ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ಉಚ್ಛಾಟನೆ ಅನಿವಾರ್ಯ: ಹಾಲಪ್ಪ


Team Udayavani, Apr 22, 2022, 3:18 PM IST

10haratalu

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ.

ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು.

ಮೋದಿಯವರು ದೇಶದ ಸಮಗ್ರತೆಗಾಗಿ ಅಹರ್ನಿಶಿ ದುಡಿಯುತ್ತಿದ್ದರೂ ಕೆಲವರು ಪ್ರಶ್ನಿಸುತ್ತಲೇ ಇದ್ದಾರೆ. ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯವಾಗಿದೆ. ನಾವೆಲ್ಲಾ ಭಾರತಾಂಬೆಯ ಮಕ್ಕಳು. ಭಾರತ ದೇಶದಲ್ಲಿರುವ ಎಲ್ಲರೂ ಭಾರತ ಮಾತೆಗೆ ಜೈಕಾರ ಹಾಕಬೇಕು ಎಂದರು.

ರಾಜ್ಯದಲ್ಲಿ ಶೇ. 40 ಕಮಿಷನ್ ಜೋರಾಗಿ ಸದ್ದು ಮಾಡುತ್ತಿದೆ. ವಾಸ್ತವಾಂಶವೆಂದರೆ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಅನುದಾನದಲ್ಲಿ ಶೇ. 24ರಷ್ಟು ಬೇರೆಬೇರೆ ಉದ್ದೇಶಕ್ಕೆ ಸರ್ಕಾರ ಸೆಸ್ ರೂಪದಲ್ಲಿ ಕಡಿತ ಮಾಡುತ್ತದೆ. ಕಾಮಗಾರಿಗೆ ಸಂಬಂಧಪಟ್ಟಂತೆ ಗುತ್ತಿಗೆದಾರ ಹೆಚ್ಚೆಂದರೆ ಶೇ. 10ರಷ್ಟು ಲಾಭ ಪಡೆಯುತ್ತಾನೆ. ಇದು ಜನಸಾಮಾನ್ಯರಿಗೆ ತಿಳಿದಿಲ್ಲ. ಇದರಿಂದಾಗಿ ಕಾಂಗ್ರೆಸ್‌ನವರು ಬಿಂಬಿಸುತ್ತಿರುವ ಶೇ. 40 ಕಮೀಷನ್ ರೆಕ್ಕೆಪುಕ್ಕ ಪಡೆದುಕೊಂಡಿದೆ. ಪಕ್ಷದ ಕಾರ್ಯಕರ್ತರು ಜನರಿಗೆ ವಾಸ್ತವಾಂಶ ತಿಳಿಸುವ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ:ಶಾಂತಿ ಕದಡುವ ಸಂಘಟನೆಗಳನ್ನು ಬ್ಯಾನ್ ಮಾಡಲಿ; ನಮ್ಮ ವಿರೋಧವಿಲ್ಲ: ಸಿದ್ದರಾಮಯ್ಯ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ವಿಕಲಚೇತನ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಪೋಷಕರು ಮತ್ತು ಮಕ್ಕಳ ಹೆಸರಿನಲ್ಲಿ 40 ಸಾವಿರ ರೂ. ಬಾಂಡ್ ನೀಡಲಾಗುತ್ತಿದೆ. ಇದು ಅವರಿಗೆ 50 ಸಾವಿರಕ್ಕೂ ಅಧಿಕವಾಗಿ ಕೈಸೇರುತ್ತದೆ. ವಿಕಲಚೇತನ ಮಕ್ಕಳ ಲಾಲನೆಪಾಲನೆಗೆ ಪೋಷಕರಿಗೆ ಈ ಹಣ ಭವಿಷ್ಯದಲ್ಲಿ ನೆರವಿಗೆ ಬರುತ್ತದೆ. ಜೊತೆಗೆ ವಾಜಪೇಯಿ ವಸತಿ ಯೋಜನೆಯಡಿ 45 ಫಲಾನುಭವಿಗಳಿಗೆ ವಸತಿ ಕಾಮಗಾರಿ ಆರಂಭ ಮಾಡಲು 1.75 ಲಕ್ಷ ರೂ. ಕಾರ್ಯಾದೇಶ ನೀಡಲಾಗಿದೆ ಎಂದರು.

ಪೌರಾಯುಕ್ತ ರಾಜು ಡಿ. ಬಣಕಾರ್, ನಗರಸಭೆ ಉಪಾಧ್ಯಕ್ಷ ವಿ.ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯರಾದ ಮಧುಮಾಲತಿ, ಪ್ರೇಮ ಸಿಂಗ್, ಸುಧಾ ಉದಯ್, ಬಿ.ಎಚ್.ಲಿಂಗರಾಜ್, ಗಣೇಶ್‌ಪ್ರಸಾದ್, ಸವಿತಾ ವಾಸು, ರಾಜೇಂದ್ರ ಪೈ, ಶ್ರೀರಾಮ್, ಸತೀಶ್ ಕೆ., ಆಶ್ರಯ ಸಮಿತಿಯ ಯು.ಎಚ್.ರಾಮಪ್ಪ, ಮಂಜಪ್ಪ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.