ಅಕ್ರಮ ಮರಳು ಸಾಗಾಟ: ಲಾರಿ ವಶಕ್ಕೆ
Team Udayavani, May 17, 2022, 2:18 PM IST
ತೀರ್ಥಹಳ್ಳಿ: ಭಾನುವಾರ ಸಂಜೆಯ ವೇಳೆ ಮರಳನ್ನು ಡಬ್ಲಿಂಗ್ ಮಾಡಿಕೊಂಡು ಬರುತ್ತಿದ್ದ ಲಾರಿಯನ್ನು ಪೊಲೀಸರು ಕುಶಾವತಿ ಬಳಿ ಹಿಡಿದಿದ್ದಾರೆ. ತಾಲೂಕಿನ ಮಳಲೂರು, ಆಂದಿನಿ, ಬುಕ್ಲಾಪುರದಲ್ಲಿ ಪ್ರತಿದಿನ ಡಬ್ಲಿಂಗ್ ಮಾಡಲಾಗುತ್ತದೆ. ಆದರೆ ಇಲ್ಲಿ ಯಾವ ರೀತಿಯ ತಪಾಸಣೆಯೂ ನಡೆಯಲ್ಲ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಕರೆಗೆ ಸ್ಪಂದಿಸುವುದಿಲ್ಲವೆಂಬುದು ಸ್ಥಳೀಯರ ಆರೋಪವಾಗಿದೆ.
ಮಾಮೂಲಿಯಾಗಿ ಮರಳು ಕ್ವಾರಿ ನಿಯಮದ ಪ್ರಕಾರ 8 ಟನ್ ಮರಳನ್ನು ಮಾತ್ರ ಲಾರಿಗೆ ತುಂಬಿಸಬೇಕೆಂಬ ನಿಯಮವಿದೆ. ಆದರೆ ಈ ನಿಯಮವನ್ನೆಲ್ಲಾ ಗಾಳಿಗೆ ತೂರಲಾಗಿದೆ. ಒಂದು ಲಾರಿಗೆ 25 ಟನ್ ಮರಳನ್ನು ತುಂಬಲಾಗುತ್ತದೆ. ಇದನ್ನೇ ಡಬ್ಲಿಂಗ್ ಎನ್ನಲಾಗುತ್ತದೆ. ಒಂದೇ ಬಿಲ್ಲು ಹಿಡಿದು 3 ಪಟ್ಟು ಲೋಡ್ ಹೆಚ್ಚಾಗುತ್ತದೆ. ಕ್ವಾರಿಗಳಲ್ಲಿ ಡಬ್ಲಿಂಗ್ ಮಾಡಿ ವಿಪರೀತ ಮರಳು ತುಂಬುತ್ತಿರುವ ಗುತ್ತಿಗೆದಾರನ ವಿರುದ್ಧ ಕ್ರಮ ಜರುಗಿಸುವುದು ಯಾವಾಗ?
ಭಾನುವಾರ ರಾತ್ರಿ ಮೂರು ಲಾರಿಗಳನ್ನು ಸೀಜ್ ಮಾಡಿದ್ದು ಸೀಜ್ ಆದ ಪ್ರತಿ ಲಾರಿಗಳಲ್ಲಿ ಪತ್ತೆಯಾದ ಮರಳು ಬರೋಬ್ಬರಿ 25 ಟನ್ ಲೋಡು ಇದೆ. ಹೀಗೆ ತುಂಬುವ ಲಾರಿಗಳನ್ನು ಮಾತ್ರ ಸೀಜ್ ಮಾಡುವುದು ಮಾತ್ರವಲ್ಲದೆ ಗುತ್ತಿಗೆದಾರನ ವಿರುದ್ಧ ಕ್ರಮ ಜರುಗಿಸಬೇಕು. ತಾಲೂಕಿನಾದ್ಯಂತ ಹೇರಳವಾಗಿರುವ ಅಕ್ರಮ ಮರಳು ಲೂಟಿಯಾಗುವುದನ್ನು ತಡೆಯುವುದು ಯಾವಾಗ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ