆ ನಾನೇ ತನಿಖೆ ಮಾಡಿಸಿದ್ದು, RD ಪಾಟೀಲ್ ಇವರ ಮನೆಯಲ್ಲೆ ಇದ್ದವನು. ಪ್ರಿಯಾಂಕಾ ಖರ್ಗೆ ವಿಧಾನಸಭೆಯ ಪಾವಿತ್ರ್ಯತೆ ಹಾಳು ಮಾಡಿದ್ದಾರೆ. ಅಷ್ಟೇ ಅಲ್ಲದೆ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಬಳಿ ಚಾಲೆಂಜ್ ಮಾಡುತ್ತೇನೆ ನಿಮ್ಮದೇ ಸರ್ಕಾರ ಇದೆ ಅಲ್ವಾ ತನಿಖೆ ನೆಡೆಸಿ ಎಂದರು.

ಇನ್ನು ತಾಲೂಕಿನಲ್ಲಿ ಒಂದು ಸಾವಿರ ರಸ್ತೆಗಳನ್ನು ಮಾಡಿಸಿದ್ದೇನೆ. ಅವರ ಕಾಲದಲ್ಲಿ ಕೇವಲ ಎಸ್ ಸಿ ಎಸ್ ಟಿ ಕಾಲೋನಿಗೆ ಮಾತ್ರ ರಸ್ತೆ ಅಂದುಕೊಂಡಿದ್ದರು. ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಕಾಲು ಸಂಕಕ್ಕಾಗಿ ನೂರು ಕೋಟಿ ಹಣ ನೀಡಿದ್ದೇವೆ. ನೂರು ಕಾಲು ಸಂಕಗಳು ನನ್ನ ಕ್ಷೇತ್ರದಲ್ಲಿ ಮಾಡಿಸಿದ್ದೇನೆ. ನನ್ನ ಗೆಲುವಿಗೆ ಪಕ್ಷದ ವಿವಿಧ ಮೋರ್ಚಾ ಗಳು ಕಾರ್ಯಕರ್ತರು ಶ್ರಮಿಸಿದ್ದಾರೆ. ಇಲ್ಲಿ ಎಂ ಎಲ್ ಎ ನಾನು, ಕಾನೂನು ಪ್ರಕಾರ ಕೆಲಸ ಮಾಡಬೇಕು ನಾನು ಇಲ್ಲಿ ಕೋಮು ದ್ವೇಷ ಮಾಡಲಿಲ್ಲ. ಎಲ್ಲಾ ಧರ್ಮದ ಜನರ ಕೆಲಸ ಮಾಡಿ ಕೊಟ್ಟಿದ್ದೇನೆ. ಅವರು ಒಂದು ಸಮುದಾಯದ ವಿರುದ್ಧ ಹೋಗುತ್ತಿದ್ದಾರೆ. ಆದರೆ ನನ್ನ ಕ್ಷೇತ್ರದ ಜನತೆ ಜೊತೆ ನಾನು ಇರುತ್ತೇನೆ ಇಲ್ಲಿನ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತೇನೆ. ನಾನು ರಾಜಕಾರಣವನ್ನು ವೃತ್ತಿಯಾಗಿ ಮಾಡಿಲ್ಲ ವ್ರತವಾಗಿ ಸ್ವೀಕಾರ ಮಾಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಬಾಳೆಬೈಲು ರಾಘವೇಂದ್ರ, ನವೀನ್ ಹೆದ್ದೂರು, ನಾಗರಾಜ್ ಶೆಟ್ಟಿ, ಬೇಗುವಳ್ಳಿ ಕವಿರಾಜ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Buzz: ಒಂದೇ ದಿನ ʼಸಲಾರ್‌-ಡಂಕಿʼ ರಿಲೀಸ್‌: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್‌ ಆಫೀಸ್‌ ದಂಗಲ್?

Buzz: ಒಂದೇ ದಿನ ʼಸಲಾರ್‌-ಡಂಕಿʼ ರಿಲೀಸ್‌: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್‌ ಆಫೀಸ್‌ ದಂಗಲ್?

10-fusion-college-campus

UV Fusion: ಸ್ವಾರಸ್ಯಗಳ ತಾಣ ಕಾಲೇಜು ಕ್ಯಾಂಪಸ್‌

9-fusion-camparison

UV Fusion: ಹೋಲಿಕೆಯೆಂಬ ವಿಷದ ಮಾಲಿಕೆ

shobha

Cauvery issue; ಕೇಂದ್ರ ಸರ್ಕಾರವು ರಾಜ್ಯದ ರೈತರ ಪರವಿದೆ: ಶೋಭಾ ಕರಂದ್ಲಾಜೆ

8–fusion-paper

UV Fusion: ಪೇಪರ್‌ ಬಾಯ್‌ಗೊಂದು ಸಲಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara ಶರಾವತಿ ಸಂತ್ರಸ್ತರ ಬದುಕಿಗೆ ಬೆಳಕು ನೀಡುವಲ್ಲಿ ವೈಫಲ್ಯ; ಸಂಸದ ಬಿವೈಆರ್ ಬೇಸರ

Sagara ಶರಾವತಿ ಸಂತ್ರಸ್ತರ ಬದುಕಿಗೆ ಬೆಳಕು ನೀಡುವಲ್ಲಿ ವೈಫಲ್ಯ; ಸಂಸದ ಬಿವೈಆರ್ ಬೇಸರ

13-theerthahalli

Cauvery issue: ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ತೀರ್ಥಹಳ್ಳಿ ಕರವೇ ಘಟಕ

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

Sagara ಆರೋಗ್ಯದ ಪಾಠ ಹೇಳಿಕೊಡುವ ಸೈಕ್ಲಿಂಗ್; ಒಂದೇ ದಿನ 225 ಕಿಮೀ ಪ್ರಯಾಣ!

Sagara ಆರೋಗ್ಯದ ಪಾಠ ಹೇಳಿಕೊಡುವ ಸೈಕ್ಲಿಂಗ್; ಒಂದೇ ದಿನ 225 ಕಿಮೀ ಪ್ರಯಾಣ!

11-theerthahalli

Theerthahalli: ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಎಸ್. ವಿಶ್ವನಾಥ್ ನಿಧನ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Mumbai Police: 26/11ರ ಮುಂಬೈ ದಾಳಿ… ತಹವ್ವುರ್ ರಾಣಾ ವಿರುದ್ಧ 400 ಪುಟಗಳ ಚಾರ್ಜ್ ಶೀಟ್

Buzz: ಒಂದೇ ದಿನ ʼಸಲಾರ್‌-ಡಂಕಿʼ ರಿಲೀಸ್‌: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್‌ ಆಫೀಸ್‌ ದಂಗಲ್?

Buzz: ಒಂದೇ ದಿನ ʼಸಲಾರ್‌-ಡಂಕಿʼ ರಿಲೀಸ್‌: ವರ್ಷಾಂತ್ಯಕ್ಕೆ ದೊಡ್ಡ ಬಾಕ್ಸ್‌ ಆಫೀಸ್‌ ದಂಗಲ್?

tdy-5

Road mishap: ಕಾರಿಗೆ ಬೈಕ್‌ ಡಿಕ್ಕಿ: ಹೆಲ್ಮೆಟ್‌ ಧರಿಸದ ಯುವಕ ಸಾವು

10-fusion-college-campus

UV Fusion: ಸ್ವಾರಸ್ಯಗಳ ತಾಣ ಕಾಲೇಜು ಕ್ಯಾಂಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.