ಕುರುಬ ಸಮಾವೇಶಕ್ಕೆ ಬಂದ ಜನ ನೋಡಿದ ಸಿದ್ದರಾಮಯ್ಯಗೆ ಕಿರಿಕಿರಿಯಾಗಿದೆ: ಈಶ್ವರಪ್ಪ ವಾಗ್ದಾಳಿ
Team Udayavani, Feb 11, 2021, 12:51 PM IST
ಶಿವಮೊಗ್ಗ: ತಾನಿಲ್ಲದೆ ಸಮಾವೇಶದಲ್ಲಿ ಲಕ್ಷಾಂತರ ಕುರುಬರು ಸೇರುತ್ತಾರೆಂಬ ಕಲ್ಪನೆ ಸಿದ್ದರಾಮಯ್ಯಗೆ ಇರಲಿಲ್ಲ. ಮೊನ್ನೆ ಬೆಂಗಳೂರಿನಲ್ಲಿ ಕುರುಬರ ಎಸ್ ಟಿ ಮೀಸಲಾತಿ ಹೋರಾಟ ಸಮಾವೇಶ ಯಶಸ್ವಿಯಾಗಿದ್ದು ಸಿದ್ದರಾಮಯ್ಯನವರಿಗೆ ಕಿರಿಕಿರಿ ಉಂಟುಮಾಡಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಗೆನೆಲೆಯ ಇಬ್ಬರು ಜಗದ್ಗುರುಗಳು ಸಿದ್ದರಾಮಯ್ಯನವರ ಮನೆಗೆ ಹೋಗಿ ಹೋರಾಟಕ್ಕೆ ಆಹ್ವಾನಿಸಿದ್ದರು. ನಾನು ಹೋರಾಟ ಬರುವುದಿಲ್ಲ ನೀವು ಮಾಡಿ ಎಂದಿದ್ದರು. ಅವತ್ತು ಯಾಕೆ ಕುಲಶಾಸ್ತ್ರ ಅಧ್ಯಯನದ ಬಳಿಕ ಹೋರಾಟ ಮಾಡೋಣ ಎಂದು ಸಿದ್ದರಾಮಯ್ಯ ಹೇಳಲಿಲ್ಲ ಎಂದು ಈಶ್ವರಪ್ಪ ಪ್ರಶ್ನಿಸಿದರು.
ಇದನ್ನೂ ಓದಿ:“ಹೂ ಈಸ್ ಈಶ್ವರಪ್ಪ, ಐ ಡೋಂಟ್ ಕೇರ್ ಈಶ್ವರಪ್ಪ”: ತಿರುಗೇಟು ನೀಡಿದ ಸಿದ್ದರಾಮಯ್ಯ
ಪಾದಯಾತ್ರೆ ಬೇಡ, ಸಮಾವೇಶ ಬೇಕಿತ್ತಾ? ಆರ್ ಎಸ್ಎಸ್ ಹಣ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲಾ ಜಗದ್ಗುರುಗಳೇ ಉತ್ತರ ನೀಡಿದ್ದಾರೆ. ತಮ್ಮನ್ನು ಬಿಟ್ಟು ನಡೆದ ಕುರುಬರ ಸಮಾವೇಶದ ಬಗ್ಗೆ ಸಂತೋಷ ಪಡುವ ಬದಲು ರಾಜಕೀಯವಾಗಿ ತಮ್ಮನ್ನು ಬಿಟ್ಟು ಕುರುಬರು ಸೇರಿದ್ದಕ್ಕೆ ಮಾತನಾಡುತ್ತಾರೆ ಎಂದು ಟೀಕಿಸಿದರು.
ಸಂವಿಧಾನ ಬದ್ದವಾಗಿ ಎಲ್ಲಾ ಸಮಾಜಗಳಿಗೂ ಮೀಸಲಾತಿ ಇರಬೇಕು. ಯಾವುದೇ ಸಮಾಜದ ಮೀಸಲಾತಿ ಕಿತ್ತುಕೊಂಡು ಕೊಡಲು ಆಗುವುದಿಲ್ಲ. ಯಾವುದೇ ಎಸ್ ಟಿ, ಎಸ್ ಸಿ ಜನಾಂಗಕ್ಕೆ ತೊಂದರೆಯಾಗದಂತೆ ಮೀಸಲಾತಿ ತೀರ್ಮಾನ ಆಗುತ್ತದೆ ಎಂದ ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!