ಸಿಬ್ಬಂದಿಗೆ ಸೋಂಕು: ಕ್ವಾರಂಟೈನ್ ಆದ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿ
Team Udayavani, Jul 14, 2020, 1:50 PM IST
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ಧ ಓರ್ವ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸಚಿವರು ಕೂಡ ಹೋಂ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
ಹೀಗಾಗಿ ನಿನ್ನೆಯೇ ಸಚಿವ ಈಶ್ವರಪ್ಪ ಹಾಗೂ ಕುಟುಂಬದವರು ಸ್ವಾಬ್ ಟೆಸ್ಟ್ ಮಾಡಿಸಿಕೊಂಡಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.
ಇಂದು ನಡೆಯಬೇಕಿದ್ದ ಪತ್ರಿಕಾಗೋಷ್ಟಿ ಹಾಗೂ ಕಾರ್ಯಕ್ರಮಗಳೆಲ್ಲವೂ ರದ್ದಾಗಿದ್ದು, ನಾಳಿಯಿಂದ ಸಚಿವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ಜಿಲ್ಲಾಧಿಕಾರಿಗೂ ತಟ್ಟಿದ ಕೋವಿಡ್ ಬಿಸಿ.
ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕೂಡ, ಮನೆಯ ಸಿಬ್ಬಂದಿಯೋರ್ವರಿಗೆ ಕೋವಿಡ್ ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ
ಮುಂದಿನ ಮೂರು ದಿನಗಳ ಕಾಲ ಕ್ವಾಂರಟೈನ್ ನಲ್ಲಿರಲು ಡಿಸಿ ನಿರ್ಧರಿಸಿದ್ದು, ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡುತ್ತಿದ್ದಾರೆ. ಮೂರು ದಿನದ ಬಳಿಕ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.