ಬೆಂಗಳೂರಿನಲ್ಲಿ ರೌಡಿಸಂ ಮಟ್ಟ ಹಾಕಲು ಪೊಲೀಸರಿಗೆ ಸೂಚನೆ: ಆರಗ ಜ್ಞಾನೇಂದ್ರ
Team Udayavani, Aug 21, 2021, 2:44 PM IST
ಶಿವಮೊಗ್ಗ: ಬೆಂಗಳೂರಿನಲ್ಲಿ ರೌಡಿಸಂ ಮಟ್ಟ ಹಾಕಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಿಯಲ್ ಎಸ್ಟೇಟ್, ಮಾದಕ ವಸ್ತುಗಳ ಬಗ್ಗೆ ಕಡಿವಾಣ ಹಾಕಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸೈಬರ್ ಕ್ರೈಮ್ ವಿಭಾಗವನ್ನು ಬಲಪಡಿಸಲಾಗಿದೆ. ಇನ್ಫೋಸಿಸ್ ಸಂಸ್ಥೆ ಕೂಡ ಸೈಬರ್ ಕ್ರೈಮ್ ನಿವಾರಣೆಗೆ ನೆರವು ನೀಡುತ್ತಿದೆ ಎಂದರು.
ಅಫ್ಘಾನಿಸ್ತಾನದ ರಾಜ್ಯದ ನಾಗರಿಕರ ಇರುವ ಬಗ್ಗೆ ಮಾಹಿತಿ ಪಡೆಯಲು ತಿಳಿಸಿದ್ದೇನೆ. ಈಗಾಗಲೇ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ನೇಮಕ ಸಹ ಮಾಡಲಾಗಿದೆ ಎಂದರು.
ಇದನ್ನೂ ಓದಿ:ಕೋವಿಡ್ ನಕಲಿ ವರದಿ ತಂದರೆ ಪ್ರಕರಣ ದಾಖಲಿಸಿ: ಸಚಿವ ಸೋಮಶೇಖರ್
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮರಳು, ಜಲ್ಲಿ ಕ್ವಾರಿಗಳ ಸಮಸ್ಯೆ, 94 ಸಿ ಮೊದಲಾದ ಸಮಸ್ಯೆ ಬಗ್ಗೆ ಸಭೆ ನಡೆಸಿದ್ದೇವೆ. ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕಲ್ಲು ಕ್ವಾರಿಗಳ ಸಮಸ್ಯೆ ಬಗೆಹರಿಸಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಭದ್ರಾವತಿ ಸೇರಿಸಿಕೊಂಡು ಶಿವಮೊಗ್ಗ ಕಮಿಷನರೇಟ್ ಸ್ಥಾಪನೆ ಮಾಡುವ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ