ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂದು ಉಪಚುನಾವಣೆ ಬಳಿಕ ತಿಳಿಯಲಿದೆ: ಈಶ್ವರಪ್ಪ
Team Udayavani, Apr 14, 2021, 3:07 PM IST
ಶಿವಮೊಗ್ಗ: ರಾಹುಲ್ ಗಾಂಧಿ ಚುನಾವಣೆ ಸಂದರ್ಭದಲ್ಲಿ ಎಲ್ಲೆಲ್ಲಿ ಕಾಲಿಟ್ಟಿದ್ದಾರೋ ಅಲ್ಲೆಲ್ಲಾ ಕಾಂಗ್ರೆಸ್ ಗೆ ಸೋಲಾಗಿದೆ. ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿ ರಾಜ್ಯದ ಎಲ್ಲಾ ಕಡೆ ಪ್ರಚಾರ ಮಾಡಿದರು, ಆದರೆ ರಾಜ್ಯದಲ್ಲಿ 25 ಕಡೆ ಬಿಜೆಪಿ ಗೆಲುವು ಸಾಧಿಸಿತು. ಕಳೆದ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇತ್ತು, ಆದರೂ ಸೋಲು ಅನುಭವಿಸಿತ್ತು. ರಾಹುಲ್ ಗಾಂಧಿ ಸಿಂಹ ಎಂಬ ಮಾತು ಹೇಳಿದ್ದಾರೆ. ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂಬುದು ಉಪ ಚುನಾವಣೆ ಫಲಿತಾಂಶ ಬಂದ ನಂತರ ತಿಳಿಯಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಕಂಡರೆ ಬಿಜೆಪಿಯವರಿಗೆ ಭಯ ಖರ್ಗೆ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದರು.
ಇದನ್ನೂ ಓದಿ:ಸಿ ಬಿ ಎಸ್ ಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದು/ಮುಂದೂಡಿದ್ದು ಸ್ವಾಗತಾರ್ಹ : ಕೇಜ್ರಿವಾಲ್
ರಾಹುಲ್ ಗಾಂಧಿ ಅವರು ಅವರ ಕ್ಷೇತ್ರ ಬಿಟ್ಟು ಕೇರಳಕ್ಕೆ ಏಕೆ ಓಡಿ ಹೋದರೆಂದು ಖರ್ಗೆ ಮೊದಲು ಹೇಳಬೇಕು. ಅವರಪ್ಪ, ಅವರಮ್ಮ, ಅವರಜ್ಜಿ, ಅವರು ಎಲ್ಲರೂ ಕೂಡಾ ಉತ್ತರ ಪ್ರದೇಶದಲ್ಲಿ ಸ್ಪರ್ಧೆ ಮಾಡಿ ಗೆಲ್ಲುತ್ತಿದ್ದರು. ಆದರೆ ರಾಹುಲ್ ಯಾಕೆ ಅಲ್ಲಿ ಬಿಟ್ಟು ಕೇರಳಕ್ಕೆ ಓಡಿ ಹೋದರು ಎಂದು ಪ್ರಶ್ನಿಸಿದರು.
ಎಲೆಕ್ಷನ್ ಎಂದರೆ ಬಿಜೆಪಿ ಗೆಲುವು ಎಂದರ್ಥ. ಇತ್ತೀಚಿನ ದಿನಗಳಲ್ಲಿ ನಡೆದ ಯಾವುದೇ ಚುನಾವಣೆಯಲ್ಲಿ ಬಿಜೆಪಿ ಹಿಂದೆ ಬಿದ್ದಿಲ್ಲ. ಬೆಳಗಾವಿ ನಮ್ಮದೇ ಕ್ಷೇತ್ರ. ಸುರೇಶ್ ಅಂಗಡಿ ನಿಧನದ ನಂತರ ಚುನಾವಣೆ ಎದುರಾಗಿದೆ. ಸಂಘಟಿತವಾಗಿ, ಸಂಘಟನಾತ್ಮಕವಾಗಿ ಬೂತ್ ಮಟ್ಟದಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳು ಕೈ ಹಿಡಿಯುತ್ತವೆ ಎಂದರು.
ಇದನ್ನೂ ಓದಿ: ಜಗದೀಶ್ ಶೆಟ್ಟರ್ ಗೆ ಮಾತನಾಡುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ: ಸತೀಶ್ ಜಾರಕಿಹೊಳಿ
ಸುರೇಶ್ ಅಂಗಡಿ ಗ್ರಾಮೀಣ ಮಟ್ಟದಲ್ಲಿ ಒಂದೊಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ಬೆಳಗಾವಿಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಕಾಂಗ್ರೆಸ್, ಜೆಡಿಎಸ್ ಅಬ್ಬರ ಮಾಡುತ್ತಿದ್ದಾರೆ. ಏನೇ ಅಬ್ಬರ ಮಾಡಿದರೂ ಸಹ ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ