ಜಿಲ್ಲಾಧಿಕಾರಿಗಳಿಂದ ಫ್ರೀಡಂ ಪಾರ್ಕ್‌ ಜಾಗ ಪರಿಶೀಲನೆ

ಅಧಿಕಾರಿಗಳಿಗೆ ಡಿಸಿ ಡಾ| ಸೆಲ್ವಮಣಿ ಸೂಚನೆ

Team Udayavani, May 6, 2022, 5:19 PM IST

enne

ಶಿವಮೊಗ್ಗ: ಹಳೇ ಜೈಲು ಆವರಣದಲ್ಲಿರುವ ಫ್ರೀಡಂ ಪಾರ್ಕ್‌ ನಿರ್ವಹಣೆ ಇಲ್ಲದೆ ಅತ್ಯಂತ ಕಳಪೆಯ ಸ್ಥಳವಾಗಿ ಬದಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರು ಹಾಗೂ ಜಿಲ್ಲಾ ಬಿಜೆಪಿ ಮುಖಂಡ ಎಸ್.ದತ್ತಾತ್ರಿ ಅವರ ಮನವಿಯ ಮೇರೆಗೆ ಗುರುವಾರ ಬೆಳಗ್ಗೆ ಜಿಲ್ಲಾಧಿಕಾರಿ ಡಾ| ಸೆಲ್ವಮಣಿ ಮಹಾನಗರ ಪಾಲಿಕೆ, ಸ್ಮಾರ್ಟ್‌ಸಿಟಿ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಮಗ್ರವಾಗಿ ಪರಿಶೀಲಿಸಿದರು.

ಸುಂದರವಾದ ಕಟ್ಟಡದಲ್ಲಿ ನಿರ್ಮಾಣವಾಗಿರುವ ಶೌಚಾಲಯ ಇಂದು ಗಲೀಜಿನ ಕೊಂಪೆಯಾಗಿರುವುದನ್ನು ಗಮನಿಸಿ ಈ ಕಾರ್ಯವನ್ನು ಮಾಡುವ ಸಂಪೂರ್ಣ ಜವಾಬ್ದಾರಿಯನ್ನು ಮಹಾನಗರ ಪಾಲಿಕೆಗೆ ವರ್ಗಾಯಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅದೇ ರೀತಿ ಕುಡಿಯುವ ನೀರಿನ ಬೆಲೆ ಬಾಳುವ ಯಂತ್ರಗಳು ಹಾಳಾಗುತ್ತಿರುವುದನ್ನು ಗಮನಿಸಿ ಇದನ್ನು ನೋಡಿಕೊಳ್ಳುವುದರ ಜೊತೆಗೆ ಶೌಚಾಲಯವನ್ನು ಶುಲ್ಕ ಸಹಿತ ವ್ಯವಸ್ಥೆ ಮಾಡಲು ಟೆಂಡರ್‌ ಕರೆಯುವಂತೆ ಸೂಚಿಸಿದರು. ಇದಕ್ಕೆ ಸ್ಮಾರ್ಟ್‌ಸಿಟಿ ಇಂಜಿನಿಯರ್‌ ಕೃಷ್ಣಪ್ಪ ಹಾಗೂ ಪಾಲಿಕೆಯ ಆಯುಕ್ತ ಮಾಯಣ್ಣಗೌಡ ಅವರು ಸಹ ಸಹಮತಿಸಿದರು. ಸ್ಮಾರ್ಟ್‌ಸಿಟಿಯ ಕಾಮಗಾರಿಯ ನಡುವೆ ಸಿಗುವ ಡಬ್ರೀಜನ್ನೆಲ್ಲಾ ಈ ಪಾರ್ಕ್‌ನೊಳಗೆ ಹಾಕಿರುವುದನ್ನು ಜಿಲ್ಲಾಧಿಕಾರಿಗಳು ಆಕ್ಷೇಪಿಸಿದರು.

ಇಲ್ಲಿ ನಿತ್ಯ ವಾಕಿಂಗ್‌ ಮಾಡುವ ಪಾದಚಾರಿಗಳ ಆಕ್ಷೇಪಗಳಿಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಇಡೀ ಈ ಹಳೇ ಜೈಲ್‌ ಆವರಣದಲ್ಲಿ ಸುತ್ತಲೂ ಆರು ಅಡಿ ಅಗಲದ ಮತ್ತೂಂದು ಮಣ್ಣಿನ ವಾಕಿಂಗ್‌ ಪಾತ್‌ ನಿರ್ಮಿಸಲು ಸೂಚಿಸಿದರು. ಇದರಲ್ಲಿ ಡಬ್ರೀಜ್‌ನ ವಸ್ತುಗಳನ್ನು ಬಳಸಿಕೊಳ್ಳಲು ತಿಳಿಸಿದರು.

ತೆಂಗಿನ ಮರಗಳನ್ನು ರಕ್ಷಿಸುವ ಜೊತೆಗೆ ಇಲ್ಲಿ ಎಲ್ಲಾ ಬಗೆಯ ಆಯುರ್ವೇದ ಕಾಡುಜಾತಿಯ ಮರಗಳನ್ನು ಸಾಕುವ ಜೊತಗೆ ಅವುಗಳ ಹೆಸರನ್ನು ಮಕ್ಕಳಿಗೆ ಪರಿಚಯಿಸುವಂತಹ ಸಸ್ಯ ಸಂಕುಲವನ್ನು ನಿರ್ಮಿಸುವಂತೆ ಸಲಹೆ ನೀಡಿದರು. ಇದಕ್ಕೆ ಅಗತ್ಯವಾದ ಹಣದ ವ್ಯವಸ್ಥೆಯನ್ನು ಪಾಲಿಕೆ ಹಾಗೂ ಜಿಲ್ಲಾಡಳಿತ ನೋಡಿಕೊಳ್ಳುತ್ತದೆ ಎಂದರು.

ಫ್ರೀಡಂ ಪಾರ್ಕ್‌ನ ಮುಂದಿನ ಕಾಂಪೌಂಡ್‌ ಸಂಪೂರ್ಣಗೊಳಿಸುವ ಜೊತೆಗೆ ಅಗತ್ಯವಿರುವೆಡೆ ಗೇಟನ್ನು ಹಾಕುವಂತೆ ಇಡೀ ವ್ಯವಸ್ಥೆಯನ್ನು ನೋಡಿಕೊಳ್ಳುವಂತಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಒತ್ತಾಸೆಗೆ ಪೂರಕವಾಗಿ ಸೂಚಿಸಿದರು. ಇಲ್ಲಿರುವ ತೆಂಗಿನ ಮರ, ಹುಣಸೆ ಮರ ಸೇರಿದಂತೆ ಉತ್ಪನ್ನ ಕೊಡುವ ಮರಗಳನ್ನು ಕೂಡಲೇ ಹರಾಜು ಕರೆದು ನೀಡುವಂತೆ ಸೂಚಿಸಿದ ಅವರು ವಾರದೊಳಗೆ ಈ ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸಲು ತಿಳಿಸಿದರು. ಎಸ್.ದತ್ತಾತ್ರಿ ಹಾಗೂ ಬಿಜೆಪಿಯ ಹಲವು ಪ್ರಮುಖರು ವಿಶೇಷವಾಗಿ ನಿತ್ಯ ವಾಕಿಂಗ್‌ ಮಾಡುವ, ಸ್ವಚ್ಛತೆ ಮಾಡುವ ಹಿರಿಯ ಸ್ಥಳೀಯ ಪ್ರಮುಖರು ಇದ್ದರು.

ಎಣ್ಣೆ ಹೊಡೆಯುವವರಿಗೆ ಗ್ರಹಚಾರ

ಇಲ್ಲಿನ ಸಭೆ- ಸಮಾರಂಭಗಳನ್ನು ನಡೆಸುವ ಸ್ಥಳಗಳಲ್ಲಿ ನಿತ್ಯರಾತ್ರಿ ಮದ್ಯ ಸೇವಿಸುವ ನಿದರ್ಶನಗಳನ್ನು ಹಾಗೂ ಬಾಟಲಿಗಳ ಸತ್ಯ ದರ್ಶನ ಕಂಡ ಜಿಲ್ಲಾಧಿಕಾರಿಗಳು ಇಲ್ಲಿ ಇಂತಹ ಚಟುವಟಿಕೆಗಳು ನಡೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಅಬಕಾರಿ ಹಾಗೂ ತುರ್ತು ರಕ್ಷಣಾ ಇಲಾಖೆಯ ವ್ಯವಸ್ಥೆಗಳಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.