ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು, ಇಲ್ಲವಾದರೆ ನಾವು ಒಪ್ಪಲ್ಲ: ಕೆ.ಎಸ್.ಈಶ್ವರಪ್ಪ
Team Udayavani, May 27, 2022, 2:33 PM IST
ಶಿವಮೊಗ್ಗ: ರಾಜ್ಯದಲ್ಲಿ ಮತ್ತೆ ಹಿಜಾಬ್ ಸಮಸ್ಯೆ ಸೃಷ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಕೆಲವು ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರ ಮನಸ್ಥಿತಿ ಹಾಗೇ ಇರುವುದರಿಂದ ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳುತ್ತಿಲ್ಲ. ಹೊಂದಿಕೊಳ್ಳಬಾರದೆಂದು ಕೆಲವರು ನಿಶ್ಚಯ ಮಾಡಿದ್ದಾರೆ. ಅಂತವರ ಮನಸ್ಥಿತಿ ಬದಲಾವಣೆಗೆ ಮುಸಲ್ಮಾನರ ಹಿರಿಯರು ಬುದ್ದಿ ಹೇಳಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಭಾರತದ ಸಂಸ್ಕೃತಿಗೆ ತಕ್ಕಂತೆ ಹೊಂದಾಣಿಕೆಯಾಗಬೇಕು. ಆಗದಿದ್ದರೆ ಯಾವ ಕಾರಣಕ್ಕೂ ನಾವು ಒಪ್ಪುವುದಿಲ್ಲ. ಮನಸ್ಥಿತಿ ಒಪ್ಪುವ ದಿಕ್ಕಿನಲ್ಲಿ ಅವರು ಪ್ರಯತ್ನ ಮಾಡಬೇಕು ಎಂದರು.
ಕೋರ್ಟ್, ಸಂವಿಧಾನ, ಸರ್ಕಾರ ಹಾಗೂ ಸರ್ಕಾರದ ಕಾನೂನಿಗೆ ಬೆಲೆ ಕೊಡಬೇಕು. ಈ ಮಣ್ಣಿನ ಪ್ರತಿಯೋಬ್ಬರೂ ಕಾನೂನಿಗೆ ಬೆಲೆ ಕೊಡಬೇಕು. ಮುಸಲ್ಮಾನರು ದೇಶದ ಕಾನೂನು ವಿರುದ್ಧವಾಗಿ ಇರುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ಇರಬೇಕಾದರೇ ಕಾನೂನು, ಸಂವಿಧಾನಕ್ಕೆ ಬೆಲೆ ಕೊಡಬೇಕು ಎಂದು ಈಶ್ವರಪ್ಪ ಹೇಳಿದರು.
ಇದನ್ನೂ ಓದಿ:ನೆಹರುಗೂ ಮೋದಿಗೂ ಆಕಾಶ ಭೂಮಿಗಿರುವ ಅಂತರ : ಸಿದ್ದರಾಮಯ್ಯ
ಹಿಜಾಬ್ ವಿವಾದದ ಹಿಂದೆ ಇರುವ ರಾಷ್ಟ್ರದ್ರೋಹಿಗಳನ್ನು ಹುಡುಕಿ ತೆಗೆಯುತ್ತಿದ್ದೇವೆ. ರಾಷ್ಟ್ರದ್ರೋಹಿಗಳನ್ನು ಗುರುತಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೋಳ್ಳುತ್ತೇವೆ. ಮುಸಲ್ಮಾನ ವಿದ್ಯಾರ್ಥಿಗಳ ಮನಸ್ಸನ್ನು ಸಹ ಪರಿವರ್ತನೆ ಮಾಡುತ್ತೇವೆ. ಈ ರಾಷ್ಟ್ರದ ಪ್ರಜೆಗಳಾಗಿ ಅವರು ಮುಂದುವರೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ಮಾಡುತ್ತದೆ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾರ್ಮಿಕರ ಬದುಕು ಹಸನುಗೊಳಿಸುವ ಪಣ
ಸಾಗರ : 6 ಕೋಟಿ ರೂ. ವೆಚ್ಚದಲ್ಲಿ ಕಾರ್ಮಿಕ ಭವನ ನಿರ್ಮಾಣ : ಹಾಲಪ್ಪ
ಅನಧಿಕೃತ ಸಮಿತಿಯಿಂದ ಮಾರಿಕಾಂಬಾ ದೇವಸ್ಥಾನ ನಿರ್ವಹಣೆ ; ಎಂ.ನಾಗರಾಜ್ ಆರೋಪ
ಕನ್ಹಯ್ಯ ಲಾಲ್ ಹತ್ಯೆ : ಇದು ಹಿಂದೂ ಸಮುದಾಯಕ್ಕೆ ಆದ ಅಪಮಾನ : ಈಶ್ವರಪ್ಪ ಆಕ್ರೋಶದ ನುಡಿ
ಕನ್ನಯ್ಯ ಲಾಲ್ ಹತ್ಯೆ : ತಪ್ಪಿತಸ್ಥರಿಗೆ ಗುಂಡಿನ ಮೂಲಕವೇ ಉತ್ತರ ನೀಡಬೇಕು ; ಬಿಜೆಪಿ ಒತ್ತಾಯ
MUST WATCH
ಹೊಸ ಸೇರ್ಪಡೆ
ಸುಪ್ರೀಂನಲ್ಲೂ ಉದ್ಧವ್ ಗೆ ಮುಖಭಂಗ : ನಾಳೆಯೇ ಬಹುಮತ ಸಾಬೀತಿಗೆ ಸುಪ್ರೀಂ ಮಹತ್ವದ ಆದೇಶ
ಕಲಬುರಗಿ; ಇಬ್ಬರು ಮಕ್ಕಳನ್ನು ಕೊಂದು ಮಕ್ಕಳ ಶವದೊಂದಿಗೆ ರಿಕ್ಷಾದಲ್ಲಿ ತಿರುಗಾಡಿದ ಪಾಪಿ ತಂದೆ
ರಾಷ್ಟ್ರಪತಿ ಚುನಾವಣೆ ಕುರಿತ ಅರ್ಜಿತಿರಸ್ಕರಿಸಿದ ಸುಪ್ರೀಂ ಕೋರ್ಟ್
ಆಸ್ಕರ್ ಸಿನಿಮಾ ಸಮಿತಿಗೆ ತಮಿಳು ನಟ ಸೂರ್ಯ, ಬಾಲಿವುಡ್ ನಟಿ ಕಾಜೋಲ್
ಕುಂಬಳೆ : ಅಪರಿಚಿತರಿಂದ ವಿದ್ಯಾರ್ಥಿನಿಯ ಅಪಹರಣ: ವ್ಯಾನ್ನಿಂದ ಜಿಗಿದು ತಪ್ಪಿಸಿಕೊಂಡ ಬಾಲಕಿ