ಅಕ್ರಮ ಜಾನುವಾರು ಸಾಗಾಟ; ಪೊಲೀಸ್ ವಶ
Team Udayavani, Oct 30, 2021, 6:00 PM IST
ಸಾಗರ: ತಾಲೂಕಿನ ಭೀಮನಕೋಣೆ ಸಮೀಪದ ಹರುಡಿಕೆ ನಾಲ್ಕು ರಸ್ತೆಯ ಬಳಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಎರಡು ಜಾನುವಾರು ಸಾಗಿಸುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಹಿಡಿದು ಭಜರಂಗದಳ ಕಾರ್ಯಕರ್ತರ ಮೂಲಕ ಗ್ರಾಮಾಂತರ ಠಾಣೆಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ.
ಗೂಡ್ಸ್ ವಾಹನದಲ್ಲಿ ಎರಡು ಹೋರಿಯನ್ನು ಸಾಗಿಸಲಾಗುತ್ತಿತ್ತು. ಸ್ಥಳೀಯರು ಅನುಮಾನಗೊಂಡು ವಾಹನ ತಡೆದಿದ್ದಾರೆ. ತಕ್ಷಣ ವಿಷಯವನ್ನು ಭಜರಂಗ ದಳ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಭಜರಂಗ ದಳ ಕಾರ್ಯಕರ್ತರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ನಂತರ ಗೋವುಗಳನ್ನು ಗ್ರಾಮಾಂತರ ಠಾಣೆಗೆ ತರಲಾಯಿತು. ವಾಹನ ಚಾಲಕ ಹಾಗೂ ಮತ್ತೊಬ್ಬರನ್ನು ವಿಚಾರಣೆಗೊಳಪಡಿಸಲಾಗಿದೆ. ಪಿಕಪ್ನ ಮಾಲಿಕ, ಚಾಲಕ ಕಾಗೋಡು ಸತೀಶ, ಕೇಶವ ಅತ್ತಿಸರ ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು