ಅಸಮರ್ಪಕ ವಿದ್ಯುತ್ ಪೂರೈಕೆಗೆ ಬೇಸತ್ತು ಮೆಸ್ಕಾಂ ಕಚೇರಿಗೆ ಘೇರಾವ್
Team Udayavani, Mar 10, 2022, 4:13 PM IST
ಸಾಗರ: ಅಸಮರ್ಪಕ ವಿದ್ಯುತ್ ಪೂರೈಕೆಗೆ ಬೇಸತ್ತು ತಾಲೂಕಿನ ಕುಡಿಗೆರೆ ಗ್ರಾಮಸ್ಥರು, ಪಂಪ್ಸೆಟ್ ಬಳಕೆದಾರ, ರೈತರು ತ್ಯಾಗರ್ತಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ತ್ಯಾಗರ್ತಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀಧರ ಕುಡಿಗೆರೆ, ರೈತರು ಸಮಸ್ಯೆ ಉಂಟಾದರೂ ಮುಂದೆ ಸರಿಹೋಗುತ್ತದೆ ಎಂಬ ನಿರೀಕ್ಷೆಯಿಂದ ಸುಮ್ಮನೆ ಇದ್ದಾರೆ. ಆದರೆ ಇನ್ನು ತಾಳ್ಮೆ ವಹಿಸಲು ಸಾಧ್ಯವಿಲ್ಲ. ಇದು ರೈತರ ಜನಸಾಮಾನ್ಯರ ಬದುಕಿನ ಪ್ರಶ್ನೆ ಯಾಗಿದೆ. ಇಲ್ಲಿನ ಅಧಿಕಾರಿಗಳು ಸಿಬ್ಬಂದಿ ರೈತರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಪ್ರತಿಭಟನೆ ಸುದ್ದಿ ತಿಳಿದು ಪಲಾಯನ ಮಾಡಿದ್ದಾರೆ. ಇದು ಹೀಗೆಯೇ ಮುಂದುವರೆದರೆ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಎಚ್ಚರಿಸಿದರು.
ಒಣಗುತ್ತಿರುವ ಬೇಸಿಗೆ ಬೆಳೆಗಳು ಹಾಗೂ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಈ ಭಾಗದ ಜನರಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಸಮಸ್ಯೆಯಿಂದಾಗಿ ದಿನ ಕಳೆದಂತೆ ಬದುಕು ದುಸ್ತರವಾಗಿದೆ. ಪ್ರತಿದಿನ ಸರ್ಕಾರದ ವಿರುದ್ಧ ಹಾಗೂ ಮೆಸ್ಕಾಂ ಕಾರ್ಯವೈಖರಿ ಬಗ್ಗೆ ಸಿಡಿದೇಳುವ ಸ್ಥಿತಿ ನಿರ್ಮಾಣವಾಗಿದೆ. ಅನೇಕ ವರ್ಷಗಳಿಂದ ತ್ಯಾಗರ್ತಿ ಭಾಗದ ವಿದ್ಯುತ್ ಪೂರೈಕೆ ಸಮಸ್ಯೆಯಿಂದಾಗಿ ರೈತರ ಬೆಳೆಗಳಿಗೆ ನೀರು ಸರಬರಾಜು ವ್ಯತ್ಯಯ ಉಂಟಾಗಿದೆ. ವೋಲ್ಟೇಜ್ ಸಮಸ್ಯೆಯಿಂದ ಮೋಟರ್ ಸುಟ್ಟು ಹೋಗುತ್ತಿದೆ. ಸಮಸ್ಯೆ ಬಗೆಹರಿಸಲು ಯಾವುದೇ ಅಧಿಕಾರಿಗಳೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶದ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ವಿದ್ಯುತ್ ಬಳಕೆದಾರ ರೈತರು, ಕಾರ್ಮಿಕರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ಹೋರಾಟಕ್ಕೆ ಸಿದ್ಧರಾಗುತ್ತಿದ್ದೇವೆ ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ಸಾಗರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರಕ್ಕೆ ಕೆಲವು ದಿನಗಳ ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರಮುಖ ಮುಖಂಡರಾದ ಜಯದೇವಸ್ವಾಮಿ, ಸದಾನಂದ, ಹಾಲೇಶ, ಕಿರಣ, ರಮೇಶ, ಆನಂದ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?