ಭಾರತ ಶಕ್ತಿಶಾಲಿ ರಾಷ್ಟ್ರವಾಗುವುದು ಖಚಿತ: ವೆಂಕಟೇಶ್
Team Udayavani, Sep 4, 2017, 5:51 PM IST
ಶಿವಮೊಗ್ಗ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಮಕ್ಕಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿತ್ತಿದರೆ ಇವರು ಮುಂದೆ ಸತ್ಪ್ರಜೆಗಳಾಗುತ್ತಾರೆ. ಇಂತಹ ಸತ್ಪ್ರಜೆಗಳಿಂದ ಭಾರತ ಮುಂದೊಂದು ದಿನ ಜಗತ್ತಿನ ಬಲಶಾಲಿ ರಾಷ್ಟ್ರವಾಗುವುದು ನಿಶ್ಚಿತ ಎಂದು ಉತ್ತಮ ಪ್ರಜಾ
ಪಾರ್ಟಿಯ ಶಿವಮೊಗ್ಗ ಘಟಕದ ಮುಖ್ಯಸ್ಥ ವೆಂಕಟೇಶ್ ಭರವಸೆ ವ್ಯಕ್ತಪಡಿಸಿದರು.
ಉತ್ತಮ ಪ್ರಜಾ ಪಾರ್ಟಿ ಶಿವಮೊಗ್ಗ ವತಿಯಿಂದ ಇಲ್ಲಿನ ಲಕ್ಷ್ಮೀ ಗೆಲಾಕ್ಸಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲಾ ಸ್ಪರ್ಧೆ (ಗಣಪತಿ ಚಿತ್ರ), ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡವರಿಗೆ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದಲ್ಲಿ ಜನಸಾಮಾನ್ಯರಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ. ಇಂತಹ ಸಾಮಾಜಿಕ ಬದಲಾವಣೆ ತರುವ ಉದ್ದೇಶದಿಂದ ಚಲನಚಿತ್ರ ನಟ ಉಪೇಂದ್ರ ಅವರು ಉತ್ತಮ
ಪ್ರಜಾ ಪಾರ್ಟಿಯನ್ನು ಸ್ಥಾಪಿಸಿದ್ದು, ಇದಕ್ಕೆ ಜನಸಾಮಾನ್ಯರು ಬೆಂಬಲ ನೀಡಬೆಕೆಂದು ಮನವಿ ಮಾಡಿದರು. ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಂವಿಧಾನದ ಆಧಾರ ಸ್ಥಂಬಗಳಾಗಿವೆ. ಪತ್ರಿಕಾ ರಂಗವನ್ನು 4ನೇ ಅಂಗವಾಗಿ ಪರಿಗಣಿಸಲಾಗಿದೆ. ಒಂದು ಮನೆಗೆ ನಾಲ್ಕು ಗೋಡೆಗಳಿರುವಂತೆ ದೇಶವೆಂಬ ಮನೆಗೆ ಈ ನಾಲ್ಕು ಅಂಗಗಳು ಗೋಡೆಗಳಂತಿವೆ. ಈ ಗೋಡೆಗಳಿಗೆ ಜನಸಾಮಾನ್ಯರೇ ಭದ್ರ ಬುನಾದಿಯಾಗಿದ್ದಾರೆಂದರು.
ಭ್ರಷ್ಟಾಚಾರ, ಜಾತಿ ವೈಷಮ್ಯ, ಅಸಮಾನತೆ, ಬಡತನ, ಜಾತಿಯತೆ ಮತ್ತಿತರ ಸಮಸ್ಯೆಗಳು ಸಮಾಜವನ್ನು ಕಾಡುತ್ತಿವೆ. ಸಮಸ್ಯೆಗಳ ನಿವಾರಣೆಗೆ ಜನಸಾಮಾನ್ಯರಿಂದ ಮಾತ್ರ ಸಾಧ್ಯ. ಜನರಿಂದ ಜನರಿಗಾಗಿ ಜನರಿಗೋಸ್ಕರ ಉತ್ತಮ ಪ್ರಜಾ ಪಾರ್ಟಿಯನ್ನು ಸ್ಥಾಪಿಸಲಾಗಿದೆ. ಈ
ಮೂಲಕ ಸಾಮಾಜಿಕ ಸಮಸ್ಯೆಗಳ ನಿವಾರಣೆಗಳ ಜೊತೆಗೆ ಸಾಮಾಜಿಕ ಬದಲಾವಣೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮಂಜು, ಹರೀಶ್, ಮಾದವನ್, ಮಹೇಶ್ ಚಿಕ್ಕಮಠ, ಸಂಧೀಪ್,ರಾಜೆಶ್, ಅಕ್ಷತಾ ವೆಂಕಟೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?