ಜೆಡಿಎಸ್ ಗೆ ರಸ್ತೆಯಲ್ಲಿ ಹೋಗೋ ನಾಯಿ ಕೂಡ ಹೋಗಲ್ಲ: ಈಶ್ವರಪ್ಪ ವ್ಯಂಗ್ಯ
Team Udayavani, Nov 30, 2022, 12:58 PM IST
ಶಿವಮೊಗ್ಗ: ರಮೇಶ್ ಜಾರಕಿಹೊಳಿಯವರು ಈ ಸರ್ಕಾರ ತಂದವರು. ಅವರು ಯಾಕೆ ಬಿಜೆಪಿ ಬಿಟ್ಟು ಹೋಗ್ತಾರೆ? ಬಿಜೆಪಿ ಬಿಟ್ಟು ಏನು ಇಲ್ಲದಿರುವ ಜೆಡಿಎಸ್ ಗೆ ಯಾಕೆ ಹೋಗುತ್ತಾರೆ? ಇಬ್ರಾಹಿಂಗೆ ಬೇರೆ ಉದ್ಯೋಗವಿಲ್ಲ. ರಸ್ತೆಯಲ್ಲಿ ಹೋಗೋ ನಾಯಿ ಕೂಡ ಹೋಗಲ್ಲ ಎಮದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಾರಕಿಹೊಳಿ ಜೆಡಿಎಸ್ ಸೇರುತ್ತಾರೆಂಬ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಾವ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆ ಉದ್ಭವವಾಗಲ್ಲ. ಇಬ್ರಾಹಿಂ ತಾನಂತೂ ಹೋಗಾಗಿದೆ ಹೀಗಾಗಿ ಏನಾರು ಮಾಡಬೇಕೆಂಬ ಕಾರಣಕ್ಕೆ ಹೇಳಿಕೆ ಕೊಡುತ್ತಾರೆ. ಇದಕ್ಕಾಗಿ ಅವರು ಬರುತ್ತಾರೆ, ಇವರು ಬರುತ್ತಾರೆ ಎನ್ನುತ್ತಿದ್ದಾರೆ. ಎಚ್.ಡಿ. ದೇವೆಗೌಡರು, ಶಿವಕುಮಾರ್ ಯಾರೋ ಹೇಳಿದ್ದರೆ ನಾನು ಏನೂ ಹೇಳುತ್ತಿರಲಿಲ್ಲ. ಇಬ್ರಾಹಿಂ ಅರ್ಥವಿಲ್ಲದ ಮಾತನಾಡ್ತಿದ್ದಾರೆ. ಅವರಿಗೆ ಉತ್ತರ ಕೊಡ್ತಾ ಇದ್ದೇನೆ, ಖಂಡನೆ ಮಾಡುತ್ತೇನೆ ಎಂದರು.
ರೌಡಿ ರಾಜಕೀಯ ವಿಚಾರವಾಗಿ ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಸುಸಂಸ್ಕೃತ ಪಕ್ಷವೋ, ರೌಡಿಗಳ ಪಕ್ಷವೋ ಎನ್ನುವ ಬಗ್ಗೆ ರಾಜ್ಯ ಹಾಗೂ ದೇಶದ ಜನರು ತೀರ್ಮಾನ ಮಾಡಿದ್ದಾರೆ. ಬಿಜೆಪಿ ಸುಸಂಸ್ಕೃತ ಪಕ್ಷ ಎಂದು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ಕೊಟ್ಟಿದ್ದಾರೆ. ಜೊತೆಗೆ ಅನೇಕ ರಾಜ್ಯಗಳಲ್ಲೂ ಕೂಡ ಅಧಿಕಾರವನ್ನು ನೀಡಿದ್ದಾರೆ. ರೌಡಿಗಳ ಪಕ್ಷ ಎಂದು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಉದಾಹರಣೆಗೆ ರಾಜ್ಯದ ಕೆಪಿಸಿಸಿ ಅಧ್ಯಕ್ಷ ಯಾರು? ಮೊನ್ನೆ ತನಕ ತಿಹಾರ್ ಜೈಲಿನಲ್ಲಿದ್ದು ಜಾಮೀನಿನ ಮೇಲೆ ಹೊರಗೆ ಬಂದವರು. ಯಾವ ನಿಮಿಷಕ್ಕೆ ಮತ್ತೆ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ. ಜೈಲಿಗೆ ಹೋಗಿ ಬಂದ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಇದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಸ್ಥಿತಿ ಕೂಡ ಅದೇ. ಬಾರ್ ನಲ್ಲಿ ಕುಡಿದು ಹೊಡೆದಾಡಿ ಪರಪ್ಪನ ಅಗ್ರಹಾರಕ್ಕೆ ಹೋಗಿ ಬಂದಿದ್ದಾನೆ. ಆತನ ಅಧ್ಯಕ್ಷತೆಯಲ್ಲಿ ಯುವ ಕಾಂಗ್ರೆಸ್ ಇದೆ. ಹೀಗಾಗಿ ಯಾವುದು ರೌಡಿಗಳ ಪಕ್ಷ ಎಂದು ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದರು.
ಇದನ್ನೂ ಓದಿ:ಸ್ನೇಹಿತರಿಗೆ ಚಿಕನ್ ಹಾಕದ್ದಕ್ಕೆ ರಾದ್ಧಾಂತ: ಮದುವೆಯನ್ನೇ ರದ್ದು ಮಾಡಿದ ವರ..!
ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಯಾರೇ ಸಚಿವರು ಬರಲಿ, ಮಹಾರಾಷ್ಟ್ರ ಮುಖ್ಯಮಂತ್ರಿಯೇ ಬರಲಿ. ಕರ್ನಾಟಕದ ಒಂದು ಇಂಚು ಭೂಮಿ ಸಹ ಮಹಾರಾಷ್ಟ್ರಕ್ಕೆ ಹೋಗಲ್ಲ. ಮಹಾಜನ್ ವರದಿ ಕೊಟ್ಟು, ಅದರ ಮೂಲಕ ಸಮಸ್ಯೆ ಪರಿಹಾರ ಆಗಿದೆ. ಆದರೂ, ಆಗಾಗ ಗಡಿ ವಿವಾದವನ್ನು ಅಲ್ಲಿಯವರು ಎಬ್ಬಿಸುತ್ತಾರೆ. ಪಕ್ಷಾತೀತವಾಗಿ ಎಲ್ಲರೂ ಒಟ್ಟಾಗಿದ್ದೇವೆ. ಒಂದಿಂಚು ಭೂಮಿ ಕೂಡ ಹೋಗಲ್ಲ ಎಂದರು.
ನಮ್ಮ ಆರೂವರೆ ಕೋಟಿ ಕನ್ನಡಿಗರು ಒಗ್ಗಟ್ಟಾಗಿದ್ದಾರೆ. ಅಲ್ಲಿ ಕುಡಿಯುವುದಕ್ಕೆ ನೀರು ಸಹ ಇಲ್ಲ. ಗಡಿ ಭಾಗದ ಜನ ಕರ್ನಾಟಕಕ್ಕೆ ಸೇರಲು ಬಯಸುತ್ತಿದ್ದಾರೆ. ರಾಜ್ಯದ ಒಂದಿಂಚು ಭೂಮಿಯನ್ನು ಹೊರಗೆ ಕಳುಹಿಸುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ: ಆಕಾಂಕ್ಷಿಗಳಲ್ಲಿ ತಳಮಳ
ಹಿರಿಯ-ಕಿರಿಯ ಶಾಲೆಗಳ ವಿಲೀನ ಹತ್ತಿರದಲ್ಲಿರುವ ಶಾಲೆಗಳನ್ನು ಒಂದೆಡೆ ಸೇರಿಸಿ
ದಾವಣಗೆರೆಯಲ್ಲಿ ಕೇಸರಿ ಮಹಾಸಂಗಮ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ
ರಾಜ್ಯಕ್ಕೆ ಬಂಪರ್: ಬಜೆಟ್ನಲ್ಲಿ ನೈಋತ್ಯ ರೈಲ್ವೇಗೆ 9,200 ಕೋ.ರೂ. ಅನುದಾನ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್