ಪ್ರಧಾನಿ ಮೋದಿಯನ್ನು ಅವಮಾನಿಸುವುದು ಪ್ರಜಾಪ್ರಭುತ್ವವನ್ನು ಅವಮಾನಿಸಿದಂತೆ: ಸಿ.ಟಿ.ರವಿ


Team Udayavani, Nov 22, 2021, 4:15 PM IST

ct-ravi

ಶಿವಮೊಗ್ಗ: ನರೇಂದ್ರ ಮೋದಿಯವರು ಎಂದೂ ಜಾತಿ, ಹಣದ ರಾಜಕಾರಣ ಮಾಡಲಿಲ್ಲ. ಬದಲಿಗೆ ಜನಾದೇಶದ ಮೂಲಕವೇ ಪ್ರಧಾನಿಯಾಗಿದ್ದಾರೆ. ಇಂಥವರನ್ನು ಅಪಮಾನಿಸುವುದು ಪ್ರಜಾಪ್ರಭುತ್ವವನ್ನು ಅವಮಾನಿಸಿದಂತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇದನ್ನು ತಿಳಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಲ್ಲಿ ಮುತ್ಸದಿತನ ಕಾಣುತ್ತಿಲ್ಲ‌ ಎಂದರು.

ಜನಸ್ವರಾಜ್ ಯಾತ್ರೆಯನ್ನು ಜನಬರ್ಬಾದ್ ಯಾತ್ರೆ ಎನ್ನುತ್ತಿದ್ದಾರೆ. ಕೇವಲ ಅಸಂಬಂಧ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನ ಮಂತ್ರಿಯನ್ನು ಹೆಬ್ಬೆಟ್ಟು ಪ್ರಧಾನಿ ಎಂದರು ಈ ಮೂಲಕ ಪ್ರಜಾಪ್ರಭುತ್ವಕ್ಕೆ ಅಗೌರವ ಮಾಡುತ್ತಿದ್ದಾರೆ‌. ಸಿದ್ದರಾಮಯ್ಯ ಅವರ ಹತಾಶೆಯನ್ನು ಅವರ ಹೇಳಿಕೆಗಳು ತೋರಿಸುತ್ತಿವೆ. ಸಿದ್ದರಾಮಯ್ಯ ಅವರು ಆರೋಪ ಮಾಡುತ್ತಾರೆ. ಬಳಿಕ ನಿರ್ದೋಷಿ ಎಂದು ಸಾಬೀತುಪಡಿಸಿ ಎನ್ನುತ್ತಾರೆ. ಇದು ಯಾವ ನ್ಯಾಯ ಎಂದು ಸಿ.ಟಿ.ರವಿ ಹೇಳಿದರು.

ಇದನ್ನೂ ಓದಿ:ಕಾರು ಅಪಘಾತ, ಮಾನವಿಯತೆ ಮೆರೆದ ಸಂಸದ ಪ್ರತಾಪ್ ಸಿಂಹ

ಬಿಟ್ ಕಾಯಿನ್ ಬಗ್ಗೆ ಸಾಕ್ಷಗಳಿದ್ದರೆ ತನಿಖಾ ಸಂಸ್ಥೆಗಳಿಗೆ ನೀಡಿ‌. ಅದನ್ನು ಬಿಟ್ಟು ಕೇವಲ ಆರೋಪ ಮಾಡುತ್ತಿದ್ದರೆ ಅದು ಪ್ರಚಾರಕ್ಕೆ ಮಾಡುತ್ತಿರುವುದು ಎಂಬ ಅಭಿಪ್ರಾಯ ಬರುತ್ತದೆ ಎಂದು ಅವರು ಹೇಳಿದರು.

ಕೃಷಿ ಮಸೂದೆಗಳಲ್ಲಿ ಯಾವ ರೈತ ವಿರೋಧಿ ನೀತಿ ಇತ್ತು ಎಂದು ಅದನ್ನು ವಿರೋಧಿಸಿದವರು ಸ್ಪಷ್ಟಪಡಿಸಲಿ. ಕೆಲವು ರಾಜ್ಯಗಳಲ್ಲಿ ಮನವರಿಕೆ ಮಾಡಲು ಆಗಲಿಲ್ಲ ಹಾಗಾಗಿ ಕೃಷಿ ಮಸೂದೆ ಹಿಂಪಡೆಯಲಾಗಿದೆ. ಮಸೂದೆ ಹಿಂಪಡೆದರೂ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳುತ್ತಿರುವ ಹಿಂದಿನ ಹುನ್ನಾರ ಏನು ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಗೆ ಜನಬೆಂಬಲವೇ ಇಲ್ಲ. ವೇದಿಕೆ ಮೇಲೆ ಕುರ್ಚಿಗಾಗಿಯೇ ಜಗಳವಾಡುತ್ತಾರೆ. ಹೀಗಾಗಿಯೇ ಯಾರೂ ವೇದಿಕೆ ಮೇಲೆ ಕೂರಬಾರದು ಎಂಬ ನಿಯಮವನ್ನು ಕಾಂಗ್ರೆಸ್ ನವರು ತಂದುಕೊಂಡಿದ್ದಾರೆ. ಇದರ ಹಿಂದೆ ಇನ್ನೊಂದು ಕಾರಣವೂ ಇದೆ. ಕೆಲವೊಮ್ಮೆ ಕಾಂಗ್ರೆಸ್ ಕಾರ್ಯಕ್ರಮದ ವೇದಿಕೆ ಮೇಲೆಯೇ ಹೆಚ್ಚುಜನ ಇರುತ್ತಾರೆ. ವೇದಿಕೆ ಕೆಳಗೆ ಜನರೇ ಇರುವುದಿಲ್ಲ. ಹೀಗಾಗಿ ಕಾಂಗ್ರೆಸ್ ಈ ನಿಯಮ ಜಾರಿಗೆ ತಂದುಕೊಂಡಿರಬಹುದು ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.