ತೀರ್ಥಹಳ್ಳಿ: ಅಪ್ರಾಪ್ತೆ ಮದುವೆಯಾಗಿ ಅತ್ಯಾಚಾರ! : ಯುವಕ ಅಂದರ್
Team Udayavani, Jun 20, 2021, 11:05 AM IST
ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣದ ಸಮೀಪದ ಯುವತಿಯನ್ನು ಒತ್ತಾಯಪೂರ್ವಕವಾಗಿ ಮದುವೆಯಾಗಿ ಅತ್ಯಾಚಾರವೆಸಗಿದ ಆರೋಪದಡಿ ಯುವಕನೊಬ್ಬನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ವರದಿಯಾಗಿದೆ.
ತೀರ್ಥಹಳ್ಳಿ ತುಂಗಾ ಕಾಲೇಜಿನ ಸಮೀಪದ ವಾಸಿ ಕಮಲ್ ಆರೋಪಿ. ತೀರ್ಥಹಳ್ಳಿ ಪಟ್ಟಣದ ಕಾಲೇಜು ಒಂದರಲ್ಲಿ ಗೂರ್ಖ ಕೆಲಸ ಮಾಡಿಕೊಂಡು ಅನೇಕ ವರ್ಷಗಳಿಂದ ಇದ್ದ ಗಣೇಶ್ ಎಂಬುವರ ಮಗ ಕಮಲ್ ಜೂ.11ರಂದು ಅಪ್ರಾಪ್ತ ಯುವತಿಯೋರ್ವಳನ್ನು ಪುಸಲಾಯಿಸಿ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಪಟ್ಟಣದ ಸಮೀಪದ ದೇವಸ್ಥಾನವೊಂದರಲ್ಲಿ ಬೆಳಗಿನ ಜಾವ ಬಲಾತ್ಕಾರವಾಗಿ ತಾಳಿ ಕಟ್ಟಿದ್ದಾನೆ.
ಬಳಿಕ 17 ವರ್ಷದ ವಯಸ್ಸಿನ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಮದುವೆಯಾಗಿದ್ದಾನೆ. ಬಳಿಕ ತೀರ್ಥಹಳ್ಳಿ ಪಟ್ಟಣದ ಆರಗ ರಸ್ತೆಯಲ್ಲಿ ಸುರಾನಿ ಸಮೀಪದ ಪರಿಚಯದವರ ತೋಟಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿಯ ಪೋಷಕರು ಮತ್ತು ಯುವತಿ ದೂರು ನೀಡಿದ್ದಾರೆ.
ಇದನ್ನೂ ಓದಿ: ಕುಂದಾನಗರಿ ಬೆಳಗಾವಿಯಲ್ಲಿ ಶತಕದ ಗಡಿ ದಾಟಿದ ಪೆಟ್ರೋಲ್ ದರ!
ಸುರಾನಿಯ ತೋಟದಲ್ಲಿ ಅಡಗಿದ್ದ ಕಮಲ್ ಎಂಬಾತನನ್ನು ಪತ್ತೆ ಹಚ್ಚಿ ತೀರ್ಥಹಳ್ಳಿ ಪೊಲೀಸರು ಠಾಣೆಗೆ ಕರೆ ತಂದು ಯುವತಿಯ ದೂರಿನ ಮೇರೆಗೆ ಅಪ್ರಾಪ್ತ ಯುವತಿಯ ಮೇಲೆ ಲೈಂಗಿಕ ಕಿರುಕುಳದ ಪ್ರಕರಣ ಪೋಸ್ಕೋ ಕೇಸ್ ಹಾಕಲಾಗಿದೆ.
ಬಲಾತ್ಕಾರವಾಗಿ ಮದುವೆಯಾದ ಪ್ರಕರಣ,ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಈತನ ಮೇಲೆ ಕೇಸ್ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಜೈಲಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ