Shivamogga: ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ : ಈಶ್ವರಪ್ಪ ಕಿಡಿ


Team Udayavani, Sep 20, 2023, 1:06 PM IST

Shivamogga: ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ : ಈಶ್ವರಪ್ಪ ಕಿಡಿ

ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಂದಿನಿಂದ ಇಂದಿನವರೆಗೆ ಗುಂಪುಗಾರಿಕೆ, ಅವ್ಯವಹಾರ, ವರ್ಗಾವಣೆ ದಂಧೆಗಳೇ ಕಾಂಗ್ರೆಸ್ ಪಕ್ಷದ ನೂರು ದಿನಗಳ ಸಾಧನೆಯಾಗಿದ್ದು ಬೇರೆ ಅಭಿವೃದ್ಧಿ ಕಾರ್ಯಗಳು ಯಾವುದೂ ನಡೆಯಲಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮಾಧ್ಯಮದವರ ಜೊತೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು ಡಿಕೆಶಿ ಓರ್ವ ನೀರಿನ ಕಳ್ಳ, ನಮ್ಮ ರಾಜ್ಯದ ರೈತರಿಗೆ ದ್ರೋಹ ಮಾಡಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ, ನಮ್ಮ ರಾಜ್ಯದ ರೈತರಿಗೆ ಮೋಸ ಮಾಡಿದ್ದಾರೆ, ಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ ಎಂದು ಆರೋಪಿಸಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಅದರಾಚೆಗೆ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನ ಚೇಲಾಗಳು ಡಿಕೆಶಿಗೆ ಅವಮಾನ ಮಾಡಲೆಂದೇ ಮೂರು ಡಿಸಿಎಂಗಳ ಬೇಡಿಕೆ ಇಟ್ಡಿದ್ದಾರೆ, ಮೂರು ಡಿಸಿಎಂಗೆ ಹೋಗುತ್ತದೋ, ಐದು ಡಿಸಿಎಂ ಗೆ ಹೋಗುತ್ತದೋ ಗೊತ್ತಿಲ್ಲ, ಕಾಂಗ್ರೆಸ್ ನ ಗುಂಪುಗಾರಿಕೆಯೇ ಅವರ 100 ದಿನದ ಸಾಧನೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯವರೆಗೆ ಈ ಸರಕಾರ ಇರುತ್ತದೋ ಇಲ್ಲವೋ ಗೊತ್ತಿಲ್ಲ, ಗುಂಪುಗಾರಿಕೆ, ಅವ್ಯವಹಾರ, ವರ್ಗಾವಣೆ ದಂಧೆ ನಡೆಯುತ್ತಿದೆ ನಮ್ಮ ಸರಕಾರ ಇದ್ದಾಗ 40% ಸರಕಾರ ಅಂತಿದ್ದರು ಆದರೆ ಯಾವುದೇ ಒಬ್ಬ ಒಂದೇ ಒಂದು ಸಾಕ್ಷಿ‌ ಕೊಡಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ನಂತರ ಭ್ರಷ್ಟಾಚಾರ ನಡೆಯುತ್ತಿದೆ, ಒಬ್ಬೊಬ್ಬ ಅಧಿಕಾರಿಯಿಂದಲೂ‌ ಲಂಚ ಪಡೆಯುತ್ತಿದ್ದಾರೆ ಇದನ್ನು ಅವರ ಪಕ್ಷದ ಶಾಸಕರೇ ಆರೋಪ ಮಾಡುತ್ತಿದ್ದಾರೆ. 40% ಕ್ಕಿಂತ ಹೆಚ್ಚಿನ ಲಂಚವನ್ನು ಸಿದ್ದರಾಮಯ್ಯ, ಅವರ ಮಗ ಯತೀಂದ್ರ ಪಡೆಯುತ್ತಿದ್ದಾರೆ. ಈ ಬಗ್ಗೆ ಬೇಕಾದರೆ ನಾನು‌ ಸಾಕ್ಷಿ ಒದಗಿಸುತ್ತೇನೆ, ನಿವೃತ್ತ ನ್ಯಾಯಾಧೀಶರು ಅಥವಾ ಹಾಲಿ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸವಾಲ್ ಹಾಕಿದರು.

ವರ್ಗಾವಣೆ ದಂಧೆಯಲ್ಲಿ ಸಿದ್ದರಾಮಯ್ಯ, ಯತೀಂದ್ರ ಲೂಟಿ ಮಾಡ್ತಿದ್ದಾರೆ. ನ್ಯಾಯಾಧೀಶರ ನೇಮಕ ಮಾಡಿದ್ರೆ ನಾನೇ 25 ಕ್ಕೂ ಹೆಚ್ಚು ಅಧಿಕಾರಿಗಳನ್ನು ಕರೆದುಕೊಂಡು ಹೋಗ್ತೀನಿ, ಅಧಿಕಾರಿಗಳು ಮುಂದೆ ಬಂದು ಹೇಳಲು ಹೆದರುತ್ತಿದ್ದಾರೆ ಎಂದರು.

ಚೈತ್ರಾ ಕುಂದಾಪುರ ಪ್ರಕರಣ ವಿಚಾರವಾಗಿ ಹೇಳಿಕೆ ನೀಡಿದ ಅವರು ಹಿಂದು ಸಂಘಟನೆ ಹೆಸರು ಹೇಳಿಕೊಂಡು ಅಲ್ಲೊಬ್ಬರು ಇಲ್ಲೊಬ್ವರು ಇಂತಹ ಕೆಲಸ ಮಾಡುತ್ತಾ ಇದ್ದಾರೆ ಬಿಜೆಪಿಗೂ ಇದಕ್ಕೂ ಯಾವ ಸಂಬಂಧ ಇಲ್ಲ, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಲಿ ಎಂದು ಹೇಳಿದರು.

ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಆಗುತ್ತಿಲ್ಲ, ಒಂದು ಬುಟ್ಟಿ ಮಣ್ಣು ರಸ್ತೆಗೆ ಬಿದ್ದಿಲ್ಲ, ಪ್ರತಿ ಕ್ಷೇತ್ರಕ್ಕೆ 2 ಕೋಟಿ ರೂ ಕೊಡ್ತೀವಿ ಅಂದಿದ್ರು 50 ಲಕ್ಷ ರೂ ಬಿಡುಗಡೆ ಮಾಡುವುದಾಗಿ ಆದೇಶ ಕೊಟ್ಟಿದ್ದಾರೆ. ಅಭಿವೃದ್ಧಿ ಕಾರ್ಯ ನಡೆಯದಿದ್ದರೆ ಹೋರಾಟ ಅನಿವಾರ್ಯ ಎಂದು ಹೇಳಿದರು.

ಸ್ಮಾರ್ಟ್ ಸಿಟಿ, ಏರ್ಪೋರ್ಟ್ ಕಾಮಗಾರಿ ತನಿಖೆ ವಿಚಾರ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಕಾಮಗಾರಿ ಕುರಿತು ಸಿಬಿಐ ತನಿಖೆ ನಡೆಸಲಿ, ತನಿಖಾಧಾರಿ ನೇಮಕ‌ಮಾಡಿ, ಮೂರು ತಿಂಗಳಲ್ಲಿ ವರದಿ ತರಲಿ ಎಂದು ಹೇಳಿದರು, ಬರೇ ಲೂಟಿಯಾಗಿದೆ ಅಂತ ಹೇಳೋದು ಯಾಕೆ ಸ್ವತಃ ಸಚಿವ ಎಂ‌ಬಿ‌ ಪಾಟೀಲರೇ ಏರ್ಪೋರ್ಟ್ ಕಾಮಗಾರಿ ಬಗ್ಗೆ ಪ್ರಶಂಶೆ ವ್ಯಕ್ತಪಡಿಸಿದ್ದಾರೆ ಒಂದು ವೇಳೆ ಅವ್ಯವಹಾರ ನಡೆದಿದೆ ಎಂದಿದ್ದರೆ ಅವತ್ತೇ ಮಧು ಬಂಗಾರಪ್ಪ ಹೇಳಬಹುದಿತ್ತಲ್ಲ ಅಧಿಕಾರಿಗಳನ್ನು ಹೆದರಿಸಲು ಈ ತಂತ್ರವೇ ಎಂದು ಕಿಡಿಕಾರಿದರು.

ಇದನ್ನೂ ಓದಿ: Dinesh Gundu Rao: ತಂಬಾಕು ನಿಷೇಧ ಕಾಯಿದೆ ತಿದ್ದುಪಡಿಗೆ ಚಿಂತನೆ: ದಿನೇಶ್ ಗುಂಡೂರಾವ್

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.