ಜಗನ್ನಾಥದಾಸರ ಆರಾಧನಾ ಮಹೋತ್ಸವ


Team Udayavani, Aug 28, 2020, 8:25 PM IST

ಜಗನ್ನಾಥದಾಸರ ಆರಾಧನಾ ಮಹೋತ್ಸವ

ಭದ್ರಾವತಿ: ಹಳೇನಗರದಲ್ಲಿರುವ ಶ್ರೀ ರಾಘವೇಂದ್ರಸ್ವಾಮಿ, ಶ್ರೀ ವಾದಿರಾಜ ಸ್ವಾಮಿಗಳ ಮಠದಲ್ಲಿ ಗುರುವಾರ ಮಾಧ್ವ ಮಂಡಳಿಯಿಂದ ಶ್ರೀ ಜಗನ್ನಾಥದಾಸರ ಆರಾಧನಾ ಮಹೋತ್ಸವವನ್ನು ಆಚರಿಸಲಾಯಿತು.

ಬೆಳಗ್ಗೆ ದೇವರಿಗೆ ಹಾಗೂ ಉಭಯ, ಗುರುಗಳ ವೃಂದಾವನಕ್ಕೆ, ಪ್ರಾಣದೇವರಿಗೆ ಅಭಿಷೇಕ ನಡೆಸಿದ ನಂತರ ಮಠದ ಒಳಾವರಣದ ಪ್ರಾಕಾರದಲ್ಲಿ ಜಗನ್ನಾಥ ದಾಸರ ಭಾವಚಿತ್ರ ಹಿಡಿದು ಉತ್ಸವ ನಡೆಸಲಾಯಿತು.ಪಂಡಿತ ಶ್ರೀನಿಧಿ ಆಚಾರ್‌ ಜಗನ್ನಾಥ ದಾಸರ ಕೃತಿಗಳಲ್ಲಿ ಅಡಗಿರುವ ಸಂದೇಶ ಹಾಗೂ ಮಾಧ್ವ ಸಿದ್ಧಾಂತದ ತತ್ವಾದರ್ಶಗಳ ಕುರಿತಂತೆ ಅವರ ಸಾಹಿತ್ಯದಲ್ಲಿ ಅಡಗಿರುವ ಸಾರದ ಕುರಿತಂತೆ ಪ್ರವಚನ ನೀಡಿದರು.  ಪಂಡಿತ ಗೋಪಾಲಾಚಾರ್‌, ಶ್ರೀನಿವಾಸಾಚಾರ್‌, ಸತ್ಯನಾರಾಯಣಾಚಾರ್‌, ಜಯತೀರ್ಥ, ರಾಘವೇಂದ್ರಾಚಾರ್‌, ರಮಾಕಾಂತ, ಸು ಧೀಂದ್ರ, ವೆಂಕಟೇಶ್‌, ಕೃಷ್ಣಮೂರ್ತಿ, ಗುರುರಾಜ್‌, ವಿಜಯೇಂದ್ರ, ಮುಕುಂದ, ಮುರಳೀಧರ ತಂತ್ರಿ ಮತ್ತಿತರರು ಇದ್ದರು.

………………………………………………………………………………………………………………………………………………

ಜೆಸಿ ಆಸ್ಪತ್ರೆ ದಿನಗೂಲಿ ನೌಕರರಿಗೆ ಸಂಬಳವಿಲ್ಲ: ನೌಕರರ ಆಕ್ರೋಶ : ತೀರ್ಥಹಳ್ಳಿ: ತಾಲೂಕಿನ ಜೆಸಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 22 ಕ್ಕೂ ಹೆಚ್ಚು ದಿನಗೂಲಿ ನೌಕರರಿಗೆ ನಾಲ್ಕು ತಿಂಗಳಿನಿಂದ ಸಂಬಳ ನೀಡದೇ ಹೋಗಿದ್ದರೂ ತಾಲೂಕಿನಲ್ಲಿ ಕೇಳುವವರೇ ಗತಿಯಿಲ್ಲ ಎಂಬ ಆಕ್ರೋಶ ದಿನಗೂಲಿ ನೌಕರರಿಂದ ಕೇಳಿ ಬರುತ್ತಿದೆ. ಜೆಸಿ ಆಸ್ಪತ್ರೆಯಂತೆ ಅನೇಕ ಸರ್ಕಾರಿ ಕಚೇರಿಗಳಲ್ಲಿ ದಿನಗೂಲಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಅದಕ್ಕೆ ಟೆಂಡರ್‌ ಕರೆದು ಏಜೆನ್ಸಿಗಳ ಮೂಲಕ ದಿನಗೂಲಿ ನೌಕರರ ನೇಮಕಾತಿಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಅದೇ ರೀತಿಯಲ್ಲಿ ತಾಲೂಕಿನ ಜೆಸಿ ಆಸ್ಪತ್ರೆಯ ದಿನಗೂಲಿ ನೌಕರರನ್ನು ನೇಮಕ ಮಾಡಲು ಏಜೆನ್ಸಿಯೊಂದು ಟೆಂಡರ್‌ ಹಿಡಿದಿದ್ದು, ಇಲ್ಲಿನ ದಿನಗೂಲಿ ನೌಕರರಿಗೆ ಇದೀಗ ನಾಲ್ಕು ತಿಂಗಳುಗಳಿಂದ ಸಂಬಳವನ್ನೇ ನೀಡಿಲ್ಲ. ಆದರೆ, ಅದೇ ಕೆಲಸವನ್ನು ನಂಬಿ ಬದುಕುತ್ತಿರುವ ಹೆಚ್ಚಿನ ಮಹಿಳೆಯರು ಹಾಗೂ ಪುರುಷರು ತಮ್ಮ ಕೆಲಸವನ್ನು ನಿಲ್ಲಿಸದೆ ಆಸ್ಪತ್ರೆಯ ಸ್ವತ್ಛತಾ ಕಾರ್ಯ, ಅಡುಗೆ ಕೆಲಸ ಹಾಗೂ ಕಚೇರಿಯಲ್ಲಿ ನಿತ್ಯ ಕೆಲಸದಲ್ಲಿ ತೊಡಗಿದ್ದಾರೆ. ಒಂದೊಮ್ಮೆ ತಮಗೆ ಸಂಬಳ ನೀಡುತ್ತಿಲ್ಲ ಎಂದು ಎರಡು ದಿನಗಳ ಕಾಲ ತಮ್ಮ ಕರ್ತವ್ಯ ನಿಲ್ಲಿಸಿ ಪ್ರತಿಭಟನೆಗೆ ಮುಂದಾಗಿದ್ದರೆ ಜೆಸಿ ಆಸ್ಪತ್ರೆಯ ಪರಿಸ್ಥಿತಿ ಹೇಳತೀರದಾಗಿರುತ್ತಿತ್ತು. ಆದರೆ, ತಮಗೆ ಸಂಬಳ ನೀಡದಿದ್ದರೂ ಕೆಲಸವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಟೆಂಡರ್‌ ಹಿಡಿದಾತ ಬೆಂಗಳೂರಿನಲ್ಲಿ ಕುಳಿತುಕೊಂಡು ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಆ ಕಾರಣಕ್ಕಾಗಿ ಸಂಬಳ ನೀಡುತ್ತಿಲ್ಲ, ನಾನೂ ಸಂಕಷ್ಟದಲ್ಲಿದ್ದೇನೆ ಎಂದು ಸಬೂಬು ಹೇಳಿ ಕೊಂಡು ಓಡಾಡುತ್ತಿದ್ದಾನೆಂದು ತಿಳಿದು ಬಂದಿದೆ. ಆದರೆ, ಗುತ್ತಿಗೆ ಹಿಡಿದಾತ ಸರ್ಕಾರ ಹಣ ಬಿಡುಗಡೆ ಮಾಡಲಿ, ಬಿಡಲಿ ತಿಂಗಳ ಸಂಬಳವನ್ನು ಸರಿಯಾದ ಸಮಯಕ್ಕೆ ನೀಡುತ್ತೇನೆಂಬ ಷರತ್ತಿಗೊಳಪಟ್ಟೇ ಟೆಂಡರ್‌ನ್ನು ಗುತ್ತಿಗೆ ಹಿಡಿದಿರುತ್ತಾನೆ. ಅದನ್ನು ಪ್ರಶ್ನಿಸುವ ಅಧಿಕಾರ ಅಧಿ ಕಾರಿ ಹಾಗೂ ಜನಪ್ರತಿನಿಧಿಗಳಿಗೆ ಇದೆ. ಜೆಸಿ ಆಸ್ಪತ್ರೆಯಲ್ಲಿ 22 ಮಂದಿ ದಿನಗೂಲಿ ನೌಕರರು ಕೆಲಸ ನಿರ್ವಹಿಸುತ್ತಿದ್ದು, ಪ್ರತಿಯೊಬ್ಬರ ಬದುಕೂ ಕಷ್ಟಕರವಾಗಿದೆ.ಆದರೆ ಜೆಸಿ ಆಸ್ಪತ್ರೆ ಮುಖ್ಯ ವೈದ್ಯಾ ಕಾರಿಯವರ ಭರವಸೆ ಮೇರೆಗೆ ನಾವೆಲ್ಲರೂ ನಾಲ್ಕು ತಿಂಗಳಿನಿಂದ ಸುಮ್ಮನೆ ಇದ್ದೇವೆ. ಇಂದಲ್ಲ ನಾಳೆಯಾದರೂ ನಮಗೆ ಸಂಬಳ ಕೊಡಿಸುತ್ತಾರೆ ಎನ್ನುವ ಭರವಸೆಯಿಂದ ಇದ್ದೇವೆ ಎಂದು ನೌಕರರೊಬ್ಬರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.