ಅಂತರ್ಜಾಲದಲ್ಲಿನ ಮಾಹಿತಿ ಜ್ಞಾನವಲ್ಲ


Team Udayavani, Jul 31, 2017, 11:58 AM IST

31-SHIV-3.jpg

ಶಿವಮೊಗ್ಗ: ಕನ್ನಡ ಭಾಷೆ ಮತ್ತಷ್ಟು ಶ್ರೀಮಂತಗೊಳ್ಳಲು ವಿಶ್ವದ ಶ್ರೇಷ್ಠ ಎನಿಸುವ ಎಲ್ಲಾ ಸಂಗತಿಗಳೂ ಕನ್ನಡದಲ್ಲೇ ಪ್ರಕಟಗೊಳ್ಳಬೇಕು ಎಂದು ಚಲನಚಿತ್ರ ನಿರ್ದೇಶಕ, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಸಂಘದ 2016ನೇ ಸಾಲಿನ ಪುಸ್ತಕ ಬಹುಮಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಎಲ್ಲಾ ವಿಚಾರಗಳ ಬಗ್ಗೆಯೂ ಕನ್ನಡದಲ್ಲಿ ಸಾಹಿತ್ಯ ಪ್ರಕಟವಾಗಬೇಕು. ಆಗ ಮಾತ್ರ ಭಾಷೆ ಮತ್ತಷ್ಟು ಶ್ರೀಮಂತಗೊಳ್ಳುತ್ತದೆ. ಜತೆಗೆ ಸದೃಢವಾಗುತ್ತದೆ ಎಂದು ಹೇಳಿದರು. ಪ್ರಸ್ತುತ ಆಧುನಿಕ ಕಾಲಘಟ್ಟದಲ್ಲಿ ಪ್ರತಿಯೊಂದು ಮಾಹಿತಿ ಅಂತರ್ಜಾಲ ತಾಣದ ಮೂಲಕ ದೊರಕುತ್ತಿದೆ. ಹಾಗೆ ಸಿಕ್ಕ ಮಾಹಿತಿಯನ್ನು ಕೃತಿಯ ರೂಪಕ್ಕೆ ಇಳಿಸಿದರೆ ತಪ್ಪುಗಳು ಆಗುತ್ತದೆ.  ಸಾಮಾಜಿಕ ಜಾಲತಾಣಗಳಲ್ಲಿ ನಾವು ಪಡೆಯುವ ಮಾಹಿತಿಯನ್ನೇ
ಜ್ಞಾನ ಎಂದು ಅರ್ಥೈಸಿಕೊಳ್ಳುತ್ತಿದ್ದೇವೆ. ಮಾಹಿತಿ ಸಮಸ್ಯೆಗೆ ಪರಿಹಾರವಾಗಬಲ್ಲದೇ ಹೊರತು ಜ್ಞಾನವಾಗುವುದಿಲ್ಲ. ನಾವು ಪಡೆದ ಮಾಹಿತಿ ಅರಿವಾಗಿ ಪರಿವರ್ತನೆಯಾದರೆ ಅದು ಜ್ಞಾನ ಎನಿಸಿಕೊಳ್ಳುತ್ತದೆ ಎಂದರು. 

ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕರೆ ಏನೋ ಆಗಿ ಬಿಡುತ್ತದೆ ಎಂದು ಭಾವಿಸಿದ್ದೆವು ಆದರೆ ಏನೂ ಆಗಲಿಲ್ಲ. ಕನ್ನಡ ಭಾಷೆ ಇನ್ನಷ್ಟು ವಿಸ್ತಾರಗೊಳ್ಳಬೇಕು. ಭಾಷೆಯೆಡೆಗೆ ಪ್ರೀತಿ ಹೊಂದಬೇಕು ಎಂದು ಹೇಳಿದರು. ಜಗತ್ತಿನಲ್ಲಿ 3ನೇ ಮಹಾಯುದ್ಧ ನಡೆದರೆ ಅದು ನೀರಿಗಾಗಿ ಎಂದು ಹೇಳುತ್ತೇವೆ. ಮಂಗಳ ಗ್ರಹದಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರಿದೆ ಎಂದು ತಿಳಿದು ಅಲ್ಲಿಗೆ ತೆರಳಲು ಬುಕ್ಕಿಂಗ್‌ ಶುರುವಾಗಿದೆ. ಆದರೆ ಇಲ್ಲಿರುವ ಅಂತರ್ಜಲದ ಬಳಕೆ ಬಗ್ಗೆ ನಾವು ಯೋಚಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ| ಡಿ.ಎಸ್‌. ಮಂಜುನಾಥ್‌ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಪ್ರೊ| ಎಚ್‌.ಎಸ್‌. ನಾಗಭೂಷಣ ಇದ್ದರು. ಕಾರ್ಯಕ್ರಮದಲ್ಲಿ ವಿವಿಧ ಸಾಹಿತಿಗಳ ಹೆಸರಿನಲ್ಲಿ ನೀಡಲಾಗುವ 12 ಪುಸ್ತಕ ಬಹುಮಾನಗಳನ್ನು ಪ್ರದಾನ ಮಾಡಲಾಯಿತು.

ಪುಸ್ತಕ ಪ್ರಶಸ್ತಿ ಪ್ರದಾನ
ಕುವೆಂಪು ಪ್ರಶಸ್ತಿ- ರೇಖಾ ಕಾಖಂಡಕಿ- ವೈವಸ್ವತ ಕಾದಂಬರಿ, ಪ್ರೊ| ಎಸ್‌.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ- ಡಿ.ಎನ್‌.ಶ್ರೀನಾಥ್‌-ಅಸ್ಸಾಮಿ ಅನುವಾದಿತ ಕೃತಿಗೆ, ಎಂ. ಕೆ. ಇಂದಿರಾ ಪ್ರಶಸ್ತಿ- ಮಧುರಾ ಕರ್ಣಮ್‌- ಆಲದ ನೆರಳು ಕೃತಿಗೆ, ಪಿ. ಲಂಕೇಶ್‌ ಪ್ರಶಸ್ತಿ – ಡಾ.ಮಿರ್ಜಾ ಬಷೀರ್‌-ಜಿನ್ನಿ ಕೃತಿಗೆ, ಡಾ| ಜಿ. ಎಸ್‌. ಶಿವರುದ್ರಪ್ಪ ಪ್ರಶಸ್ತಿ-ವಾಸುದೇವ ನಾಡಿಗ್‌-ಅಲೆ ತಾಕಿದರೆ ದಡ ಕವನ ಸಂಕಲನಕ್ಕೆ, ಡಾ| ಹಾ.ಮಾ. ನಾಯಕ ಪ್ರಶಸ್ತಿ- ಡಾ| 
ಜಿ.ಎಸ್‌.ಭಟ್ಟ- ಮಲೆಯ ಮಾತು ಅಂಕಣ ಬರಹಕ್ಕೆ, ಡಾ| ಯು. ಆರ್‌. ಅನಂತಮೂರ್ತಿ ಪ್ರಶಸ್ತಿ-ಎಚ್‌.ಬಿ. ಇಂದ್ರಕುಮಾರ್‌-ಕಾಣದ ಕಡಲು ಸಣ್ಣ ಕಥಾ ಸಂಕಲನಕ್ಕೆ, ಡಾ| ಕೆ.ವಿ. ಸುಬ್ಬಣ್ಣ ಪ್ರಶಸ್ತಿ-ಸುಬ್ರಾವ ಕುಲಕರ್ಣಿ- ಓಕುಳಿ ಹಾಗೂ ಇತರ ನಾಟಕಗಳು, ಕುಕ್ಕೆ ಸುಬ್ರಹ್ಮಣ್ಯ ಪ್ರಶಸ್ತಿ- ಎಂ.ಜಾನಕಿ ಬ್ರಹ್ಮಾವರ- ನೈಲ್‌ ನದಿಯ ನಾಡಿನಲ್ಲಿ ಪ್ರವಾಸ ಕಥನಕ್ಕೆ, ಹಸೂಡಿ ವೆಂಕಟಶಾಸ್ತ್ರಿ ಪ್ರಶಸ್ತಿ-ಡಾ| ಎ.ಎಸ್‌. ಕುಮಾರಸ್ವಾಮಿ- ಅಂತರ್ಜಲ ಬಳಕೆ ವಿಜ್ಞಾನ ಕೃತಿಗೆ, ನಾ. ಡಿಸೋಜ ಪ್ರಶಸ್ತಿ- ಮತ್ತೂರು ಸುಬ್ಬಣ್ಣ- ಮಕ್ಕಳ ಕಥಾ ಲೋಕ ಮಕ್ಕಳ ಸಾಹಿತ್ಯಕ್ಕೆ ಹಾಗೂ ಡಾ| ಎಚ್‌. ಡಿ. ಚಂದ್ರಪ್ಪ ಗೌಡ- ಡಾ| ಎಚ್‌.ಎಸ್‌. ಮೋಹನ್‌- ವೈದ್ಯ ವಿನೂತನ ಕೃತಿಗೆ ಪ್ರಶಸ್ತಿ ನೀಡಲಾಯಿತು.

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

ರಾಘವೇಂದ್ರ

Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.