ಕೇಂದ್ರದಿಂದ ಐಟಿ ಇಲಾಖೆ ದುರ್ಬಳಕೆ: ಆರೋಪ


Team Udayavani, Aug 3, 2017, 3:31 PM IST

03-ANKANA-3.jpg

ಶಿವಮೊಗ್ಗ: ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ನಾಯಕರ ಮನೆ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಬುಧವಾರ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಎಲ್ಲಾ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬ ಉದ್ದೇಶದಿಂದ ಆಪರೇಷನ್‌ ಕಮಲ ಮಾಡುವ ಮೂಲಕ ಹಿಂಬದಿಯಿಂದ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌ ನಾಯಕರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಬಲವಂತ್‌ ಸಿಂಗ್‌ ಇವರ ಆಸ್ತಿ 3 ವರ್ಷಗಳಲ್ಲಿ 300 ಪಟ್ಟು ಹೆಚ್ಚಾಗಿದೆ. ಆದರೂ ಅವರ ಮನೆಗಳ ಮೇಲೆ ಐಟಿ ದಾಳಿ ನಡೆಸದೇ ಕೇವಲ ಕಾಂಗ್ರೆಸ್‌ ನಾಯಕರನ್ನೇ ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ದೂರಿದರು. 

ಇದೀಗ ಗುಜರಾತ್‌ನಲ್ಲಿ ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು, ಅಲ್ಲಿ ಆಪರೇಷನ್‌ ಕಮಲ ಮಾಡುವ ಮೂಲಕ ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಖರೀದಿಸುವಂತಹ ಹೀನ ರಾಜಕಾರಣ ಮಾಡಲಾಗುತ್ತಿದೆ ಎಂದು ದೂರಿದರು. ಬಿಜೆಪಿಯ ಕುದುರೆ ವ್ಯಾಪಾರದಿಂದ ಪಾರಾಗಲು ಕರ್ನಾಟಕಕ್ಕೆ ಬಂದಿರುವ ಗುಜರಾತ್‌ ಶಾಸಕರ ರಕ್ಷಣೆಗೆ ನಿಂತಿರುವ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ ಅವರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ಐಟಿ ಇಲಾಖೆ, ಸಿಬಿಐನಂತಹ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಂಡು ಆ ಇಲಾಖೆಗಳನ್ನು ತಮ್ಮ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ನಾಯಕ ಮನೆಗಳ ಮೇಲೆ ಐಟಿ ದಾಳಿ ನಡೆಸುವ ಪರಿಪಾಠ ಕೂಡಲೇ ನಿಲ್ಲಬೇಕು. ಪ್ರಧಾನಿ ಮೋದಿ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮನಸಿದ್ದರೆ, ಅಕ್ರಮ ಆಸ್ತಿ ಸಂಪಾದಿಸಿರುವ, ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಿಜೆಪಿ ನಾಯಕರ ಮೇಲೆ ಮೊದಲು ದಾಳಿ ನಡೆಸಲಿ. ದ್ವೇಷದ ರಾಜಕಾರಣ ಕೈಬಿಡಬೇಕು ಎಂದು ಒತ್ತಾಯಿಸಿದರು. ಪದೇ ಪದೇ ಕಾಂಗ್ರೆಸ್‌ ನಾಯಕರನ್ನೇ ಟಾರ್ಗೆಟ್‌ ಮಾಡಿ ದಾಳಿ ಮುಂದುವರಿಸಿದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ  ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಜಿ. ಮಧುಸೂದನ್‌, ಶರತ್‌, ವಿನಯ್‌ ತಾಂಡ್ಲೆ, ಸುರೇಶ್‌ ಕುಮಾರ್‌, ಚಂದ್ರಶೇಖರ್‌, ಪ್ರಮುಖರಾದ ಪಿ.ವಿ. ವಿಶ್ವನಾಥ್‌, ಕೆ. ದೇವೇಂದ್ರಪ್ಪ, ರಮೇಶ್‌ ಹೆಗ್ಡೆ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.