![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಾನೂನು ಮೀರಿ ನಡೆದರೆ ಕಠಿಣ ಕ್ರಮ: ಎಸ್ಪಿ ಅಶ್ವಿನಿ
Team Udayavani, May 14, 2019, 4:05 PM IST
![shivamoga-tdy-2..](https://www.udayavani.com/wp-content/uploads/2019/05/shivamoga-tdy-2..-620x271.jpg)
ಶಿವಮೊಗ್ಗ: ಎಸ್ಪಿ ಡಾ ಅಶ್ವಿನಿ ಅವರು ಶಿವಮೊಗ್ಗ ರೌಡಿ ಶೀಟರ್ಗಳ ಪರೇಡ್ ನಡೆಸಿದರು.
ಶಿವಮೊಗ್ಗ: ಸೋಮವಾರ ಬೆಳ್ಳಂಬೆಳಗ್ಗೆ ಶಿವಮೊಗ್ಗ ರೌಡಿ ಶೀಟರ್ಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಎಂ. ಅಶ್ವಿನಿ ಬಿಸಿ ಮುಟ್ಟಿಸಿದ್ದಾರೆ.
ನಗರದ ಡಿ.ಎ.ಆರ್. ಮೈದಾನದಲ್ಲಿ ರೌಡಿ ಶೀಟರ್ಗಳ ಪರೇಡ್ ನಡೆಸಿದ ಅವರು, ಕಾನೂನು ಮೀರಿ ನಡವಳಿಕೆ ತೋರಿದರೆ ಕಠಿಣ ಕ್ರಮ ಅನಿವಾರ್ಯ ಎಂದು ಖಡಕ್ ಎಚ್ಚರಿಕೆ ನೀಡಿದರು.
ಸುಮಾರು 400 ಕ್ಕೂ ಹೆಚ್ಚು ರೌಡಿ ಶೀಟರ್ಗಳನ್ನು ಒಬ್ಬೊರನ್ನೆ ಕರೆಸಿ, ಖಡಕ್ ಎಚ್ಚರಿಕೆ ನೀಡಿದ ಎಸ್.ಪಿ. ಡಾ| ಅಶ್ವಿನಿ, ಪ್ರತಿಯೊಬ್ಬರ ಮಾಹಿತಿ ಪಡೆದರು.
ಇನ್ನು ಕಳ್ಳತನ, ದರೋಡೆ ಸೇರಿದಂತೆ ಹಲವಾರು ಕೊಲೆ ಕೇಸ್ಗಳಲ್ಲಿ ಆರೋಪಿತರಾಗಿರುವವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಂದಿನ ದಿನಗಳಲ್ಲಿ ಬರುವ ರಂಜಾನ್ ಸೇರಿದಂತೆ, ಹಬ್ಬಗಳ ಸಂದರ್ಭದಲ್ಲಿ ಶಾಂತಿಯಿಂದ ಇರಬೇಕು ಎಂದರು. ರಾತ್ರಿ ಗಸ್ತು ತಿರುಗುವ ವೇಳೆ ರೌಡಿ ಪಟ್ಟಿಯಲ್ಲಿರುವ ಹಲವರು ತ್ರಿಬಲ್ ರೈಡಿಂಗ್ ಸೇರಿದಂತೆ ಅಲ್ಲಲ್ಲಿ ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯುತ್ತಿರುವುದು ಕಂಡು ಬಂದಿದೆ. ಇನ್ನು ಮುಂದೆ ಹಾಗಾಗುವಂತಿಲ್ಲ. ಸಾರ್ವಜನಿಕರಂತೆ ಯಾವಾಗ ಅಂದರೆ ಅವಾಗ ಹೊರಗೆ ಓಡಾಡುವಂತಿಲ್ಲ. ರಾತ್ರಿ 10:30ಕ್ಕೂ ಮೊದಲು ಇವರೆಲ್ಲ ಮನೆ ಸೇರಿಕೊಳ್ಳಬೇಕು. ಇನ್ನು, ಬೈಕ್ನಲ್ಲಿ ಥ್ರಿಬಲ್ ರೈಡಿಂಗ್, ವೀಲಿಂಗ್ ಮಾಡುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುವುದು. ಇನ್ನು ವಯಸ್ಸಾಗಿರುವ ಕೆಲ ರೌಡಿ ಶೀಟರ್ಗಳು ಕೂಡ, ಊರುಗೋಲಿನೊಂದಿಗೆ ರೌಡಿ ಪೆರೆಡ್ನಲ್ಲಿ ಭಾಗವಹಿಸಿದ್ದರು. ಈ ವೇಳೆ ಎಸ್ಪಿ ಡಾ| ಅಶ್ವಿನಿ, ಊರುಗೋಲನ್ನು ಬಳಸಿ ಯಾರ ಮೇಲೂ ಹಲ್ಲೆ ನಡೆಸಬಾರದು ಎಂದು ನಗೆ ಚಟಾಕಿ ಹಾರಿಸಿದರು. ಬೇಲ್ ಮೇಲೆ ಹೊರಬಂದಿರುವ ರೌಡಿಗಳಿಗೆ ಎಚ್ಚರಿಕೆಯಿಂದಿರ ಇರಬೇಕು ಎಂದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
![ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು](https://www.udayavani.com/wp-content/uploads/2024/07/koli-150x83.jpg)
Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.