ಸ್ವಾಮೀಜಿಗಳು ಮೀಸಲಾತಿ ಹೋರಾಟಕ್ಕೆ ಮುಂದೆ ಬಂದಿರುವುದು ಸ್ವಾಗತಾರ್ಹ: ಈಶ್ವರಪ್ಪ
Team Udayavani, Feb 22, 2021, 3:32 PM IST
ಶಿವಮೊಗ್ಗ: ಕರ್ನಾಟಕದಲ್ಲಿ ಹಲವು ಸಮಾಜದವರು ಮೀಸಲಾತಿ ಕೇಳುತ್ತಿದ್ದಾರೆ. ಯಾವ ಸಮಾಜಕ್ಕೆ ಅರ್ಹತೆ ಇದೆಯೋ ಅವರಿಗೆ ಮೀಸಲಾತಿ ನೀಡಬೇಕು ಎಂಬುದು ಅಂಬೇಡ್ಕರ್ ಆಶಯವಾಗಿತ್ತು. ಆದರೆ ಇದುವರೆಗೆ ಹಲವು ಸಮಾಜಗಳಿಗೆ ಧ್ವನಿ ಇರಲಿಲ್ಲ. ಇದೀಗ ಸ್ವಾಮೀಜಿಗಳು ಮೀಸಲಾತಿ ಹೋರಾಟಕ್ಕೆ ಮುಂದೆ ಬಂದಿರುವುದು ಸ್ವಾಗತಾರ್ಹ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ನ್ಯಾಯಯುತವಾಗಿ ಮೀಸಲಾತಿ ಸಿಗಬೇಕಿದೆಯೋ ಅವರಿಗೆ ಮೀಸಲಾತಿ ಕೊಡಬೇಕು. ಕರ್ನಾಟಕದಲ್ಲಿ ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ಸಮಿತಿ ಮಾಡಲಾಗುವುದು. ಆ ಸಮಿತಿ ನೀಡುವ ವರದಿ ಆಧರಿಸಿ ಮೀಸಲಾತಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅರ್ಹತೆಗೆ ತಕ್ಕಂತೆ ಆಯಾ ಜಾತಿಗಳಿಗೆ ಮೀಸಲಾತಿ ನೀಡಲಾಗುವುದು ಹಲವು ಸಮಾಜಗಳ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದೆ. ಕುಲಶಾಸ್ತ್ರ ಅಧ್ಯಯನದ ವರದಿ ಬರಬೇಕು. ವರದಿ ಬರಲು ಸಾಕಷ್ಟು ಕಾಲಾವಕಾಶ ಬೇಕು. ಈ ವರದಿ ಬಂದ ಬಳಿಕ ಮೀಸಲಾತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರಪ್ಪ ಹೇಳಿದರು.
ಯತ್ನಾಳ್ ಹಿಂದುತ್ವವಾದದ ಖುಷಿಯಿದೆ: ಶಾಸಕ ಯತ್ನಾಳ್ ಬಗ್ಗೆ ಬಿಜೆಪಿ ರಾಜ್ಯ ಸಮಿತಿಯಿಂದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಕೇಂದ್ರ ನಾಯಕರು ಯತ್ನಾಳ್ ಅವರಿಗೆ ನೊಟೀಸ್ ನೀಡಿದ್ದಾರೆ. ಇದಕ್ಕೆ ಯತ್ನಾಳ್ ಉತ್ತರವನ್ನೂ ನೀಡಿದ್ದಾರೆ. ಯತ್ನಾಳ್ ಪ್ರಖರ ಹಿಂದುತ್ವವಾದಿ ಈ ಬಗ್ಗೆ ಖುಷಿ ನನಗಿದೆ. ಆದರೆ ಪಕ್ಷ ಶಿಸ್ತಿನ ಒಳಗೇ ಅವರಿದ್ದರೆ ಒಳ್ಳೆಯದು ಎಂಬ ಸಲಹೆ ಅವರಿಗೆ ನೀಡುತ್ತೇನೆ ಎಂದರು.
ಇದನ್ನೂ ಓದಿ:ಹಿಂದಿನ ಸರ್ಕಾರಗಳು ಅಸ್ಸಾಂ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿವೆ: ಪ್ರಧಾನಿ ಮೋದಿ
ಮುಖ್ಯಮಂತ್ರಿ ಮತ್ತು ವಿಜಯೇಂದ್ರ ಬಗ್ಗೆ ಯತ್ನಾಳ್ ದೂರು ನೀಡಿದ್ದಾರೆ. ಯತ್ನಾಳ್ ಬಳಿ ಸಾಕ್ಷಿ ಏನಿದೆಯೋ ನೋಡೋಣ. ಕೇಂದ್ರ ನಾಯಕರಿಗೆ ಸಾಕ್ಷಿ ಸಹಿತ ಹೈಕಮಾಂಡ್ ಗೆ ಹನ್ನೊಂದು ಪುಟದ ಉತ್ತರ ನೀಡಿದ್ದೇನೆ ಎಂದಿದ್ದಾರೆ. ಇವರ ಉತ್ತರ ನೋಡಿ ಹೈಕಮಾಂಡ್ ಕ್ರಮ ಕೈಗೊಳ್ಳಲಿದೆ ಎಂದರು.
ಉಪ್ಪು ತಿಂದವರು ನೀರು ಕುಡಿಯುತ್ತಾರೆ: ಐಎಂಎ ಪ್ರಕರಣದ ಬಗ್ಗೆ ನಾನು ರಾಜಕೀಯವಾಗಿ ತೆಗೆದುಕೊಳ್ಳುವುದಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿಯವರ ಬಗ್ಗೆ ಸಿಬಿಐ ಸ್ಪಷ್ಟಪಡಿಸಿದೆ. ಆರ್.ವಿ.ದೇಶಪಾಂಡೆ, ಪರಮೇಶ್ವರ್ ಗೂ ಐಎಂಎನಿಂದ ಹಣ ಬಂದಿದೆ ಎಂಬ ಆರೋಪ ಇದೆ. ಇಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಇವರೆಲ್ಲರೂ ಆರೋಪದಿಂದ ಮುಕ್ತರಾಗಲಿ ಎಂದು ಆಶಿಸುತ್ತೇನೆ. ಒಂದು ವೇಳೆ ತಪ್ಪು ಮಾಡಿದ್ದರೆ ಉಪ್ಪು ತಿಂದವರು ನೀರು ಕುಡಿಯುತ್ತಾರೆ ಅಷ್ಟೇ ಎಂದು ಈಶ್ವರಪ್ಪ ಹೇಳಿದರು.
ಇದನ್ನೂ ಓದಿ: ಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರ್, ಸಿಬ್ಬಂದಿ ಡಾನ್ಸ್
ಹುಣಸೋಡು ಸ್ಫೋಟ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಪ್ರಕರಣದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಕುರಿತು ಮಾಹಿತಿ ಪಡೆಯಲು ತನಿಖಾಧಿಕಾರಿಗಳು ಜಿಲ್ಲಾಧಿಕಾರಿಯನ್ನು ಕರೆದಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್