ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರದಬ್ಬಿ
Team Udayavani, Aug 10, 2018, 5:08 PM IST
ಶಿವಮೊಗ್ಗ: ಅಕ್ರಮವಾಗಿ ದೇಶದಲ್ಲಿ ನೆಲೆಯೂರಿರುವ ಬಾಂಗ್ಲಾ ವಲಸಿಗರನ್ನು ಕೂಡಲೇ ಹೊರಕಳಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ನಾಗರಿಕ ನೋಂದಣಿಯಿಂದ ಅಸ್ಸಾಂ ರಾಜ್ಯದಲ್ಲಿರುವ ಬಾಂಗ್ಲಾ ವಲಸಿಗರನ್ನು ಗುರುತಿಸಿ ಕ್ರಮ ಕೈಗೊಳ್ಳಲು ಸಹಕಾರಿಯಾಗಿದೆ. ಪೊಳ್ಳು ಸೆಕ್ಯುಲರ್ವಾದಿಗಳು, ಪ್ರಗತಿ ವಿರೋಧಿ ಚಿಂತಕರು ಪ್ರಮುಖವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ದುರುದ್ದೇಶದಿಂದ ಕೂಡಿದ ರಾಜಕೀಯ ಲೆಕ್ಕಾಚಾರ ಹಾಗೂ ಮತ ಬ್ಯಾಂಕ್ಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ದೂರಿದರು.
4 ಕೋಟಿಗೂ ಹೆಚ್ಚು ಬಾಂಗ್ಲಾ ವಲಸಿಗರು ಭಾರತ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಬಾಂಗ್ಲಾ ನುಸುಳುಕೋರರಿಂದ ದೇಶದ ಆಂತರಿಕ ಭದ್ರತೆಗೆ ಧಕ್ಕೆಯಾಗಿ ಸಾಮಾಜಿಕ ಸಾಮರಸ್ಯ ದೊಡ್ಡಮಟ್ಟದಲ್ಲಿ ಹದಗೆಡುವ ಆತಂಕದ ವಾತಾವರಣ ಸೃಷ್ಟಿಸಿದೆ ಎಂದರು.
ಬಾಂಗ್ಲಾ ವಲಸಿಗರಿಂದ ನಮ್ಮ ದೇಶದ ನಾಗರಿಕರು ಎಲ್ಲ ರೀತಿಯ ಮೂಲಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ದೇಶದ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ ಅಸ್ಸಾಂ ರಾಜ್ಯದಲ್ಲಿ ನಡೆದ ಪೌರತ್ವ ನೋಂದಣಿ ಅಭಿಯಾನದಲ್ಲಿ 40 ಲಕ್ಷಕ್ಕೂ ಅಧಿಕ ಬಾಂಗ್ಲಾ ನುಸುಳುಕೋರರು ನೆಲೆಸಿರುವ ಬಗ್ಗೆ ಅಘಾತಕಾರಿ ಸಂಗತಿ ಹೊರಬಿದ್ದಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮಾಹಿತಿ ಪ್ರಕಾರ ಕರ್ನಾಟಕದಲ್ಲೂ 20 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ನುಸುಳುಕೋರರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಮಾಹಿತಿ ಇದೆ. ನಿರಾಶ್ರಿತರೆಂಬ ಹೆಸರಿನಲ್ಲಿ ದೇಶದ ಸೌಲಭ್ಯ ಪಡೆದು ದೇಶಕ್ಕೆ ಮಾರಕವಾಗಿರುವ ಭಯೋತ್ಪಾದನೆ, ಕಳ್ಳತನ, ಮಾದಕ ವಸ್ತು ಅವ್ಯವಹಾರ, ವೇಶ್ಯಾವಾಟಿಕೆ ಸೇರಿದಂತೆ ಇನ್ನಿತರ ದುಷ್ಕೃತ್ಯಗಳಲ್ಲಿ ತೊಡಗಿದ್ದಾರೆ. ದೇಶದ ಗಡಿಭಾಗ ಸೇರಿದಂತೆ ಎಲ್ಲೆಡೆ ಬಾಂಗ್ಲಾ ವಲಸಿಗರು ಹೆಚ್ಚಾಗಿದ್ದು, ಇವರು ಉಗ್ರಗಾಮಿ ಸಂಘಟನೆಯ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಇವರಿಂದ ದೇಶದಲ್ಲಿ ಕಾನೂನುಬಾಹಿರ ಚಟುವಟಿಕೆ ಮತ್ತು ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದೆ ಕರ್ನಾಟಕದ ರಾಮನಗರದಲ್ಲಿ ಸೆರೆಸಿಕ್ಕ ಶಂಕಿತ ಉಗ್ರ ಕೌಸರ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.
ದೇಶದ ನಾಗರಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮ ವಲಸಿಗರನ್ನು ದೇಶದ ಗಡಿಯಿಂದ ಹೊರ ಹಾಕಬೇಕೆಂದು ಒತ್ತಾಯಿಸಿ ರಾಷ್ಟ್ರಪತಿಗಳಿಗೆ, ಕೇಂದ್ರ ಗ್ರಹ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು ಜಾಧವ್, ಬಜರಂಗ ದಳ ಜಿಲ್ಲಾ ಸಂಯೋಜಕ ಎಚ್.ಕೆ. ದೀನದಯಾಳು, ಪ್ರಮುಖರಾದ ಎಸ್.ಎನ್. ಚನ್ನಬಸಪ್ಪ, ಎಸ್. ದತ್ತಾತ್ರಿ, ನಟರಾಜ್, ಚಂದ್ರಕಾಂತ್, ಚಂದ್ರಶೇಖರ್, ಜಗದೀಶ್ ಚಂದ್ರ, ಮಾಲತೇಶ್, ರಾಜು ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ