ಪೌರತ್ವ ವಿಷಯದಲ್ಲಿ ಒಂದು ಸಮುದಾಯವನ್ನು ಗುರಿ ಮಾಡುವುದು ಸರಿಯಲ್ಲ: ಕೆ.ಎಸ್.ಈಶ್ವರಪ್ಪ
Team Udayavani, Jan 8, 2020, 2:12 PM IST
ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಚರ್ಚೆ ನಡೆಯಲಿದೆ. ಆದರೆ ಈ ವಿಷಯದಲ್ಲಿ ಯಾವುದೇ ಒಂದು ಸಮುದಾಯವನ್ನು ವೈಯಕ್ತಿಕವಾಗಿ ಗುರಿಯಾಗಿಟ್ಟುಕೊಂಡು ಮಾತನಾಡುವುದು ಸರಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಹೀಗೆ ಯಾವುದೇ ಒಂದು ಸಮುದಾಯವನ್ನು ವೈಯಕ್ತಿಕವಾಗಿ ಗುರಿಯಾಗಿಟ್ಟುಕೊಂಡು ಮಾತನಾಡುವುದರಿಂದ ಪ್ರಜಾಪ್ರಭುತ್ವದ ಆರೋಗ್ಯ ಹಾಳಾಗುತ್ತದೆ ಎಂದರು.
ಪೌರತ್ವ ಕಾಯಿದೆಗೆ ಈಗಾಗಲೇ ಲೋಕಸಭಾ, ರಾಜ್ಯಸಭಾದಲ್ಲಿ ಅನುಮೋದನೆ ಪಡೆದು ರಾಷ್ಟ್ರಪತಿ ಅಂಕಿತ ಬಿದ್ದಿದ್ದು ಈಗ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಭಾರತ ಬಂದ್ ಸಹ ಸಿಎಎ ಹಾಗೂ ಕೇಂದ್ರ ಸರ್ಕಾರದ ವಿರುದ್ಧದ ಒಂದು ಪ್ರಯತ್ನ ಎಂದರು.
ನಾನು ಯಾವುದೇ ಕಾರಣಕ್ಕೂ ಮತ್ತೆ ಡಿಸಿಎಂ ಆಗುವುದಿಲ್ಲ. ಅನೇಕರು ಈ ಹುದ್ದೆ ಬಯಸಿದ್ದಾರೆ. ಜೊತೆಗೆ ನಾನು ಈ ಮೊದಲೇ ಡಿಸಿಎಂ ಆಗಿದ್ದೇನೆ ಎಂದರು.
ಬಿಜೆಪಿಯಿಂದ ಕೆಲ ಶಾಸಕರು ಹೊರಬರಲಿದ್ದಾರೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಮೊದಲು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ. ಏಕೆಂದರೆ ನಮಗೆ ಈಗಾಗಲೇ ಶಾಸರು ಹೆಚ್ಚಾಗಿ ಓವರ್ ಲೋಡ್ ಆಗಿದೆ. ನಮ್ಮ ಎಲ್ಲಾ ಶಾಸಕರು ಹುಲಿಗಳಿದ್ದಂತೆ. ಅವರನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು