ನೆಲ-ಜಲ ಕಾನೂನು ಬದ್ಧವಾಗಿದ್ದರೆ, ಬೇರೆ ರಾಜ್ಯಕ್ಕೆ ಒಂದಿಂಚೂ ಜಾಗ ಬಿಟ್ಟುಕೊಡಲ್ಲ: ಈಶ್ವರಪ್ಪ
Team Udayavani, Jan 2, 2020, 12:05 PM IST
ಶಿವಮೊಗ್ಗ: ಸಂಕ್ರಾತಿ ಬಳಿಕ ಸಚಿವ ಸಂಪುಟ ವಿಸ್ತರಣೆ ಅಗಬಹುದು ಅಥವಾ ಪುನರ್ ರಚನೆ ಆಗಬಹುದು. ಸಚಿವ ಸಂಪುಟದ ನಿರ್ಧಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಚುನಾವಣೆಯಲ್ಲಿ ಗೆದ್ದ ಎಲ್ಲಾ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋತವರಿಗೆ ಮತ್ತು ಆರ್. ಶಂಕರ್ ಕುರಿತು ಪಕ್ಷದ ವರಿಷ್ಠರು ತಿರ್ಮಾನ ತಗೆದುಕೊಳ್ಳುತ್ತಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಆರ್.ಶಂಕರ್ ಗೆ 6 ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದು ಅಥವಾ ಎಂಎಲ್ ಸಿ ಯಾಗಿ ಗೆದ್ದರೆ ಸಚಿವ ಸ್ಥಾನ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಡಿಸಿಎಂ ಹುದ್ದೆಯ ಕುರಿತು ರೇಣುಕಾಚಾರ್ಯ ಸಹಿ ಸಂಗ್ರಹಿಸಿಲ್ಲ. ಪಕ್ಷದ ವರಿಷ್ಠರು ಡಿಸಿಎಂ ಹುದ್ದೆಯ ವಿವಾದಕ್ಕೆ ತೆರೆಯೆಳೆಯಲಿದ್ದಾರೆ. ಡಿಸಿಎಂ ಕುರಿತು ವೈಯಕ್ತಿಕ ಯಾವುದೇ ಅಭಿಪ್ರಾಯವಿಲ್ಲ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದರು.
ಗಡಿ ವಿಚಾರವಾಗಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಕೆಲ ಸಚಿವರು ದೊಡ್ಡವರಾಗುವ ಭ್ರಮೆಯಲ್ಲಿದ್ದಾರೆ. ನಾವು ನೆಲ ಜಲ ವಿಚಾರದಲ್ಲಿ ಯಾವ ರಾಜ್ಯದ ತಂಟೆಗೆ ಹೋಗಿಲ್ಲ. ವಿವಾದವನ್ನು ಹುಟ್ಟುಹಾಕಿಲ್ಲ. ಕಾನೂನು ಬದ್ದವಾಗಿದ್ದರೆ ನೆಲ- ಜಲವನ್ನ ಬೇರೆ ರಾಜ್ಯಗಳಿಗೆ ಬಿಡಲಾಗುತ್ತೆ. ಇಲ್ಲವಾದ್ರೆ ಒಂದು ಇಂಚು ಕೂಡ ಜಾಗವನ್ನ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ