ಗೂಂಡಾ ರೀತಿ ನಡೆದುಕೊಂಡ ಸಿಎಂ:ಈಶ್ವರಪ್ಪ ಆಕ್ರೋಶ
Team Udayavani, Sep 22, 2018, 6:05 AM IST
ಶಿವಮೊಗ್ಗ: ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿ ನಡೆದುಕೊಳ್ಳದೆ ಗೂಂಡಾ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಜನರು ದಂಗೆ ಏಳಬೇಕಾಗುತ್ತೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿರುವುದನ್ನು ನೋಡಿದರೆ ಗೂಂಡಾ ರಾಜ್ಯ ನಡೀತಾ ಇದೆ ಎಂದು ಆರೋಪಿಸಿದರು.
ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ನಿಮ್ಮ ಶಕ್ತಿ. ಬಿಜೆಪಿಯವರು ಖರೀದಿ ಮಾಡ್ತಾರೆ ಅಂದ್ರೆ ಹೇಗೆ? ಶಾಸಕರನ್ನು ರಕÒಣೆ ಮಾಡುವ ಯೋಗ್ಯತೆ ಇಲ್ಲವೆಂದ ಮೇಲೆ ರಾಜ್ಯದ ಜನರ ರಕÒಣೆ ಹೇಗೆ ಮಾಡ್ತೀರಿ. ಬಿಜೆಪಿ ಶಾಸಕರು ಹುಲಿಗಳಿದ್ದಂತೆ. ಒಬ್ಬರನ್ನಾದರೂ ಮುಟ್ಟಿ ನೋಡೋಣ ಎಂದು ಸವಾಲು ಹಾಕಿದರು.
ದಂಗೆ ಏಳಿ ಎಂದು ಹೇಳಿದ ಮುಖ್ಯಮಂತ್ರಿಗಳನ್ನು ನೋಡಿಲ್ಲ, ಕೇಳಿಲ್ಲ. ಅವರು ಪ್ರಜಾಪ್ರಭುತ್ವದ ಕೊಲೆ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರು ಸುಮೋಟೋ ಕೇಸ್ ಹಾಕಬೇಕಿತ್ತು. ಅವರು ಯಾಕೆ ಬಾಯಿ ಮುಚ್ಚಿಕೊಂಡಿ¨ªಾರೆ? ನಿಮಗೆ ಕುರ್ಚಿನೇ ಬಹಳ ಮುಖ್ಯ ಎಂದರು. ಹುಚ್ಚು ಹಿಡಿದಿರೋದು ಕುಮಾರಸ್ವಾಮಿಗೆ. ಖುರ್ಚಿ ಹೋಗುತ್ತೆ ಅಂತಾ ಹುಚ್ಚು ಹಿಡಿದಿದೆ. ಅವರ ಮೇಲೆ ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು