ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ


Team Udayavani, Jun 26, 2021, 3:04 PM IST

ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ

ಶಿವಮೊಗ್ಗ: ಪೆಟ್ರೋಲ್‌, ಡೀಸೆಲ್‌, ವಿದ್ಯುತ್‌, ರಸಗೊಬ್ಬರ ಹಾಗೂ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಜೆಡಿಎಸ್‌ ವತಿಯಿಂದ ಜಿಲ್ಲಾ ಧಿಕಾರಿಗಳಕಚೇರಿ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿಮನವಿ ಸಲ್ಲಿಸಲಾಯಿತು.

ಕೊರೊನಾ ಸೋಂಕಿನ ಮೊದಲ ಹಾಗೂ 2ನೇ ಅಲೆ ನಿಯಂತ್ರಿಸಲು ದೇಶ ಮತ್ತುರಾಜ್ಯಾದ್ಯಂತ ವಿಧಿಸಲಾದ ಲಾಕ್‌ಡೌನ್‌ನಿಂದ ಜನ ಬಳಲುತ್ತಿರುವ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಜನಸಾಮಾನ್ಯರ, ರೈತರ ಮತ್ತು ಕೂಲಿ ಕಾರ್ಮಿಕರ ಹಾಗೂ ದೀನ ದಲಿತರ ಪಾಲಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ.  ತಕ್ಷಣ ಅವಶ್ಯಕ ವಸ್ತುಗಳ ಬೆಲೆ ಇಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಲಾಕ್‌ಡೌನ್‌ನಿಂದ ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ದುಡಿಮೆ ಇಲ್ಲದೆಕಂಗಾಲಾಗಿವೆ. ಕುಟುಂಬದ ಮುಖ್ಯಸ್ಥರು, ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದು, ಇಡೀ ಕುಟುಂಬ ಬೀದಿ ಪಾಲಾಗಿವೆ.ಅಲ್ಲದೇ ಎಷ್ಟೋ ಕುಟುಂಬಗಳಲ್ಲಿ ತಂದೆ-ತಾಯಿ ಮೃತಪಟ್ಟಿದ್ದು, ಎಳೆ ಮಕ್ಕಳುಅನಾಥರಾಗಿದ್ದಾರೆ. ಲಾಕ್‌ಡೌನ್‌ನಿಂದಾಗಿರೈತರು ತಾವು ಬೆಳೆದ ಆಹಾರ ಸಾಮಗ್ರಿ, ತರಕಾರಿ ಮತ್ತು ಹಣ್ಣು ಹಂಪಲು ಕಟಾವು ಮಾಡಿ ಅದನ್ನು ಸಾಗಿಸಲು ಮತ್ತು ಮಾರಾಟ ಮಾಡಲು ವರ್ತಕರಿಗೆ ತಲುಪಿಸಲಾಗದೆ ಫಸಲನ್ನು ಕೊಳೆಯಲು ಬಿಟ್ಟುನಿರ್ಗತಿಕರಾಗಿದ್ದಾರೆ. ಇತಂಹ ಸಮಯದಲ್ಲಿಬೆಲೆ ಏರಿಕೆ ಇವರೆಲ್ಲರ ಜೀವನ ಅಸ್ತವ್ಯಸ್ಥಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತೈಲ ಬೆಲೆ ಏರಿಕೆಯಿಂದ ರಾಜ್ಯದ ಜನ ನರಳುತ್ತಿರುವ ಸಮಯದಲ್ಲಿ ರಾಜ್ಯಸರಕಾರ ವಿದ್ಯುತ್‌ ದರ ಏರಿಕೆ ಮಾಡಿದೆ. ರಾಜ್ಯ ಸರ್ಕಾರ ಈ ನಿರ್ಧಾರವನ್ನು ಪುನರ್‌ ವಿಮರ್ಶಿಸಿ ದರ ಏರಿಕೆ ಹಿಂಪಡೆಯಬೇಕು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮುಖ್ಯಸ್ಥರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅಂತಹ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರಘೋಷಿಸಿದ್ದು, ಇದನ್ನು ಯಾವುದೇ ಷರತ್ತು ಮತ್ತು ತಾರತಮ್ಯವಿಲ್ಲದೇ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಾನಗರಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಮಾಜಿ ಸದಸ್ಯ ಎಚ್‌.ಪಾಲಾಕ್ಷಿ, ಮುಖಂಡರಾದ ಎಚ್‌.ಆರ್‌.ತ್ಯಾಗರಾಜ್‌, ಕೆ.ಸಿದ್ದಪ್ಪ, ರಿಚರ್ಡ್‌ಕ್ವಾಡ್ರಸ್‌, ಎಸ್‌.ಕೆ. ಭಾಸ್ಕರ್‌, ಎಚ್‌.ಕೆ.ಅಬ್ದುಲ್‌ ವಾಜೀದ್‌, ಪರಶುರಾಮ್‌,ಎಸ್‌.ವಿ. ರಾಜಮ್ಮ, ಎಂ.ಎಸ್‌.ಸತೀಶ್‌, ಮಂಜುನಾಥ ನವುಲೆ, ಕವಿತಾ ಶ್ರೀನಿವಾಸ್‌ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.