ಟ್ರಾನ್ಸ್ಫರ್ ದಂಧೆ ಎನ್ನಬಾರದು: ವರ್ಗಾವಣೆ ಸಮರ್ಥಿಸಿಕೊಂಡ ಈಶ್ವರಪ್ಪ
Team Udayavani, Sep 24, 2019, 1:54 PM IST
ಶಿವಮೊಗ್ಗ: ಐಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ದಂಧೆ ಅಂತ ಎಂದು ಕೊಳ್ಳಬಾರದು. ವಿರೋಧ ಪಕ್ಷದಲ್ಲಿ ಇದ್ದಾಗ ನಾವೂ ಅದೇ ಆಪಾದನೆ ಮಾಡಿದ್ದೆವು. ಆಯಾ ಮಂತ್ರಿಗಳು ಅವರಿಗೆ ಬೇಕಾದ ಅಧಿಕಾರಿಗಳನ್ನು ಹಾಕಿಸಿಕೊಳ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಇರುವವರೆಗೂ ಟ್ರಾನ್ಸ್ಫರ್ ಇದ್ದೇ ಇರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಐಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ಸಮರ್ಥಿಸಿಕೊಂಡರು.
ಶಿವಮೊಗ್ಗ ಸಚಿವ ಈಶ್ವರಪ್ಪ ಮಾತನಾಡಿ, ಮೈತ್ರಿ ಹಾಗೂ ಹಿಂದಿನ ಕಾಂಗ್ರೆಸ್ ಸರ್ಕಾರ ಜನರಿಗೆ ಸ್ಪಂದಿಸಿಲ್ಲ ಎನ್ನೋದಕ್ಕೆ ಕಳೆದ ಬಾರಿಯ ಚುನಾವಣಾ ಫಲಿತಾಂಶವೇ ಸಾಕ್ಷಿ. ಮೈತ್ರಿ ಸರ್ಕಾರವನ್ನೇ ತಿರಸ್ಕರಿಸಿ, ಬಿಜೆಪಿಗೆ ಅಧಿಕಾರ ನೀಡಿದ್ದಾರೆ. ನಾನು ಶಾಸಕ ಆಗ್ತಿನಿ, ಸಚಿವನಾಗ್ತಿನಿ, ಉಪ ಮುಖ್ಯಮಂತ್ರಿಯಾಗ್ತಿನಿ ಅಂತಾ ಕನಸಿನಲ್ಲೂ ಯೋಚಿಸಿರಲಿಲ್ಲ. ಗ್ರಾಮೀಣಾಭಿವೃದ್ಧಿಯಂತಹ ದೊಡ್ಡ ಇಲಾಖೆ ನನಗೀಗ ದೊರೆತಿದೆ ಎಂದರು.
ಭಯವಾಗುತ್ತಿದೆ
ಇಲಾಖೆ ಮೂಲಕ ರಾಜ್ಯದ ಜನರಿಗೆ ಯೋಜನೆಗಳ ಮೂಲಕ ಕೊಡುಗೆ ನೀಡಬೇಕೆಂದು ಚರ್ಚಿಸಿದ್ದೇನೆ. ಸಚಿವ, ಉಪಮುಖ್ಯಮಂತ್ರಿ ಆದಾಗಲೂ ನನಗೆ ಹೆಚ್ಚು ಭಯವಾಗಿಲ್ಲ ಆದ್ರೆ, ಈ ಬಾರಿ ಗ್ರಾಮೀಣಾಭಿವೃದ್ಧಿ ಸಚಿವನಾದ ಮೇಲೆ ಭಯವಾಗುತ್ತಿದೆ. ನನ್ನ ಮನೆ, ಕಚೇರಿ, ಬೆಂಗಳೂರು ಮನೆಗೆ ಜನ ಸಾಗರವೇ ಹರಿದು ಬರುತ್ತಿದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬರುತ್ತಿದ್ದಾರೆ. ಜನರ ಸಂಕಷ್ಟಗಳನ್ನು ಸಾಧ್ಯವಾದಷ್ಟು ನಾನು ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ