ಕಾನೂನು ಮೀರಿ ನಡೆದರೆ ಕಠಿಣ ಕ್ರಮ: ಎಸ್ಪಿ ಅಶ್ವಿನಿ
Team Udayavani, May 14, 2019, 4:05 PM IST
ಶಿವಮೊಗ್ಗ: ಎಸ್ಪಿ ಡಾ ಅಶ್ವಿನಿ ಅವರು ಶಿವಮೊಗ್ಗ ರೌಡಿ ಶೀಟರ್ಗಳ ಪರೇಡ್ ನಡೆಸಿದರು.
ಶಿವಮೊಗ್ಗ: ಸೋಮವಾರ ಬೆಳ್ಳಂಬೆಳಗ್ಗೆ ಶಿವಮೊಗ್ಗ ರೌಡಿ ಶೀಟರ್ಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಎಂ. ಅಶ್ವಿನಿ ಬಿಸಿ ಮುಟ್ಟಿಸಿದ್ದಾರೆ.
ನಗರದ ಡಿ.ಎ.ಆರ್. ಮೈದಾನದಲ್ಲಿ ರೌಡಿ ಶೀಟರ್ಗಳ ಪರೇಡ್ ನಡೆಸಿದ ಅವರು, ಕಾನೂನು ಮೀರಿ ನಡವಳಿಕೆ ತೋರಿದರೆ ಕಠಿಣ ಕ್ರಮ ಅನಿವಾರ್ಯ ಎಂದು ಖಡಕ್ ಎಚ್ಚರಿಕೆ ನೀಡಿದರು.
ಸುಮಾರು 400 ಕ್ಕೂ ಹೆಚ್ಚು ರೌಡಿ ಶೀಟರ್ಗಳನ್ನು ಒಬ್ಬೊರನ್ನೆ ಕರೆಸಿ, ಖಡಕ್ ಎಚ್ಚರಿಕೆ ನೀಡಿದ ಎಸ್.ಪಿ. ಡಾ| ಅಶ್ವಿನಿ, ಪ್ರತಿಯೊಬ್ಬರ ಮಾಹಿತಿ ಪಡೆದರು.
ಇನ್ನು ಕಳ್ಳತನ, ದರೋಡೆ ಸೇರಿದಂತೆ ಹಲವಾರು ಕೊಲೆ ಕೇಸ್ಗಳಲ್ಲಿ ಆರೋಪಿತರಾಗಿರುವವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಂದಿನ ದಿನಗಳಲ್ಲಿ ಬರುವ ರಂಜಾನ್ ಸೇರಿದಂತೆ, ಹಬ್ಬಗಳ ಸಂದರ್ಭದಲ್ಲಿ ಶಾಂತಿಯಿಂದ ಇರಬೇಕು ಎಂದರು. ರಾತ್ರಿ ಗಸ್ತು ತಿರುಗುವ ವೇಳೆ ರೌಡಿ ಪಟ್ಟಿಯಲ್ಲಿರುವ ಹಲವರು ತ್ರಿಬಲ್ ರೈಡಿಂಗ್ ಸೇರಿದಂತೆ ಅಲ್ಲಲ್ಲಿ ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯುತ್ತಿರುವುದು ಕಂಡು ಬಂದಿದೆ. ಇನ್ನು ಮುಂದೆ ಹಾಗಾಗುವಂತಿಲ್ಲ. ಸಾರ್ವಜನಿಕರಂತೆ ಯಾವಾಗ ಅಂದರೆ ಅವಾಗ ಹೊರಗೆ ಓಡಾಡುವಂತಿಲ್ಲ. ರಾತ್ರಿ 10:30ಕ್ಕೂ ಮೊದಲು ಇವರೆಲ್ಲ ಮನೆ ಸೇರಿಕೊಳ್ಳಬೇಕು. ಇನ್ನು, ಬೈಕ್ನಲ್ಲಿ ಥ್ರಿಬಲ್ ರೈಡಿಂಗ್, ವೀಲಿಂಗ್ ಮಾಡುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುವುದು. ಇನ್ನು ವಯಸ್ಸಾಗಿರುವ ಕೆಲ ರೌಡಿ ಶೀಟರ್ಗಳು ಕೂಡ, ಊರುಗೋಲಿನೊಂದಿಗೆ ರೌಡಿ ಪೆರೆಡ್ನಲ್ಲಿ ಭಾಗವಹಿಸಿದ್ದರು. ಈ ವೇಳೆ ಎಸ್ಪಿ ಡಾ| ಅಶ್ವಿನಿ, ಊರುಗೋಲನ್ನು ಬಳಸಿ ಯಾರ ಮೇಲೂ ಹಲ್ಲೆ ನಡೆಸಬಾರದು ಎಂದು ನಗೆ ಚಟಾಕಿ ಹಾರಿಸಿದರು. ಬೇಲ್ ಮೇಲೆ ಹೊರಬಂದಿರುವ ರೌಡಿಗಳಿಗೆ ಎಚ್ಚರಿಕೆಯಿಂದಿರ ಇರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ