ಜಯಚಾಮರಾಜೇಂದ್ರ ಆಸ್ಪತ್ರೆಯ ತೀವ್ರ ನಿಗಾ ಘಟಕ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ


Team Udayavani, Aug 9, 2022, 3:56 PM IST

16

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ  ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್‌ಗಳನ್ನು ಅಳವಡಿಸಿಲಾಗಿದ್ದು, ಇವೆರಡನ್ನೂ ಮಂಗಳವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಇದೊಂದು ಸಂತೋಷದ ವಿಚಾರ. ಸಾರ್ವಜನಿಕ ಆಸ್ಪತ್ರೆಯ ಬಹಳ ದೊಡ್ಡ ಪರಿವರ್ತನೆಗೆ ಹಣ ಬಿಡುಗಡೆ ಮಾಡಿಸುವ ಮತ್ತು ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ತೀರ್ಥಹಳ್ಳಿಯಲ್ಲಿ ಜನರಿಗೆ ಸಮಸ್ಯೆ ಆಗುತ್ತಿರುವುದು ಎರಡು ವಿಭಾಗದಲ್ಲಿ, ಒಂದು ತಾಲೂಕು ಕಛೇರಿ, ಇನ್ನೊಂದು ಸರ್ಕಾರಿ ಆಸ್ಪತ್ರೆ. ಇವೆರಡೂ ತಮ್ಮ ವಿಶೇಷ ಆದ್ಯತೆಯಾಗಿದೆ.  ಹಾಗಾಗಿ ಆಸ್ಪತ್ರೆಗೆ ಮತ್ತು ತಾಲೂಕು ಕಛೇರಿಗೆ ಏನೆಲ್ಲಾ ಸೌಲಭ್ಯಗಳು ಬೇಕೋ ಅದನ್ನೆಲ್ಲ ಮಾಡಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಆಸ್ಪತ್ರೆಯ ಸಿಬ್ಬಂದಿಗಳು, ವೈದ್ಯರುಗಳು ಉತ್ತಮವಾಗಿ ಸೇವಾ ಮನೋಭಾವದಿಂದ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಬೇಕಾದ ಸಲಕರಣೆಗಳು ಮತ್ತು ಉಪಕರಣಗಳು ಅವರ ಕೈ ಬಲಪಡಿಸಲು ಅವಶ್ಯಕವಾಗಿದೆ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಸಮಯದಲ್ಲಿ ತುಂಬಾ ತೊಂದರೆ ಆಗಿದೆ. ಆಕ್ಸಿಜನ್ ಪ್ಲಾಂಟಿನ ಕಾಮಗಾರಿ ಪ್ರಾರಂಭವಾಗಿದೆ. ಈ ಆಸ್ಪತ್ರೆಯಲ್ಲಿ ಸೋರದೆ ಇರುವ ಜಾಗವನ್ನು ಹುಡುಕಬೇಕಾಗಿತ್ತು. ಅಂತಹ ಸ್ಥಿತಿಯಲ್ಲಿ ಆಸ್ಪತ್ರೆಯ ಮೇಲ್ಚಾವಣಿಯಿತ್ತು. ತನ್ನ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಇದನ್ನೆಲ್ಲವನ್ನೂ ನೀಗಿಸುತ್ತಿದ್ದೇನೆ ಎಂದು ಹೇಳಿದರು.

ಆಸ್ಪತ್ರೆ ಸ್ವಚ್ಛವಾಗಿರಬೇಕು. ಹಾಗಾಗಿ ಈ ಒಂದು ಸುಸಜ್ಜಿತವಾದ ಮೇಲ್ಛಾವಣಿಯನ್ನು ನಿರ್ಮಿಸಿದ್ದೇವೆ. ಅಷ್ಟೇ ಅಲ್ಲದೆ 1.50 ಕೋಟಿ ವೆಚ್ಚದಲ್ಲಿ 25 ಬೆಡ್‌ನ ಐಸಿಯು ತೀವ್ರ ನಿಗಾ ಘಟಕ ಕೂಡ ಉದ್ಘಾಟನೆ ಮಾಡಲಾಗಿದೆ. ಒಂದು ತಾಲೂಕು ಮಟ್ಟದ ಆಸ್ಪತ್ರೆ ಏನೆಲ್ಲಾ ಸೌಲಭ್ಯಗಳನ್ನು ಹೊಂದಬೇಕೋ ಅದೆಲ್ಲವನ್ನೂ ಈ ತಾಲೂಕಿನ ಆಸ್ಪತ್ರೆ ಹೊಂದಿರಬೇಕು ಎಂಬುದು ನನ್ನ ಆಸೆ ಎಂದರು.

ಬಡವರು, ದಲಿತರು, ಕೂಲಿ ಕಾರ್ಮಿಕರಿಗೆ ತಾಲೂಕು ಸಮಸ್ತ ಜನರಿಗೆ ಅನುಕೂಲವಾಗುವಂತೆ ಏನೆಲ್ಲಾ ಆಗಬೇಕೋ ಅದನ್ನೆಲ್ಲ ನಾನು ಈ ಸ್ಥಾನದಲ್ಲಿ ಇದ್ದಾಗ ಮಾಡುತ್ತಿದ್ದೇನೆ. ಆಸ್ಪತ್ರೆಗೆ ಇನ್ನಷ್ಟು ಸೌಲಭ್ಯಗಳು ಬೇಕಾಗಿದೆ. ಇನ್ನು ಏನೆಲ್ಲಾ ವ್ಯವಸ್ಥೆ ಬೇಕೋ ಅದನ್ನು ಮಾಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇಂದು ಸರ್ಕಾರಿ ಶಾಲೆಗಳು ಅಭಿವೃದ್ಧಿ ಆಗುತ್ತಿದೆ. ಅದೇ ರೀತಿಯಲ್ಲಿ ಸರ್ಕಾರಿ ಆಸ್ಪತ್ರೆಯು ಉತ್ತಮ ದರ್ಜೆಗೇರಿ ಜನರಿಗೆ ಈ ಭರವಸೆ ಮೂಡಬೇಕು. ತಾಯಿ -ಮಕ್ಕಳ ಆಸ್ಪತ್ರೆ ಕೂಡ ತಾಲೂಕಿಗೆ ಬೇಕು ಅದನ್ನು ಮಂಜೂರು ಮಾಡಿಸಲು ನಾನೀಗ ಮುಂದಾಗಿದ್ದೇನೆ ಇದರ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಇನ್ನು ಆಸ್ಪತ್ರೆಯ ಸಿಬ್ಬಂದಿಗೆ ಮತ್ತು ವೈದ್ಯರುಗಳಿಗೆ ಉಳಿದುಕೊಳ್ಳಲು ಸುಸಜ್ಜಿತವಾದ ಕಟ್ಟಡ ನಿರ್ಮಿಸಿ ಕೊಟ್ಟು ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಗಲು ರಾತ್ರಿ ಸೇವೆ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಈಗಾಗಲೇ ತಯಾರಿ ನಡೆಯುತ್ತಿದೆ. ಈ ನಿಟ್ಟನಲ್ಲಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಎಂದರು.

ಕೋವಿಡ್ ಸಂದರ್ಭದಲ್ಲಿ ಹಗಲಿರುಳು ನಿರಂತರ ಶ್ರಮ ಹಾಕಿದ ವೈದ್ಯಾಧಿಕಾರಿಗಳ ತಂಡ, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪ. ಪಂ. ಅಧ್ಯಕ್ಷೆ ಶಬನಂ, ಜಯಪ್ರಕಾಶ್ ಶೆಟ್ಟಿ, ಡಾ. ನಾರಾಯಣ ಸ್ವಾಮಿ, ಡಾ. ಗಣೇಶ ಭಟ್, ಬಾಳೇಬೈಲು ರಾಘವೇಂದ್ರ, ನಾಗರಾಜ್ ಶೆಟ್ಟಿ, ಸಂದೇಶ್ ಜವಳಿ, ಡಾ. ನಟರಾಜ್, ಬಾಳೇಬೈಲು ಸಂತೋಷ್ ಶೆಟ್ಟಿ, ಸಂತೋಷ್ ದೇವಾಡಿಗ, ಪ. ಪಂ. ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.