ವಿಐಎಸ್‌ಎಲ್‌ ಅಭಿವೃದ್ಧಿಪಡಿಸುವ ಜವಾಬ್ದಾರಿ ಹೆಚ್ಚಿದೆ

ಕೇಂದ್ರ ಸರಕಾರ ಕಾರ್ಖಾನೆ ಖಾಸಗೀಕರಣ ಪ್ರಕ್ರಿಯೆ ಹಿಂಪಡೆದಿದೆ: ಸಂಸದ ಬಿ.ವೈ.ರಾಘವೇಂದ್ರ

Team Udayavani, Oct 16, 2022, 4:06 PM IST

17

ಶಿವಮೊಗ್ಗ: ಕೇಂದ್ರ ಸರ್ಕಾರ ಭದ್ರಾವತಿಯ ವಿಐಎಸ್‌ ಎಲ್‌ ಕಾರ್ಖಾನೆಯ ಖಾಸಗೀಕರಣ ಪ್ರಕ್ರಿಯೆಯನ್ನು ಹಿಂಪಡೆದಿರುವುದರಿಂದ ಕಾರ್ಖಾನೆಯ ಅಭಿವೃದ್ಧಿಯ ಜವಾಬ್ದಾರಿ ಹೆಚ್ಚಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶನಿವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಷ್ಟದಲ್ಲಿದ್ದ ಕಾರ್ಖಾನೆಯನ್ನು ಬಂಡವಾಳ ತೊಡಗಿಸಿ ಅಭಿವೃದ್ಧಿಗಾಗಿ ಪ್ರಯತ್ನಿಸಲಾಗುತ್ತಿತ್ತು. ಮೂರು ಬಾರಿ ಕೇಂದ್ರ ಸಚಿವರನ್ನು ಕಾರ್ಖಾನೆಗೆ ಭೇಟಿ ಮಾಡಿಸಿದ್ದರೂ ಸಹ ಅಭಿವೃದ್ಧಿಯಾಗಿರಲಿಲ್ಲ. ಇದರಿಂದಾಗಿ ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ಯತ್ನಿಸಿ ಜಾಗತಿಕ ಟೆಂಡರ್‌ ಮೂಲಕ ಖಾಸಗೀಕರಣ ಪ್ರಕ್ರಿಯೆಗೆ ಯತ್ನಿಸಿತ್ತು. ಆದರೆ ಖಾಸಗಿಯವರು ಕಾರ್ಖಾನೆ ಕೊಳ್ಳಲು ಮುಂದೆ ಬರದ ಹಿನ್ನೆಲೆಯಲ್ಲಿ ಖಾಸಗೀಕರಣ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದರು.

ಕಾರ್ಖಾನೆಗೆ ಬಂಡವಾಳ ತೊಡಗಿಸಲು ಸಾಕಷ್ಟು ಬಾರಿ ಪ್ರಯತ್ನ ನಡೆದು ಕೇಂದ್ರ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಂಡವಾಳ ತೊಡಗಿಸಲು ಯತ್ನಿಸಲಾಗಿತ್ತು. ಆದರೆ, ಈಗ ಕೇಂದ್ರ ಸರ್ಕಾರ ಖಾಸಗೀಕರಣ ಪ್ರಕ್ರಿಯೆಯನ್ನು ಹಿಂಪಡೆದಿದ್ದು, ಎಲ್ಲರೂ ಸೇರಿ ಮುಂದಿನ ದಿನಗಳಲ್ಲಿ ಕಾರ್ಖಾನೆಯ ಅಭಿವೃದ್ಧಿಗಾಗಿ ಚರ್ಚಿಸಿ ಉಳಿಸಿ ಬೆಳೆಸುವ ಪ್ರಯತ್ನ ಮಾಡಲಾಗುವುದು ಹಾಗೂ ಕಾರ್ಖಾನೆಯನ್ನು ಯಶಸ್ವಿ ದಿಕ್ಕಿನತ್ತ ಕೊಂಡೊಯ್ಯಲಾಗುವುದು ಎಂದರು.

ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಕಾರ್ಖಾನೆಯ ಅಭಿವೃದ್ಧಿಗಾಗಿ ಹೆಚ್ಚಿನ ಬಂಡವಾಳ ತೊಡಗಿಸಲು ಕೇಂದ್ರ ಸಚಿವರ ಮೇಲೆ ಒತ್ತಡ ಹೇರಲಾಗುವುದು ಎಂದರು.

ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷ ಜಿ. ಜಗದೀಶ್‌ ಮಾತನಾಡಿ, 2016 ರಿಂದ ಕಾರ್ಖಾ ನೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. 1918 ರಲ್ಲಿ ಆರಂಭವಾದ ಕಾರ್ಖಾನೆ ವಿಶ್ವವಿಖ್ಯಾತವಾಗಿದ್ದು, ಖಾಸಗಿ ಕಾರ್ಖಾನೆಗಳ ಪೈಪೋಟಿಯಿಂದಾಗಿ ಸ್ಪರ್ಧೆ ನೀಡಲು ಆಗಲಿಲ್ಲ. ಈಗಿರುವ ಯಂತರೋಪಕರಣಗಳು ಹಳೆಯದಾಗಿದ್ದು, ಉತ್ಪಾದನೆ ಸಹ ಕುಂಠಿತವಾಗಿದೆ. ಸಾಕಷ್ಟು ಬಾರಿ ಕೇಂದ್ರ ಸರ್ಕಾರಕ್ಕೆ ಬಂಡವಾಳ ಹೂಡಲು ಮನವಿ ಹಾಗೂ ಹೋರಾಟ ಮಾಡಿದ್ದರೂ ಸಹ ಬಂಡವಾಳ ಹೂಡಿಕೆಯಾಗಿಲ್ಲ. ಇದರಿಂದಾಗಿ ಉತ್ಪಾದನೆ ಕಡಿಮೆಯಾಗುವುದರ ಜೊತೆಗೆ ನಷ್ಟವೂ ಆಗುತ್ತಿದೆ ಎಂದರು.

3 ದಶಕಗಳ ಕಾಲ ವಿಶ್ವವಿಖ್ಯಾತಿ ಪಡೆದು ಉತ್ಪಾದನೆಯಲ್ಲಿ ಪಾರಮ್ಯ ಮೆರೆದಿದ್ದ ಕಾರ್ಖಾನೆ ಒಂದು ಕಾಲದಲ್ಲಿ 12 ಸಾವಿರಕ್ಕೂ ಹೆಚ್ಚು ಕಾಯಂ ಕಾರ್ಮಿಕರು ಮತ್ತು 4 ಸಾವಿರ ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ನೀಡಿತ್ತು. 1980 ರ ನಂತರ 50-60 ವರ್ಷ ಹಳೆಯದಾದ ಯಂತ್ರೋಪಕರಣಗಳು ಮತ್ತು ಹಳೆಯ ತಾಂತ್ರಿಕತೆಯಿಂದಾಗಿ ನಿರಂತರ ನಷ್ಟ ಅನುಭವಿಸುತ್ತಾ ಬಂದ ಪರಿಣಾಮ ರಾಜ್ಯ ಸರ್ಕಾರ ಕಾರ್ಖಾನೆಯನ್ನು ಕೇಂದ್ರ ಸರ್ಕಾರದ ಒಡೆತನದ ಭಾರತೀಯ ಉಕ್ಕು ಪ್ರಾಕಾರಕ್ಕೆ ಪುಕ್ಕಟೆಯಾಗಿ ವಹಿಸಿಕೊಡಲಾಗಿತ್ತು. ಆದರೆ, ಉಕ್ಕು ಪ್ರಾಧಿಕಾರ ಬಂಡವಾಳ ತೊಡಗಿಸದೇ ಇರುವುದರಿಂದ ಕಾರ್ಖಾನೆ ಇಂದು ನಷ್ಟದಲ್ಲಿದೆ ಎಂದರು.

ಹಲವಾರು ವರ್ಷಗಳಿಂದ ವಾರ್ಷಿಕ 100 ಕೋಟಿ ರೂ. ನಷ್ಟ ಅನುಭವಿಸುತ್ತಿದ್ದ ಕಾರ್ಖಾನೆ ಇತ್ತೀಚಿನ ವರ್ಷಗಳಲ್ಲಿ ಕಾರ್ಮಿಕರ ಪ್ರಯತ್ನದಿಂದಾಗಿ ನಷ್ಟ 35 ಕೋಟಿ ರೂ.ಗೆ ತಲುಪಿದೆ. ಕಾರ್ಖಾನೆಯನ್ನು ಖಾಸಗೀಕರಣ ಮುಂತಾದ ವ್ಯರ್ಥ ಪ್ರಯತ್ನಗಳಲ್ಲಿ ಕಾಲಹರಣ ಮಾಡದೇ ಕೇಂದ್ರ ಸರ್ಕಾರ ಸುಮಾರು ಕನಿಷ್ಠ 2 ಸಾವಿರ ಕೋಟಿ ರೂ. ಬಂಡವಾಳ ತೊಡಗಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾರ್ಖಾನೆಯ ಚಿತ್ರಣವೇ ಬದಲಾಗಿ ಮತ್ತೆ ಗತವೈಭವವನ್ನು ಕಾಣಬಹುದಾಗಿದೆ ಎಂದರು.

ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಖಾಸಗೀಕರಣ ಪ್ರಕ್ರಿಯೆಯನ್ನು ಆರಂಭಿಸಿದಾಗ ಸಂಸದ ಬಿ.ವೈ. ರಾಘವೇಂದ್ರ ಅವರು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಲು ಬಿಡುವುದಿಲ್ಲ ಎಂದು ಮೂರ್ನಾಲ್ಕು ಬಾರಿ ಸಂಘದ ಪದಾಧಿಕಾರಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ಕೇಂದ್ರ ಸಚಿವರನ್ನು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಭೇಟಿ ಮಾಡಿಸಿ ಬಂಡವಾಳ ಹೂಡಬೇಕೆಂದು ಒತ್ತಡ ಹೇರಿದ್ದರು ಎಂದ ಅವರು, ಖಾಸಗೀಕರಣ ಪ್ರಕ್ರಿಯೆ ಹಿಂಪಡೆದಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಿಸುತ್ತೇವೆ. ಹಾಗೂ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮತ್ತು ಶ್ರೇಯೋಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಬಿ.ವೈ. ರಾಘವೇಂದ್ರ ಅವರಿಗೆ ಅಭಿನಂದಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೇಯರ್‌ ಸುನೀತಾ ಅಣ್ಣಪ್ಪ, ಕಾರ್ಖಾನೆ ಕಾರ್ಮಿಕರ ಸಂಘದ ಪದಾಕಾರಿಗಳಾದ ಬಿ.ಸಿ. ಶೈಲಶ್ರೀ, ಯು.ಎ. ಬಸಂತಕುಮಾರ್‌, ಕೆ.ಆರ್‌. ಮನು, ಎಸ್‌. ಮೋಹನ್‌, ಸದಸ್ಯರಾದ ಕೆ.ಎಂ. ಮಂಜುನಾಥ್‌, ಪಿ. ಕುಮಾರಸ್ವಾಮಿ, ಡಿ. ಸುನಿಲ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.